AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆಯಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಆರೋಪ; ಹಿಂದೂ ಸಂಘಟನೆಗಳಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಮಾಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯ ಕಾರ್ಯಕ್ರಮದ ಆರಂಭದಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಘಟನೆ ನಡೆದಿದ್ದು, ಯೇಸುವಿನ ಗೀತೆ ಹಾಡಿಸಿದ ಶಾಲೆ ಶಿಕ್ಷಕನನ್ನು ಕೂಡಲೇ ಅಮಾನತುಗೊಳಿಸಬೇಕಾಗಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ.

ಸರ್ಕಾರಿ ಶಾಲೆಯಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಆರೋಪ; ಹಿಂದೂ ಸಂಘಟನೆಗಳಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ
ಸರ್ಕಾರಿ ಶಾಲೆಯಲ್ಲಿ ಯೇಸುವಿನ ಪ್ರಾರ್ಥನೆ; ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
Basavaraj Yaraganavi
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 18, 2024 | 5:49 PM

Share

ಶಿವಮೊಗ್ಗ, ಸೆ.18: ಪ್ರತಿಭಾ ಕಾರಂಜಿ ಕಾರ್ಯಕ್ರಮದ ಆರಂಭದಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಮಾಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಕಳೆದ 13 ರಂದು ಮಾಸೂರು ಪ್ರೌಢಶಾಲೆಯಲ್ಲಿ ನಡೆದಿದ್ದ ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನಾ ಗೀತೆಯಾಗಿ ಯೇಸುವಿನ ಗೀತೆ ಹಾಡಿಸಿದ ಆರೋಪ ಶಾಲೆಯ ವಿಜ್ಞಾನ ಶಿಕ್ಷಕ ಫ್ರಾಂಕಿ ಫ್ರಾನ್ಸಿಸ್ ವಿರುದ್ದ ಕೇಳಿ ಬಂದಿದೆ.

ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಇದೀಗ ಯೇಸುವಿನ ಗೀತೆ ಹಾಡಿಸಿದ್ದಕ್ಕೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಆಕ್ಷೇಪ ವ್ಯಕ್ತಪಡಿಸಿದ್ದು, ಶಾಲೆಯಲ್ಲಿ ಒಬ್ಬನೇ ಒಬ್ಬ ಕ್ರಿಶ್ಚಿಯನ್ ವಿದ್ಯಾರ್ಥಿ ಇಲ್ಲ, ಹೀಗಿರುವಾಗ ಯೇಸುವಿನ ಗೀತೆ ಏಕೆ ಹಾಡಿಸಿದರು ಎಂದು ಪ್ರಶ್ನಿಸಲಾಗಿದೆ. ಇನ್ನು ಈ ಘಟನೆ ಮೂಲಕ ಹಿಂದುಗಳ ಭಾವನೆಗೆ ಶಿಕ್ಷಕ ಧಕ್ಕೆ ಉಂಟು ಮಾಡಿದ್ದಾರೆ. ಈ ಕೂಡಲೇ ಶಿಕ್ಷಕನನ್ನು ಅಮಾನತು ಮಾಡುವಂತೆ ಆಗ್ರಹಿಸಿ ಸಾಗರದ ಬಿಇಒ ಕಚೇರಿ ಎದುರು ವಿ ಹೆಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

ಇದನ್ನೂ ಓದಿ:ತಮಿಳುನಾಡಿನ ಸರ್ಕಾರಿ ಶಾಲೆಯಲ್ಲಿ ವಿಭೂತಿ ಧರಿಸಿದ ವಿದ್ಯಾರ್ಥಿನಿಗೆ ಕಿರುಕುಳ; ಬಲವಂತವಾಗಿ ಮತಾಂತರಕ್ಕೆ ಯತ್ನ

ಬೆಂಗಳೂರು ಗ್ರಾಮಾಂತರ: ಟ್ರಾನ್ಸ್‌ಫರಂ ಬಳಿ ಜಂಪ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ನರಸೀಪುರದ ನಾಗರಾಜ್(38) ಮೃತ ರ್ದುದೈವಿ. ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಮಸ್ಯೆ ಸರಿಪಡಿಸದ ಹಿನ್ನಲೆ ಟ್ರಾನ್ಸ್‌ಫರಂ ಬಳಿ ಜಂಪ್ ಹಾಕುವ ವೇಳೆ ಅವಘಡ ಸಂಭವಿಸಿದೆ. ಇತ್ತ ಬೆಸ್ಕಾಂ ಅಧಿಕಾರಿಗಳು, ಮೃತನ ಕುಟುಂಬಕ್ಕೆ  ಯಾವುದೇ ರೀತಿಯ ಪರಿಹಾರವಿಲ್ಲ ಎನ್ನುತ್ತಿದ್ದಾರೆ. ಈ ಕುರಿತು ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Wed, 18 September 24

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ