AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಶೆಟ್ಟರ್​ಗೆ​ ಬಹಿರಂಗ ಪತ್ರ ಬರೆಯುತ್ತೇನೆ, ನನ್ನ ಪತ್ರಕ್ಕೆ ಅವರು ಉತ್ತರ ಕೊಡಬೇಕು: ಈಶ್ವರಪ್ಪ

ಬಿಜೆಪಿಗೆ ಇಷ್ಟೆಲ್ಲಾ ಕೆಲಸ ಮಾಡಿ ಕಾಂಗ್ರೆಸ್​ಗೆ ಏಕೆ ಸೇರಿದ್ರಿ ಅಂತಾ ನಿಮ್ಮ ಮೊಮ್ಮಗ ಕೇಳಿದ್ರೆ ಏನು ಹೇಳ್ತೀರಾ? ಅವನು ಸಹ ಛೀ ಥೂ ಅಂತಾನೆ ಎಂದು ಕೆಎಸ್ ಈಶ್ವರಪ್ಪ ಅವರು ಜಗದೀಶ್ ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ.

ಜಗದೀಶ್ ಶೆಟ್ಟರ್​ಗೆ​ ಬಹಿರಂಗ ಪತ್ರ ಬರೆಯುತ್ತೇನೆ, ನನ್ನ ಪತ್ರಕ್ಕೆ ಅವರು ಉತ್ತರ ಕೊಡಬೇಕು: ಈಶ್ವರಪ್ಪ
ಕೆಎಸ್ ಈಶ್ವರಪ್ಪ
ಆಯೇಷಾ ಬಾನು
|

Updated on:Apr 17, 2023 | 1:23 PM

Share

ಶಿವಮೊಗ್ಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್(Jagdish Shettar) ಕಾಂಗ್ರೆಸ್​ಗೆ ಸೇರಿದ್ದು ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಜಗದೀಶ್ ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿಗೆ ಇಷ್ಟೆಲ್ಲಾ ಕೆಲಸ ಮಾಡಿ ಕಾಂಗ್ರೆಸ್​ಗೆ ಏಕೆ ಸೇರಿದ್ರಿ ಅಂತಾ ನಿಮ್ಮ ಮೊಮ್ಮಗ ಕೇಳಿದ್ರೆ ಏನು ಹೇಳ್ತೀರಾ? ಅವನು ಸಹ ಛೀ ಥೂ ಅಂತಾನೆ. ನೀವು ಕ್ಷಮೆ ಕೇಳಿ ಧರ್ಮ ಉಳಿಸಿದ, ತತ್ವ ಸಿದ್ದಾಂತ ಉಳಿಸಿದ ಪಕ್ಷಕ್ಕೆ ವಾಪಸ್ ಬರಬೇಕು. ಈಗಲೂ ಕಾಲ ಮಿಂಚಿಲ್ಲ‌ ನೀವು ವಾಪಸ್ ಬರಬಹುದು ಎಂದು ಈಶ್ವರಪ್ಪ ಆಹ್ವಾನಿಸಿದ್ದಾರೆ.

ಬಿಜೆಪಿಯಲ್ಲಿದ್ದಾಗ ದೊಡ್ಡ ದೊಡ್ಡ ಭಾಷಣ ಮಾಡಿ ನೀವೇ ಜಾರಿಗೆ ತಂದ ಬಿಲ್ ವಾಪಸ್ ಪಡೆಯಲು ಕಾಂಗ್ರೆಸ್​ನಿಂದ ಬೆಂಬಲಿಸುತ್ತೀರಾ? ಶೆಟ್ಟರ್ ಅವರಿಗೆ ಬಹಿರಂಗ ಪತ್ರ ಬರೆಯುತ್ತೇನೆ. ನನ್ನ ಪತ್ರಕ್ಕೆ ಅವರು ಉತ್ತರ ಕೊಡಬೇಕು. ಕೇವಲ ಒಂದು ಶಾಸಕ ಟಿಕೆಟ್ ಮುಖ್ಯವಲ್ಲ. ಸಂಸ್ಕಾರ ಕೊಟ್ಟವರು ಇಂತಹ ವ್ಯಕ್ತಿಗೆ ಸಂಸ್ಕಾರ ಕೊಟ್ಟೆವಲ್ಲ ಅಂತಾ ಯೋಚನೆ ಮಾಡ್ತಾರೆ. ನಾನು ಬಹಿರಂಗ ಪತ್ರ ಬರೆದಾಗ ನಿಮಗೆ ನೋವು ಆಗಬಹುದು. ಅವರು ರಾಜೀನಾಮೆ ಕೊಟ್ಟಿದ್ದು ನನಗೆ ಆಘಾತವಾಯ್ತು. ಹೀಗಾಗಿ ನಾನು ಅವರಿಗೆ ಪತ್ರ ಬರೆಯುತ್ತೇನೆ ಎಂದು ಕೆಎಸ್ ಈಶ್ವರಪ್ಪ ಅವರು ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ಬಗ್ಗೆ ಯಾರು ಏನು ಹೇಳಿದ್ರು? ಇಲ್ಲಿದೆ ನೋಡಿ

ಇನ್ನು ಮಾತು ಮುಂದುವರೆಸಿ, ಧರ್ಮೇಂದ್ರ ಪ್ರಧಾನ್ ನಿವೃತ್ತಿ ತಗೋಬೇಕು ಅಂತಾ ಫೋನ್ ಮಾಡಿದ್ರು. ಅವರು ಫೋನ್ ಮಾಡಿದ 10 ನಿಮಿಷಕ್ಕೆ ನಾನು‌ ಪತ್ರ ಬರೆದೆ. ನಂತರ ನಿವೃತ್ತಿ ತಗೋಬೇಕು ಅಂದಾಗ ಶೆಟ್ಟರ್ ಅವರ ಜೊತೆ ಮಾತನಾಡಿದ್ದೆ. ಟಿಕೆಟ್​​ಗಾಗಿ ಲಕ್ಷ ಲಕ್ಷ ಕಾರ್ಯಕರ್ತರು ಇದ್ದಾರೆ. ನಿನಗೆ ಏಕೆ ಟಿಕೆಟ್ ಕೊಡಬೇಕು? ಯಾರಿಗೆ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು ಅಂತಾ ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷದ ಹಿರಿಯರು ನಮಗಿಂತ ಬುದ್ದಿವಂತರು ಇದ್ದಾರೆ. ಲಕ್ಷ್ಮಣ ಸವದಿ ಸಂಘ ಪರಿವಾರದಿಂದ ಬಂದವರಲ್ಲ. ಹೀಗಾಗಿ ಅವರ ಬಗ್ಗೆ ನಾನು ಅಷ್ಟು ಮಾತನಾಡಲ್ಲ. ಆದ್ರೆ ಶೆಟ್ಟರ್ ಸಂಘಪರಿವಾರದಿಂದ ಬಂದವರು. ಹೀಗಾಗಿ ಅವರು ಪಕ್ಷ ಬಿಟ್ಟಿದ್ದು ನೋವಾಯ್ತು. ಅವರು ವಾಪಸ್ ಬಂದರೆ ಬಹಳ ಸಂತೋಷ, ಇಲ್ಲದಿದ್ದರೆ ನೋವಾಗುತ್ತದೆ. ಕಾರ್ಯಕರ್ತರ ನೋವಿನ ಬಗ್ಗೆ ಪತ್ರ ಬರೆಯುತ್ತೇನೆ. ಎಲ್ಲಾ ಸೀಟ್ ಕಳೆದುಕೊಂಡರೆ ನಮಗೇನು ಬೇಜಾರಿಲ್ಲ. ಈ ದೇಶ ಉಳಿಯಬೇಕು ಅಂತಾ ಅನೇಕರು ಬೆಂಬಲ ಕೊಡ್ತಿದ್ದಾರೆ. ಚುನಾವಣೆ ಹಿನ್ನಡೆ ಬಹಳ ದೊಡ್ಡದಲ್ಲ. ಎರಡು ಸೀಟ್ ಇದ್ದವರು ಅಧಿಕಾರಕ್ಕೆ ಬಂದ ಪಕ್ಷ ನಮ್ಮದು ಎಂದರು.

ಸಿದ್ದರಾಮಯ್ಯ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಕೋಲಾರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿತು. ವರುಣದಲ್ಲಿ ಬಿಜೆಪಿ ಸಿದ್ದರಾಮಯ್ಯ ಅವರನ್ನು ಸೋಲಿಸುತ್ತೇವೆ. ನಾನು ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿದ್ದೇನೆ. ಈ ಬಗ್ಗೆ ಅವರಿಗೆ ಈಗಾಗಲೇ ಪತ್ರ ಬರೆದಿದ್ದೇನೆ. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾನು ಬದ್ದ ಎಂದು ಈಶ್ವರಪ್ಪ ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:23 pm, Mon, 17 April 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ