AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವರ್ಷದ ಗಲಾಟೆಯಿಂದ ಪಾಠ: ಈ ಬಾರಿ ಶಿವಮೊಗ್ಗದಲ್ಲಿ ಪೊಲೀಸರು ಹೈಅಲರ್ಟ್

ಶಿವಮೊಗ್ಗದಲ್ಲಿ ಹಬ್ಬಗಳು ಬಂದರೆ ಸಾಕು ಪೊಲೀಸ್ ಇಲಾಖೆಗೆ ದೊಡ್ಡ ತಲೆಬಿಸಿ. ಮಲೆನಾಡಿನ ಇತಿಹಾಸ ಪುಟ ತೆರೆದರೆ ಗಣೇಶ ಹಬ್ಬ ಸಂದರ್ಭದಲ್ಲಿ ಗಲಾಟೆಗಳು ದೊಡ್ಡ ದೊಡ್ಡ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಕಳೆದ ವರ್ಷ ಫ್ಲೇಕ್ಸ್ ವಿಚಾರಕ್ಕೆ ಶುರುವಾದ ಗಲಾಟೆಯು ಹಿಂಸಾರೂಪಕ್ಕೆ ತಿರುಗಿತ್ತು. ಈ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ.

ಕಳೆದ ವರ್ಷದ ಗಲಾಟೆಯಿಂದ ಪಾಠ: ಈ ಬಾರಿ ಶಿವಮೊಗ್ಗದಲ್ಲಿ ಪೊಲೀಸರು ಹೈಅಲರ್ಟ್
ಈ ಬಾರಿ ಶಿವಮೊಗ್ಗದಲ್ಲಿ ಪೊಲೀಸರು ಹೈಅಲರ್ಟ್
Basavaraj Yaraganavi
| Edited By: |

Updated on: Sep 06, 2024 | 6:20 PM

Share

ಶಿವಮೊಗ್ಗ, ಸೆ.06: ನಾಳೆಯಿಂದ ಗಣೇಶ ಹಬ್ಬದ ಸಂಭ್ರಮ. ಗಣೇಶ ಹಬ್ಬದ ಹಿಂದೆಯೇ ಈದ್ ಮಿಲಾದ್ ಹಬ್ಬ ಕೂಡ ಇದೆ. ಅದರಲ್ಲೂ ಶಿವಮೊಗ್ಗ(Shivamogga) ಕೋಮುಗಲಭೆಯ ಸೂಕ್ಷ್ಮ ಕೇಂದ್ರವಾಗಿದೆ. ಶಿವಮೊಗ್ಗದ ಹಿಂದೂ ಮಹಾಸಭಾ ಗಣೇಶ ರಾಜ್ಯದಲ್ಲಿ ಗಮನ ಸಳೆದಿದ್ದು, ಈ ಗಣೇಶನ ವಿಸರ್ಜನೆ ಮೆರವಣಿಗೆಯಲ್ಲಿ ಲಕ್ಷಾಂತರ ಜನರು ಸೇರುತ್ತಾರೆ. ಈ ಹಿನ್ನಲೆಯಲ್ಲಿ ಎರಡು ಹಬ್ಬವನ್ನು ಶಾಂತಿಯುತವಾಗಿ ನಡೆಸುವುದು ಈಗ ಪೊಲೀಸರಿಗೆ ದೊಡ್ಡ ಸವಾಲು ಎದುರಾಗಿದೆ.

ಮಲೆನಾಡಿನ ಪೊಲೀಸರು ಹೈಅಲರ್ಟ್

ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಅವರು ಕಳೆದ ಒಂದು ತಿಂಗಳಿನಿಂದ ಬಂದೋಬಸ್ತ್ ಮತ್ತು ಶಾಂತಿ ಸಭೆಗಳ ಮೂಲಕ ನಿರಂತರವಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ ಸೇರಿದಂತೆ ಜಿಲ್ಲೆಯ ವಿವಿಧ ಭಾಗದಲ್ಲಿ ಹಿಂದೂಮಹಾಸಭಾ ಗಣೇಶನ ವಿಸರ್ಜನೆಗಳಿವೆ. ಈ ಎಲ್ಲ ಗಣೇಶ ವಿಸರ್ಜನೆ ಮೆರವಣಿಗೆಯು ಶಾಂತಿಯುತವಾಗಿ ನಡೆಯಬೇಕಿದೆ. ಈ ಹಿನ್ನಲೆಯಲ್ಲಿ ಯಾವುದೇ ಪ್ರಚೋದನೆಕಾರಿ ಫ್ಲೇಕ್ಸ್, ಬ್ಯಾನರ್ ಹಾಕದಂತೆ ಈಗಾಗಲೇ ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆದೇಶದ ಮಾಡಿದ್ದಾರೆ. ಈ ನಡುವೆ ಶಿವಮೊಗ್ಗ ನಗರದ ಸೂಕ್ಷ್ಮ ಪ್ರದೇಶದಲ್ಲಿ ಇಂದು ಪೊಲೀಸರ ಪಥಸಂಚಲನ ನಡೆಯಿತು. ಪೊಲೀಸ್ ಇಲಾಖೆಗೆ ಆರ್​ಎಎಫ್ ತುಕಡಿಯು ಸಾಥ್ ನೀಡಿತು.

ಇದನ್ನೂ ಓದಿ: ಗಣಪತಿ ಮೂರ್ತಿ ತಯಾರಿಸುತ್ತಿರುವ ದಿವ್ಯಾಂಗ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ಎರಡು ಕೋಮಿನ ಮುಖಂಡರನ್ನು ಸೇರಿಸಿ ಶಾಂತಿ ಸಭೆ

ಕಳೆದ ವರ್ಷ ರಾಗಿಗುಡ್ಡದಲ್ಲಿ ಪ್ರಚೋದನಾಕಾರಿ ಫ್ಲೇಕ್ಸ್ ಮತ್ತು ಕಟೌಟ್ ವಿವಾದ ಶುರುವಾಗಿತ್ತು. ಇದು ಬಳಿಕ ಎರಡು ಕೋಮಿನ ನಡುವೆ ಹಿಂಸಾರೂಪ ಪಡೆದುಕೊಂಡಿತ್ತು. 15 ದಿನಗಳ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ ಕೂಡ ಮಾಡಲಾಗಿತ್ತು. ಎಲ್ಲೆಂದರಲ್ಲಿ ಕಲ್ಲು ತೂರಾಟ, ಲಾಠಿ ಚಾರ್ಜ್, ಮನೆ ಮೇಲೆ ಕಲ್ಲುತೂರಾಟ ಸೇರಿದಂತೆ ಅನೇಕ ಹಿಂಸಾರೂಪದ ಘಟನೆಗಳು ನಡೆದಿದ್ದವು. ಈ ವರ್ಷ ಶಾಂತಿಯುತವಾಗಿ ಹಬ್ಬದಾಚರಣೆ ಆಗಬೇಕಿದೆ. ಈ ಹಿನ್ನಲೆಯಲ್ಲಿ ಎರಡು ಕೋಮಿನ ಮುಖಂಡರನ್ನು ಸೇರಿಸಿ ಶಾಂತಿ ಸಭೆಗಳು ನಿರಂತರವಾಗಿ ಶಿವಮೊಗ್ಗದಲ್ಲಿ ನಡೆದಿವೆ.

ಹಿಂದೂ ಮಹಾಸಭಾ ಗಣೇಶನ ಪ್ರತಿಷ್ಟಾಪನೆಗೆ ಭರ್ಜರಿ ಸಿದ್ಧತೆ

ಈ ನಡುವೆ ಶಿವಮೊಗ್ಗದ ಕೋಟೆ ಭೀಮೇಶ್ವರನ ದೇಗುಲ ಆವರಣದಲ್ಲಿ ಹಿಂದೂ ಮಹಾಸಭಾ ಗಣೇಶನ ಪ್ರತಿಷ್ಟಾಪನೆಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ನೆಹರು ರಸ್ತೆ ಸೇರಿದಂತೆ ನಗರದಲ್ಲಿ ಅದ್ಧೂರಿ ಅಲಂಕಾರ ಮಾಡಲಾಗುತ್ತಿದೆ. ಹಿಂದೂ ಮಹಾಸಭಾ ಗಣೇಶನ ವಿಸರ್ಜನೆ ಮೆರವಣಿಗೆಯು ಈ ವರ್ಷ ಅದ್ಧೂರಿಯಾಗಿ ನಡೆಸುವುದಕ್ಕೆ ಈಗಾಗಲೇ ಹಿಂದೂ ಪರ ಸಂಘಟನೆಗಳು ಎಲ್ಲ ಸಿದ್ಧತೆಯಲ್ಲಿ ತೊಡಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?