ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ 50 ರೂ. ವಸೂಲಿ; ಬಿಜೆಪಿ ಅವಧಿಯಲ್ಲೇ ಆರಂಭವಾಗಿದೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ(Shivamogga)ದಲ್ಲಿ ಮಾತನಾಡಿದ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ‘ನಾವು ಗೃಹಲಕ್ಷ್ಮಿ 2 ಸಾವಿರ ಕೊಟ್ಟು, ಗೃಹ ಜ್ಯೋತಿ ಕೊಟ್ಟು, ಫ್ರೀಯಾಗಿ ಬಸ್ಸಿನಲ್ಲಿ ಓಡಾಡಿಸುತ್ತೇವೆ. ಈ ಮೊದಲು ಪರೀಕ್ಷಾ ಶುಲ್ಕ 60 ರೂಪಾಯಿ ನಿಗದಿಯಾಗಿತ್ತು. ನಾವು 10 ರೂ. ಕಡಿಮೆ ಮಾಡಿದ್ದೇವೆ. ಮುಂದೆ ಏನಾದರೂ ಇನ್ನೂ ಅನುಕೂಲವಾದ್ರೆ ಕಡಿಮೆ ಮಾಡುತ್ತೇವೆ ಎಂದರು.

ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ 50 ರೂ. ವಸೂಲಿ; ಬಿಜೆಪಿ ಅವಧಿಯಲ್ಲೇ ಆರಂಭವಾಗಿದೆ-ಸಚಿವ ಮಧು ಬಂಗಾರಪ್ಪ
ಮಧು ಬಂಗಾರಪ್ಪ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 04, 2024 | 10:41 PM

ಶಿವಮೊಗ್ಗ, ಫೆ.04: ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆ(SSLC Preparatory Exam)ಗೆ 50 ರೂ. ವಸೂಲಿ ವಿಚಾರ ‘ಬಿಜೆಪಿ ಅವಧಿಯಲ್ಲೇ ಪರೀಕ್ಷಾ ಶುಲ್ಕ ವಸೂಲಿ ಆರಂಭವಾಗಿದೆ ಎಂದು ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ(Madhu Bangarappa) ಹೇಳಿದ್ದಾರೆ. ಶಿವಮೊಗ್ಗ(Shivamogga)ದಲ್ಲಿ ಮಾತನಾಡಿದ ಅವರು ‘ನಾವು ಗೃಹಲಕ್ಷ್ಮಿ 2 ಸಾವಿರ ಕೊಟ್ಟು, ಗೃಹ ಜ್ಯೋತಿ ಕೊಟ್ಟು, ಫ್ರೀಯಾಗಿ ಬಸ್ಸಿನಲ್ಲಿ ಓಡಾಡಿಸುತ್ತೇವೆ. ಈ ಮೊದಲು ಪರೀಕ್ಷಾ ಶುಲ್ಕ 60 ರೂಪಾಯಿ ನಿಗದಿಯಾಗಿತ್ತು. ನಾವು 10 ರೂ. ಕಡಿಮೆ ಮಾಡಿದ್ದೇವೆ. ಮುಂದೆ ಏನಾದರೂ ಇನ್ನೂ ಅನುಕೂಲವಾದ್ರೆ ಕಡಿಮೆ ಮಾಡುತ್ತೇವೆ ಎಂದರು.

ವಿರೋಧ ಪಕ್ಷದವರಂತಹ ದಡ್ಡರು ಯಾರೂ ಇಲ್ಲವೆಂದು ವ್ಯಂಗ್ಯ

ಇನ್ನು ಅವರು ಹುಡುಕುವ ಕೆಲಸವನ್ನು ನಿಲ್ಲಿಸಬೇಕು. ಇಲ್ಲದಿರುವುದನ್ನು ಹುಡುಕಿ ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ಇದು ಉಪಯೋಗ ‌ಇಲ್ಲ, ಬಿಜೆಪಿಯವರ ಆರೋಪಗಳಿಗೆ ಉತ್ತರ ಕೊಡದಿರುವುದೇ ಸೂಕ್ತವಾಗಿದೆ. ಇನ್ನು ಕುಮಾರಸ್ವಾಮಿ ಅವರು ಪ್ರಶ್ನೆ ಕೇಳುವ ಮೊದಲು ಸ್ವಲ್ಪ ತಿಳಿದುಕೊಳ್ಳೋದು ಒಳ್ಳೆಯದು, ಇಲ್ಲದಿರುವುದನ್ನು ಹುಡುಕಿ ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ವಿರೋಧ ಪಕ್ಷದವರಂತಹ ದಡ್ಡರು ಯಾರೂ ಇಲ್ಲವೆಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:ಬೆಳಿಗ್ಗೆ ನಮಾಜ್‌ಗೆ ಅನುಕೂಲವಾಗಲು ಪರೀಕ್ಷೆ ವೇಳಾಪಟ್ಟಿಯನ್ನೇ ಶಿಕ್ಷಣ ಇಲಾಖೆ ಬದಲಾಯಿಸಿದೆ-ಹಿಂದೂ ಮುಖಂಡ ಗಂಭೀರ ಆರೋಪ

ಪರೀಕ್ಷೆ ವೇಳಾಪಟ್ಟಿಯಲ್ಲಿ ಸಮಯ ಬದಲಾವಣೆ; ಸ್ಪಷ್ಟನೆ ನೀಡಿದ ಸಚಿವರು

ಇದೇ ವೇಳೆ ಮಾ.1ರ ಮಧ್ಯಾಹ್ನ SSLC ಪೂರ್ವ ಸಿದ್ಧತಾ ಪರೀಕ್ಷೆ ನಡೆಸುವ ವಿಚಾರದಲ್ಲಿ ಕೆಲವು ಧರ್ಮಕ್ಕೆ ಒಲವು ತೋರಿಸುವ ಕೆಲಸ ಮಾಡಿದ್ದಾರೆಂಬ ಆರೋಪ ‘ಬಿಜೆಪಿಯವರು ಎಲ್ಲವನ್ನೂ ಜೋಡಣೆ ಮಾಡುವ ಕೆಲಸ ಮಾಡುತ್ತಾರೆ ಎಂದು ಕಿಡಿಕಾರಿದರು. ಕಳ್ಳನಿಗೆ ಒಂದು ಸುಳ್ಳು ನೆಪ ಬೇಕು ಅಂತಾರಲ್ಲ ಹಾಗೆ, ಬಿಜೆಪಿಯವರ ಅಂಗ ಸಂಸ್ಥೆ ಆಸ್​ಎಸ್​ಎಸ್​ನವರ ಕೆಲಸ ಇದು. ಮಾರ್ಚ್​ 1ರಂದು ಬೆಳಗ್ಗೆ ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿಯಾಗಿದೆ. SSLC ಪೂರ್ವ ಸಿದ್ದತಾ ಪರೀಕ್ಷೆ ಆಗಿದ್ದರಿಂದ ಮಧ್ಯಾಹ್ನ ಮಾಡ್ತಿದ್ದೇವೆ. ಮಾ.1ರಂದು 3 ಪರೀಕ್ಷೆ ಇರುವುದರಿಂದ ಮುಂದೂಡಿದ್ರೆ ಸಮಸ್ಯೆ ಆಗುತ್ತೆ. ಮಕ್ಕಳಿಗೆ ಅನುಕೂಲವಾಗುವ ರೀತಿ ಆಡಳಿತ ನಡೆಸಲು ನಮಗೆ ಬರುತ್ತದೆ ಎನ್ನುವ ಮೂಲಕ ಸ್ಪಷ್ಟತೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 pm, Sun, 4 February 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ