AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಲವ್ ವಿಚಾರಕ್ಕೆ ಯುವಕನ ಮೇಲೆ ಡೆಡ್ಲಿ ಅಟ್ಯಾಕ್; ತಲೆಯಲ್ಲೇ ಮಚ್ಚು ಬಿಟ್ಟು ಪರಾರಿ

ಮಲೆನಾಡಿನಲ್ಲಿ ಮತ್ತೆ ನೆತ್ತರು ಹರಿದಿದೆ. ಲವ್ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವಂತಹ ಘಟನೆ ಶಿವಮೊಗ್ಗದ ವಾದಿ ಎ ಹುದಾ ಬಡಾವಣೆಯಲ್ಲಿ ನಡೆದಿದೆ. ಮಚ್ಚಿನ ದಾಳಿಯಲ್ಲಿ ಗಾಯಗೊಂಡಿರುವ ಯುವಕ ಸ್ಥಿತಿ ಗಂಭೀರವಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಲವ್ ವಿಚಾರಕ್ಕೆ ಯುವಕನ ಮೇಲೆ ಡೆಡ್ಲಿ ಅಟ್ಯಾಕ್; ತಲೆಯಲ್ಲೇ ಮಚ್ಚು ಬಿಟ್ಟು ಪರಾರಿ
ಹಲ್ಲೆಗೊಳಗಾದ ಯುವಕImage Credit source: tv9 kannada
Basavaraj Yaraganavi
| Edited By: |

Updated on: Apr 25, 2026 | 6:37 PM

Share

ಶಿವಮೊಗ್ಗ, ಏಪ್ರಿಲ್​ 25: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ (shivamogga) ಮತ್ತೆ ನೆತ್ತರು ಹರಿದಿದೆ. ಲವ್ (Love)​​ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದೆ. ತಲೆಯಲ್ಲೇ ಮಚ್ಚು ಸಿಲುಕಿಕೊಂಡ ಸ್ಥಿತಿಯಲ್ಲಿ ಯುವಕ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಜನತೆಯನ್ನು ಬೆಚ್ಚಿಬೀಳಿಸಿದೆ.

ನಡೆದಿದ್ದೇನು?

ಶಿವಮೊಗ್ಗದ ವಾದಿ ಎ ಹುದಾ ಬಡಾವಣೆಯಲ್ಲಿ ಲವ್​​ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಆರೋಪಿ ಸೊಹೇಲ್ ಎಂಬಾತನಿಗೆ ಯುವತಿಯೊಬ್ಬಳ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ, ತಾನು ಮದುವೆಯಾಗಲಿರುವ ಯುವತಿಯನ್ನು 17 ವರ್ಷದ ಅಪ್ರಾಪ್ತ ಯುವಕ ಪ್ರೀತಿಸುತ್ತಿದ್ದಾನೆ ಮತ್ತು ಆಕೆಯ ಸಂಪರ್ಕದಲ್ಲಿದ್ದಾನೆ ಎಂಬ ವಿಷಯ ಸೊಹೇಲ್​ಗೆ ತಿಳಿದು ಕೆಂಡಾಮಂಡಲವಾಗಿದ್ದ. ಇದೇ ಸೇಡಿನಿಂದ ಯುವಕನನ್ನು ಮುಗಿಸಲು ಸೊಹೇಲ್ ಸಂಚು ರೂಪಿಸಿದ್ದ.

ತಲೆಯಲ್ಲೇ ಮಚ್ಚು ಬಿಟ್ಟು ಕ್ರೌರ್ಯ

ನಿನ್ನೆ ರಾತ್ರಿ ಸೊಹೇಲ್ ತನ್ನ ಐವರು ಸಹಚರರೊಂದಿಗೆ ಯುವಕನ ಮನೆ ಬಳಿ ಹೊಂಚು ಹಾಕಿ ಕುಳಿತಿದ್ದ. ಯುವಕ ಕಾಣಿಸಿಕೊಳ್ಳುತ್ತಿದ್ದಂತೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯ ತೀವ್ರತೆ ಎಷ್ಟಿತ್ತೆಂದರೆ, ಮಚ್ಚಿನಿಂದ ತಲೆಗೆ ಹೊಡೆದಾಗ ಆ ಮಚ್ಚು ತಲೆಯ ಒಳಗೇ ಸಿಲುಕಿಕೊಂಡಿದೆ. ನನ್ನವಳ ತಂಟೆಗೆ ಬಂದರೆ ಇದೇ ಗತಿ ಎಂಬಂತೆ ಮಚ್ಚನ್ನು ತಲೆಯಲ್ಲೇ ಬಿಟ್ಟು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ

ಹಿಂದೆ-ಮುಂದೆ ನೋಡದೆ ಸೊಹೇಲ್​​ 17 ವರ್ಷದ ಯುವಕನ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾನೆ. ಇದರಿಂದ ಆತನ ಸ್ಥಿತಿ ಗಂಭೀರವಾಗಿದೆ. ವೈದ್ಯರು ಹರಸಾಹಸ ಪಟ್ಟು ತಲೆಯಲ್ಲಿದ್ದ ಮಚ್ಚನ್ನು ಹೊರ ತೆಗೆದಿದ್ದಾರೆ. ಸದ್ಯ ಯುವಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಈ ಘಟನೆಯಿಂದ ವಾದಿ ಎ ಹುದಾ ಬಡಾವಣೆ ಮತ್ತು ನಗರದ ಜನರು ಬೆಚ್ಚಿಬಿದ್ದಿದ್ದಾರೆ. ತುಂಗಾ ನಗರ ಪೊಲೀಸರು ಮರ್ಡರ್ ಕೇಸ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ. ಘಟನೆಯಲ್ಲಿ ಈಗಾಗಲೇ ಕೆಲವರನ್ನು ವಶಕ್ಕೆ ಕೂಡ ಪಡೆದುಕೊಂಡಿದ್ದಾರೆ. ಇನ್ನು ನಾಪತ್ತೆಯಾದ ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಇದನ್ನೂ ಓದಿ: ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜತೆ ಸಂಸಾರ: ಇದೇನಿದು ವಿದ್ಯೆ ಕಲಿಸುವ ಗುರುವಿನ ಆಟ?

ಲವ್ ವಿಚಾರಕ್ಕೆ ಯುವಕರ ನಡುವೆ ಶುರುವಾದ ಗಲಾಟೆ ಕೊಲೆ ಮಾಡುವ ಹಂತಕ್ಕೆ ಹೋಗಿದ್ದು ಮಾತ್ರ ಆತಂಕ ಸೃಷ್ಟಿಸಿದೆ. ಅತ್ತ 17 ವರ್ಷದ ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ