AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Riots: ಬಿಜೆಪಿ ಸತ್ಯಶೋಧನಾ ಸಮಿತಿ ಇಂದು ಶಿವಮೊಗ್ಗಕ್ಕೆ ಭೇಟಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಈ ಮಧ್ಯೆ ಕರ್ನಾಟಕ ಬಿಜೆಪಿಯ ಸತ್ಯಶೋಧನ ಸಮಿತಿ ಇಂದು(ಅಕ್ಟೋಬರ್ 05) ಶಿವಮೊಗ್ಗಕ್ಕೆ ಭೇಟಿ ನೀಡಲಿದೆ.

Shivamogga Riots: ಬಿಜೆಪಿ ಸತ್ಯಶೋಧನಾ ಸಮಿತಿ ಇಂದು ಶಿವಮೊಗ್ಗಕ್ಕೆ ಭೇಟಿ
ನಳಿನ್ ಕುಮಾರ್ ಕಟೀಲ್
Basavaraj Yaraganavi
| Edited By: |

Updated on:Oct 05, 2023 | 7:44 AM

Share

ಶಿವಮೊಗ್ಗ, (ಅಕ್ಟೋಬರ್ 05): ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದ ಗಲಾಟೆ (Shivamogga Riots) ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಮತ್ತೊಂದೆಡೆ ಈ ಗಲಾಟೆ ವಿಚಾರವಾಗಿ ರಾಜಕೀಯ ನಾಯಕರ ಮಾತಿನ ಕಾಳಗ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕರ್ನಾಟಕ ಬಿಜೆಪಿಯ ಸತ್ಯಶೋಧನ ಸಮಿತಿ(BJP fact finding team)  ಇಂದು(ಅಕ್ಟೋಬರ್ 05) ಶಿವಮೊಗ್ಗಕ್ಕೆ ಭೇಟಿ ನೀಡಲಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ನೇತೃತ್ವದ ಸತ್ಯಶೋಧನ ತಂಡ ಮೊದಲು ಇಂದು ಬೆಳಗ್ಗೆ 11 ಗಂಟೆಗೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಲಾಟೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲಿದೆ.

ಆಸ್ಪತ್ರೆ ಸೇರಿರುವ ಗಾಯಾಳುಗಳನ್ನು ಭೇಟಿ ನಂತರ ಗಲಾಟೆ ನಡೆದ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಲಿದ್ದಾರೆ. ಬಳಿಕ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಇದನ್ನೂ ಓದಿ: ಸಾಹಿತ್ಯ, ಸಂಸ್ಕೃತಿಯ ತೊಟ್ಟಿಲಾಗಿದ್ದ ಶಿವಮೊಗ್ಗದಲ್ಲೀಗ ಕೋಮುಗಲಭೆಯದ್ದೇ ಅಬ್ಬರ

ಮಾಜಿ ಡಿಸಿಎಂಗಳಾದ ಕೆ.ಎಸ್.ಈಶ್ವರಪ್ಪ, ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಪರಿಷತ್ ಸದಸ್ಯರಾದ ರವಿಕುಮಾರ್, ಎಸ್.ರುದ್ರೇಗೌಡ, ಶಾಸಕ ಚನ್ನಬಸಪ್ಪ, ಡಿ.ಎಸ್. ಅರುಣ್, ಭಾರತಿ ಶೆಟ್ಟಿ ಸೇರಿದಂತೆ ಇನ್ನಿತರ ನಾಯಕರು ಸೇರಿದಂತೆ ಇತರೆ ನಾಯಕರು ಉಪಸ್ಥಿತರಿರಲಿದ್ದಾರೆ.

 ಕರ್ನಾಟಕದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 am, Thu, 5 October 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ