AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jog Falls: ಇದು ನಯಾಗರ ಫಾಲ್ಸ್​ ಅಂದ್ಕೊಂಡ್ರಾ?; ಜೋಗ ಜಲಪಾತದ ರುದ್ರ ರಮಣೀಯ ವಿಡಿಯೋ ವೈರಲ್

ಜೋಗ ಜಲಪಾತದ ಅದ್ಭುತವಾದ ಫೋಟೋ ಮತ್ತು ವೀಡಿಯೊಗಳನ್ನು ಅನೇಕ ಜನರು ಹಂಚಿಕೊಂಡಿದ್ದಾರೆ. ಈ ವಿಡಿಯೋ ಟ್ವಿಟರ್‌ನಲ್ಲಿ ಸುಮಾರು 1.8 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

Jog Falls: ಇದು ನಯಾಗರ ಫಾಲ್ಸ್​ ಅಂದ್ಕೊಂಡ್ರಾ?; ಜೋಗ ಜಲಪಾತದ ರುದ್ರ ರಮಣೀಯ ವಿಡಿಯೋ ವೈರಲ್
ಜೋಗ ಜಲಪಾತ
TV9 Web
| Updated By: Digi Tech Desk|

Updated on:Sep 08, 2023 | 3:37 PM

Share

ಶಿವಮೊಗ್ಗ: ಮಳೆಗಾಲದಲ್ಲಿ ಜಲಪಾತಗಳಿಗೆ ಜೀವಕಳೆ ಬಂದು ಅತ್ಯಂತ ಸುಂದರ ರೂಪ ತಾಳುತ್ತವೆ. ಮಲೆನಾಡು ಈ ಸಮಯದಲ್ಲಿ ಮಳೆನಾಡಾಗಿ ಮಾರ್ಪಡುತ್ತದೆ. ಶಿವಮೊಗ್ಗ (Shivamogga Rain), ಚಿಕ್ಕಮಗಳೂರು (Chikmagalur Rain), ಉತ್ತರ ಕನ್ನಡ (Uttara Kannada Rain), ಕೊಡಗು (Kodagu Rains) ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೋಡಿದಲ್ಲೆಲ್ಲ ಸಣ್ಣಪುಟ್ಟ ಜಲಪಾತಗಳು ಕಾಣುತ್ತವೆ. ಕರ್ನಾಟಕದ ಜೋಗ ಜಲಪಾತದ (Jog Falls) ವಿಡಿಯೋ ಇಂಟರ್​ನೆಟ್​​ನಲ್ಲಿ ಎಲ್ಲರ ಮನ ಗೆಲ್ಲುತ್ತಿದೆ. ಶಿವಮೊಗ್ಗದ ಜೋಗ ಜಲಪಾತವು ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ. ಅದರಲ್ಲೂ ಮಳೆಗಾಲದಲ್ಲಿ ಜೋಗ ಭೋರ್ಗರೆಯುತ್ತದೆ.

ಜೋಗ ಜಲಪಾತದ ವಿಡಿಯೋವನ್ನು ನಾರ್ವೆಯ ಮಾಜಿ ರಾಜತಾಂತ್ರಿಕ ಎರಿಕ್ ಸೋಲ್ಹೈಮ್ ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ. “ಇದು ನಯಾಗರಾ ಜಲಪಾತವಲ್ಲ… ಇದು ಭಾರತದ ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿರುವ ಜೋಗ ಜಲಪಾತ” ಎಂದು ಈ ವಿಡಿಯೋಗೆ ಕ್ಯಾಪ್ಷನ್ ನೀಡಲಾಗಿದೆ.

ಜೋಗ ಜಲಪಾತದ ಅದ್ಭುತವಾದ ಫೋಟೋ ಮತ್ತು ವೀಡಿಯೊಗಳನ್ನು ಅನೇಕ ಜನರು ಹಂಚಿಕೊಂಡಿದ್ದಾರೆ. ಈ ವಿಡಿಯೋ ಟ್ವಿಟರ್‌ನಲ್ಲಿ ಸುಮಾರು 1.8 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಇದಕ್ಕೆ ಸಾವಿರಾರು ಜನ ಲೈಕ್ ಮಾಡಿದ್ದಾರೆ. ನೂರಾರು ಬಳಕೆದಾರರು ಈ ಪೋಸ್ಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಳೆ ಹೆಚ್ಚಾಗಿರುವುದರಿಂದ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.

Published On - 3:56 pm, Wed, 13 July 22

‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್