AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಗ ಜಲಪಾತ ವೀಕ್ಷಣೆಗೆ KSRTCಯಿಂದ ವೀಕೆಂಡ್ ಪ್ಯಾಕೇಜ್: ದರ ಎಷ್ಟು? ಸೇವೆ ಎಲ್ಲಿಂದ?; ಇಲ್ಲಿದೆ ಮಾಹಿತಿ

ಮಳೆಗಾಲದ ಮೈತುಂಬಿ ಹರಿಯುವ ಜೋಗ ಜಲಪಾತ ಹಾಗೂ ಶಿವಮೊಗ್ಗ ಸುತ್ತಮುತ್ತಲಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಅನುಕೂಲವಾಗುವಂತೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಶಿವಮೊಗ್ಗ ವಿಭಾಗದಿಂದ ವಿಶೇಷ ವಾರಾಂತ್ಯದ (Weekend) ಪ್ಯಾಕೇಜ್ ಬಸ್ ಸೇವೆಯನ್ನು ಆರಂಭಿಸಿದೆ. ಈ ಪ್ಯಾಕೇಜ್ ಪ್ರವಾಸದ ದರ, ಸಮಯ ಹಾಗೂ ಮಾರ್ಗದ ಸಂಪೂರ್ಣ ವಿವರಗಳು ಇಲ್ಲಿವೆ.

ಜೋಗ ಜಲಪಾತ ವೀಕ್ಷಣೆಗೆ KSRTCಯಿಂದ ವೀಕೆಂಡ್ ಪ್ಯಾಕೇಜ್: ದರ ಎಷ್ಟು? ಸೇವೆ ಎಲ್ಲಿಂದ?; ಇಲ್ಲಿದೆ ಮಾಹಿತಿ
ಜೋಗ ಜಲಪಾತ
ಪ್ರಸನ್ನ ಹೆಗಡೆ
|

Updated on:Aug 07, 2026 | 4:23 PM

Share

ಶಿವಮೊಗ್ಗ, ಆಗಸ್ಟ್​​ 07: ಪಶ್ಚಿಮ ಘಟ್ಟಗಳಲ್ಲಿ ಹುಟ್ಟುವ ಶರಾವತಿ ನದಿಯಿಂದ ಸೃಷ್ಟಿಯಾಗಿ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗದಲ್ಲಿ ಧುಮ್ಮಿಕ್ಕುವ ವಿಶ್ವ ವಿಖ್ಯಾತ ಜೋಗ ಜಲಪಾತ, ಜುಲೈನಿಂದ ಅಕ್ಟೋಬರ್ ಅವಧಿಯಲ್ಲಿ ಮೈಂದುಂಬಿ ಹರಿಯುತ್ತದೆ. ಹೀಗಾಗಿ ಸುಮಾರು 830 ಅಡಿ (253 ಮೀಟರ್) ಎತ್ತರ ಹೊಂದಿರುವ ಈ ಫಾಲ್ಸ್​ ನೋಡಲು ಮಳೆಗಾಲದಲ್ಲಿ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಇದೇ ಕಾರಣಕ್ಕೆ ಪ್ರವಾಸಿಗರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶಿವಮೊಗ್ಗ ವಿಭಾಗವು ವಿಶೇಷ ವೀಕೆಂಡ್ ಪ್ಯಾಕೇಜ್ ಬಸ್ ಸೇವೆ ಆರಂಭಿಸಿದೆ.

ಮಾರ್ಗ ಯಾವುದು?

ಬೆಳಿಗ್ಗೆ 8 ಗಂಟೆಗೆ ಶಿವಮೊಗ್ಗ ಮುಖ್ಯ ಬಸ್ ನಿಲ್ದಾಣದಿಂದ ಹೊರಡುವ ಬಸ್, ಸಿಗಂದೂರು, ವರದಾಮೂಲ, ಇಕ್ಕೇರಿ ಹಾಗೂ ಕೇಳದಿ ಮಾರ್ಗವಾಗಿ ಮಧ್ಯಾಹ್ನ 2 ಗಂಟೆಗೆ ಜೋಗ ಜಲಪಾತ ತಲುಪಲಿದೆ. ಜೋಗ ಜಲಪಾತದಿಂದ ಸಂಜೆ 5 ಗಂಟೆಗೆ ಹೊರಡುವ ಬಸ್, ರಾತ್ರಿ 7.30ಕ್ಕೆ ಶಿವಮೊಗ್ಗ ಬಸ್ ನಿಲ್ದಾಣ ತಲುಪಲಿ

ಇದನ್ನೂ ಓದಿ: ಕರ್ನಾಟಕದಲ್ಲಿ ಅಡಿಕೆ ಉತ್ಪಾದನೆ, ಉತ್ಪಾದಕತೆ ಭಾರೀ ಕುಸಿತ! ಕಾರಣವೇನು?

ಟಿಕೆಟ್​​ ದರ ಎಷ್ಟು?

ಈ ವಿಶೇಷ ಪ್ಯಾಕೇಜ್‌ಗೆ ವಯಸ್ಕರಿಗೆ 450 ರೂ. ಹಾಗೂ ಮಕ್ಕಳಿಗೆ 250 ರೂ. ದರ ನಿಗದಿಪಡಿಸಲಾಗಿದೆ. ಪ್ರಯಾಣಿಕರು ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮುಂಗಡ ಬುಕ್ಕಿಂಗ್ ಮಾಡಬಹುದು. ಈ ವಿಶೇಷ ಸೇವೆ ಈ ವಾರಾಂತ್ಯದಿಂದ ಆರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ಸಂಚಾರಾಧಿಕಾರಿ (DTO) ದಿನೇಶ್ ಚನ್ನಗಿರಿ ತಿಳಿಸಿರೋದಾಗಿ ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:22 pm, Fri, 7 August 26

Follow Us
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​