AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jog Falls: ಇದು ನಯಾಗರ ಫಾಲ್ಸ್​ ಅಂದ್ಕೊಂಡ್ರಾ?; ಜೋಗ ಜಲಪಾತದ ರುದ್ರ ರಮಣೀಯ ವಿಡಿಯೋ ವೈರಲ್

ಜೋಗ ಜಲಪಾತದ ಅದ್ಭುತವಾದ ಫೋಟೋ ಮತ್ತು ವೀಡಿಯೊಗಳನ್ನು ಅನೇಕ ಜನರು ಹಂಚಿಕೊಂಡಿದ್ದಾರೆ. ಈ ವಿಡಿಯೋ ಟ್ವಿಟರ್‌ನಲ್ಲಿ ಸುಮಾರು 1.8 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

Jog Falls: ಇದು ನಯಾಗರ ಫಾಲ್ಸ್​ ಅಂದ್ಕೊಂಡ್ರಾ?; ಜೋಗ ಜಲಪಾತದ ರುದ್ರ ರಮಣೀಯ ವಿಡಿಯೋ ವೈರಲ್
ಜೋಗ ಜಲಪಾತ
TV9 Web
| Edited By: |

Updated on:Sep 08, 2023 | 3:37 PM

Share

ಶಿವಮೊಗ್ಗ: ಮಳೆಗಾಲದಲ್ಲಿ ಜಲಪಾತಗಳಿಗೆ ಜೀವಕಳೆ ಬಂದು ಅತ್ಯಂತ ಸುಂದರ ರೂಪ ತಾಳುತ್ತವೆ. ಮಲೆನಾಡು ಈ ಸಮಯದಲ್ಲಿ ಮಳೆನಾಡಾಗಿ ಮಾರ್ಪಡುತ್ತದೆ. ಶಿವಮೊಗ್ಗ (Shivamogga Rain), ಚಿಕ್ಕಮಗಳೂರು (Chikmagalur Rain), ಉತ್ತರ ಕನ್ನಡ (Uttara Kannada Rain), ಕೊಡಗು (Kodagu Rains) ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೋಡಿದಲ್ಲೆಲ್ಲ ಸಣ್ಣಪುಟ್ಟ ಜಲಪಾತಗಳು ಕಾಣುತ್ತವೆ. ಕರ್ನಾಟಕದ ಜೋಗ ಜಲಪಾತದ (Jog Falls) ವಿಡಿಯೋ ಇಂಟರ್​ನೆಟ್​​ನಲ್ಲಿ ಎಲ್ಲರ ಮನ ಗೆಲ್ಲುತ್ತಿದೆ. ಶಿವಮೊಗ್ಗದ ಜೋಗ ಜಲಪಾತವು ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ. ಅದರಲ್ಲೂ ಮಳೆಗಾಲದಲ್ಲಿ ಜೋಗ ಭೋರ್ಗರೆಯುತ್ತದೆ.

ಜೋಗ ಜಲಪಾತದ ವಿಡಿಯೋವನ್ನು ನಾರ್ವೆಯ ಮಾಜಿ ರಾಜತಾಂತ್ರಿಕ ಎರಿಕ್ ಸೋಲ್ಹೈಮ್ ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ. “ಇದು ನಯಾಗರಾ ಜಲಪಾತವಲ್ಲ… ಇದು ಭಾರತದ ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿರುವ ಜೋಗ ಜಲಪಾತ” ಎಂದು ಈ ವಿಡಿಯೋಗೆ ಕ್ಯಾಪ್ಷನ್ ನೀಡಲಾಗಿದೆ.

ಜೋಗ ಜಲಪಾತದ ಅದ್ಭುತವಾದ ಫೋಟೋ ಮತ್ತು ವೀಡಿಯೊಗಳನ್ನು ಅನೇಕ ಜನರು ಹಂಚಿಕೊಂಡಿದ್ದಾರೆ. ಈ ವಿಡಿಯೋ ಟ್ವಿಟರ್‌ನಲ್ಲಿ ಸುಮಾರು 1.8 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಇದಕ್ಕೆ ಸಾವಿರಾರು ಜನ ಲೈಕ್ ಮಾಡಿದ್ದಾರೆ. ನೂರಾರು ಬಳಕೆದಾರರು ಈ ಪೋಸ್ಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಳೆ ಹೆಚ್ಚಾಗಿರುವುದರಿಂದ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.

Published On - 3:56 pm, Wed, 13 July 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!