AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿದೆ ಕರ್ನಾಟಕದ ಮೊದಲ ವಿಮಾನ ತರಬೇತಿ ಸಂಸ್ಥೆ: ರಾಜ್ಯದವರಿಗೆ ಶೇ 25 ಸೀಟುಗಳು ಮೀಸಲು

ಕರ್ನಾಟಕದ ಮೊದಲ ವಿಮಾನ ತರಬೇತಿ ಸಂಸ್ಥೆ (FTO) ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣದಲ್ಲಿ ಆರಂಭವಾಗಲಿದೆ. ಆರಂಭಿಕ ಹಂತದಲ್ಲಿ 100 ಕೆಡೆಟ್‌ಗಳಿಗೆ ತರಬೇತಿ ನೀಡಲಾಗುವುದು. ರಾಜ್ಯದ ವಿದ್ಯಾರ್ಥಿಗಳಿಗೆ ಶೇ 25 ಸೀಟುಗಳನ್ನು ಮೀಸಲಿಡಲಾಗಿದೆ ಮತ್ತು ರಿಯಾಯಿತಿ ದರದಲ್ಲಿ ಶುಲ್ಕ ವಿಧಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿದೆ ಕರ್ನಾಟಕದ ಮೊದಲ ವಿಮಾನ ತರಬೇತಿ ಸಂಸ್ಥೆ: ರಾಜ್ಯದವರಿಗೆ ಶೇ 25 ಸೀಟುಗಳು ಮೀಸಲು
ಸಾಂದರ್ಭಿಕ ಚಿತ್ರImage Credit source: Twitter
Ganapathi Sharma
|

Updated on: Jun 01, 2025 | 2:51 PM

Share

ಶಿವಮೊಗ್ಗ, ಜೂನ್ 1: ಕರ್ನಾಟಕದ ಮೊದಲ ವಿಮಾನ ತರಬೇತಿ ಸಂಸ್ಥೆಯನ್ನು (FTO) ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣದಲ್ಲಿ (RKA) ಸ್ಥಾಪಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಘೋಷಣೆ ಮಾಡಿದ್ದಾರೆ. ವಿಮಾನಯಾನ ಕ್ಷೇತ್ರದಲ್ಲಿ ರಾಜ್ಯದ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದೊಂದಿಗೆ ಈ ಸಂಸ್ಥೆಯನ್ನು ಆರಂಭಿಸಲಾಗುತ್ತದೆ. ರಾಜ್ಯ ಸರ್ಕಾರವು ನಿರ್ವಹಿಸುತ್ತಿರುವ ಮೊದಲ ಮತ್ತು ಏಕೈಕ ವಿಮಾನ ನಿಲ್ದಾಣ ಇದಾಗಿದೆ. ವಿಮಾನ ತರಬೇತಿ ಸಂಸ್ಥೆಯ ಕಾರ್ಯಾಚರಣೆಗೆ ಬೇಕಾದ ವ್ಯವಸ್ಥೆ ಮತ್ತು ಮೂಲಸೌಕರ್ಯವನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC) ಒದಗಿಸಿಕೊಡಲಿದೆ.

ವಿಮಾನ ತರಬೇತಿ ಸಂಸ್ಥೆಯಲ್ಲಿ ಆರಂಭಿಕ ಹಂತದಲ್ಲಿ 100 ಕೆಡೆಟ್‌ಗಳಿಗೆ ತರಬೇತಿ ನೀಡಲು ಯೋಜಿಸಿದ್ದು, ಮೊದಲ ವರ್ಷದಲ್ಲಿ 50 ವಿದ್ಯಾರ್ಥಿಗಳು ತರಬೇತಿಗೆ ಸೇರ್ಪಡೆಯಾಗಲಿದ್ದಾರೆ. ರಾಜ್ಯದ ಅಭ್ಯರ್ಥಿಗಳಿಗೆ ಉತ್ತೇಜನ ನೀಡುವುದಕ್ಕಾಗಿ ಶೇ 25 ಸೀಟುಗಳನ್ನು ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಮೀಸಲಿಡಲಾಗುವುದು. ಅವರಿಗೆ ರಿಯಾಯಿತಿ ದರದಲ್ಲಿ ಶುಲ್ಕ ವಿಧಿಸಲಾಗುವುದು ಎಂದೂ ಮೂಲಗಳು ತಿಳಿಸಿವೆ.

ಇದನ್ನೂ ಓದಿ
Image
ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಇದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್
Image
ಮಲ್ಲಸಂದ್ರ ಬಳಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ, ಕ್ಯಾಮರಾ ಅಳವಡಿಕೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
Image
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?

ವಿಮಾನ ತರಬೇತಿ ಸಂಸ್ಥೆಯಲ್ಲಿ ಏನೇನು ತರಬೇತಿ?

ಈ ಸಂಸ್ಥೆಯು ಫ್ಲೈಟ್ ಹ್ಯಾಂಗರ್ಸ್, ಸಿಮ್ಯುಲೇಟರ್ಸ್, ಗ್ರಂಥಾಲಯ ಮತ್ತು ರೇಡಿಯೋ ಟೆಲಿಫೋನಿ ತರಬೇತಿ ಕೇಂದ್ರವನ್ನು ಒಳಗೊಂಡಿರಲಿದೆ. 3,500 ಚದರ ಮೀಟರ್‌ಗಳಷ್ಟು ವಿಸ್ತೀರ್ಣದಲ್ಲಿರಲಿದೆ. ಈ ಯೋಜನೆಗೆ ಟೆಂಡರ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ಎಫ್​ಟಿಒ ಹ್ಯಾಂಗರ್‌ಗಳು, ಸಿಮ್ಯುಲೇಟರ್‌ಗಳು, ತರಗತಿ ಕೊಠಡಿಗಳು ಮತ್ತು ಬ್ರೀಫಿಂಗ್ ಸೌಲಭ್ಯಗಳನ್ನು ಸಂಸ್ಥೆಯು ಒಳಗೊಂಡಿರುತ್ತದೆ. ಎಲ್ಲವೂ ನಾಗರಿಕ ವಿಮಾನಯಾನ ನಿರ್ದೇಶನಾಲಯ, MoCA ಮತ್ತು BCAS ಮಾನದಂಡಗಳಿಗೆ ಅನುಗುಣವಾಗಿರುತ್ತವೆ ಎಂದು ಪಾಟೀಲ್ ಎಕ್ಸ್​ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.

ಎಂಬಿ ಪಾಟೀಲ್ ಎಕ್ಸ್ ಸಂದೇಶ

ಮೂರು ತಿಂಗಳೊಳಗೆ ಸಂಸ್ಥೆ ಆರಂಭವಾಗುವ ನಿರೀಕ್ಷೆಯಿದ್ದು, ಒಪ್ಪಂದಕ್ಕೆ ಸಹಿ ಹಾಕಿದ ಒಂಬತ್ತು ತಿಂಗಳೊಳಗೆ ಪೂರ್ಣ ಕಾರ್ಯಾಚರಣೆ ಆರಂಭವಾಗುವ ನಿರೀಕ್ಷೆಯಿದೆ. ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ ಎಂಬ ಹೆಸರಿನ ಶಿವಮೊಗ್ಗ ವಿಮಾನ ನಿಲ್ದಾಣವನ್ನು, 2023 ರ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.

ಇದನ್ನೂ ಓದಿ: ಡಿಕೆಶಿ ಕನಸಿನ ಯೋಜನೆಗೆ ವಿರೋಧ ಏಕೆ? ಏನಿದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್?

ನಗರ ಕೇಂದ್ರದಿಂದ ಸರಿಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಸೋಗಾನೆಯಲ್ಲಿ ನೆಲೆಗೊಂಡಿರುವ ಇದು, 3,200 ಮೀಟರ್ ರನ್‌ವೇಯನ್ನು ಹೊಂದಿದೆ. ಇದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಕರ್ನಾಟಕದ ಎರಡನೇ ಅತಿ ಉದ್ದದ ರನ್‌ವೇ ಆಗಿದೆ ಮತ್ತು ATR 72 ನಿಂದ ತೊಡಗಿ ಏರ್‌ಬಸ್ A320 ವರೆಗಿನ ವಿಮಾನಗಳ ಲ್ಯಾಂಡಿಂಗ್, ಟೇಕಾಫ್​​ಗೆ ಅವಕಾಶ ಒದಗಿಸಬಲ್ಲದ್ದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!