AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷ ಹತ್ಯೆ ಆರೋಪಿಗಳನ್ನು ಹೇಗೆ ಸಾಕಿದ್ದಾರೆ ಇಷ್ಟು ವರ್ಷ? ಸಂಬಂಧಪಟ್ಟ ಪೊಲೀಸರ ವಿರುದ್ಧವೂ ಕ್ರಮಕೈಗೊಳ್ತೇವೆ ಎಂದ ಆರಗ ಜ್ಞಾನೇಂದ್ರ

ಆರೋಪಿಗಳಿಗೆ SDPI ಜತೆ ಸಂಪರ್ಕದ ಬಗ್ಗೆ ಅನುಮಾನವಿದೆ. ಎಸ್​ಡಿಪಿಐ ಜತೆ ಸಂಪರ್ಕದ ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದು ಕೋಲಾರದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಹರ್ಷ ಹತ್ಯೆ ಆರೋಪಿಗಳನ್ನು ಹೇಗೆ ಸಾಕಿದ್ದಾರೆ ಇಷ್ಟು ವರ್ಷ? ಸಂಬಂಧಪಟ್ಟ ಪೊಲೀಸರ ವಿರುದ್ಧವೂ ಕ್ರಮಕೈಗೊಳ್ತೇವೆ ಎಂದ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
TV9 Web
| Edited By: |

Updated on:Feb 23, 2022 | 9:05 PM

Share

ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಲಾರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. 24 ಗಂಟೆಯಲ್ಲಿ 8 ಆರೋಪಿಗಳ ಹೆಡೆಮುರಿ ಕಟ್ಟಿದ್ದೇವೆ. ಬಂಧಿತರು ಬಹಳ ವರ್ಷಗಳಿಂದ ತಯಾರಾದವರು. ಒಬ್ಬನ ವಿರುದ್ಧ 11, ಮತ್ತೊಬ್ಬನ ವಿರುದ್ಧ 7 ಪ್ರಕರಣಗಳಿವೆ. ಪೊಲೀಸರು ಇವರನ್ನು ಹೇಗೆ ಸಾಕಿದ್ದಾರೆ ಇಷ್ಟು ವರ್ಷ? ಸಂಬಂಧಪಟ್ಟ ಪೊಲೀಸರ ವಿರುದ್ಧವೂ ಕ್ರಮಕೈಗೊಳ್ತೇವೆ. ರಾಜ್ಯದಲ್ಲಿ ಹರ್ಷನ ಕೊಲೆ ಕೇಸ್​ ಇದೇ ಕೊನೆಯಾಗಲಿ ಎಂದು ಹರ್ಷ ಕೊಲೆ ಕೇಸ್​ ಕುರಿತು ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಹರ್ಷಗೆ ಯುವತಿ ಕರೆ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಅನೇಕ ಸಾರಿ, ತಪ್ಪು ಮಾಹಿತಿಗಳು ಬರುತ್ತವೆ. ಆರೋಪಿಗಳಿಗೆ SDPI ಜತೆ ಸಂಪರ್ಕದ ಬಗ್ಗೆ ಅನುಮಾನವಿದೆ. ಎಸ್​ಡಿಪಿಐ ಜತೆ ಸಂಪರ್ಕದ ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದು ಕೋಲಾರದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಫೆ.26ರ ವರೆಗೆ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಕೆ: ಈಶ್ವರಪ್ಪ ಪ್ರತಿಕ್ರಿಯೆ

ಶಿವಮೊಗ್ಗದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಫೆ.26ರವರೆಗೆ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಕಲ್ಲು ತೂರಾಟ ಮಾಡಿದವರು ಶಿವಮೊಗ್ಗ ಕಾರ್ಯಕರ್ತರಲ್ಲ. ಯಾರೋ ಹೊರಗಡೆಯಿಂದ ಬಂದು ಗಲಾಟೆ ಮಾಡಿದ್ದಾರೆ. ಮುಸ್ಲಿಮರು ಪೊಲೀಸರೆದುರೇ ಲಾಂಗ್ ಹಿಡಿದು ಓಡಾಡಿದ್ದಾರೆ. ಇನ್ನೂ ಕೆಲ ವ್ಯಕ್ತಿಗಳು ಅಶಾಂತಿ ಮೂಡಿಸಲು ಮುಂದಾಗಿದ್ದಾರೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಹರ್ಷ ಕೊಲೆ ಕೇಸ್​ನಲ್ಲಿ 8 ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಮಾಡುತ್ತಿದ್ದಾರೆ. ಹರ್ಷನ ಹತ್ಯೆ ಹಿಂದೆ ಯಾರಿದ್ದಾರೆನ್ನುವ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಹತ್ಯೆ ಕೇಸ್​ನಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಹರ್ಷನ ಶವಯಾತ್ರೆ ವೇಳೆ ನಾನು, ರಾಘವೇಂದ್ರ ಭಾಗಿ ಆಗಿದ್ದೆವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಭಾಗಿ ಆಗಿದ್ದೆವು. ಶವಯಾತ್ರೆ ವೇಳೆ ಪ್ರಚೋದಿಸಲು ನಾವು ಭಾಗಿಯಾಗಿರಲಿಲ್ಲ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಇನ್ನೂ ಗೂಂಡಾಗಿರಿ ನಡೆಯುತ್ತಿದೆ. ದುಷ್ಟಶಕ್ತಿಗಳು ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿವೆ. ಅಲ್ಲೊಂದು ಇಲ್ಲೊಂದು ಅಹಿತಕರ ಘಟನೆ ನಡೆಯುತ್ತಿದೆ. ದುಷ್ಟಶಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ. ನಾನು, ರಾಘವೇಂದ್ರ ಭಾಗಿಯಾಗಿದ್ದರಿಂದ ಗಲಭೆ ಆರೋಪ ಇದೆ. ಕಾಂಗ್ರೆಸ್​ ಪಕ್ಷಕ್ಕೆ ಟೀಕೆ ಮಾಡುವುದೇ ಒಂದು ಕೆಲಸವಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಪ್ರಕರಣ: ಮೃತ ಹರ್ಷನ ಮೊಬೈಲ್​ ಪತ್ತೆ, ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಬಂಧಿತ ಆರೋಪಿಗಳಿಗೆ ಇದೆ ಕ್ರಿಮಿನಲ್ ಹಿನ್ನೆಲೆ!

Published On - 9:01 pm, Wed, 23 February 22

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್