AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್​ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್‌ ಮಾಡಿ ಆರೋಪಿಯ ಬಂಧನ

ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್​ಗೆ ಸಂಬಂಧಿಸಿಂದತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.

ಅರೆಸ್ಟ್​ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್‌ ಮಾಡಿ ಆರೋಪಿಯ ಬಂಧನ
ಮೃತ ಬಾರ್ ಕ್ಯಾಷಿಯರ್‌ ಸಚಿನ್
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 8:17 PM

ಶಿವಮೊಗ್ಗ: ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್​ಗೆ ಸಂಬಂಧಿಸಿಂದತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಫೈರಿಂಗ್​ ಮಾಡುವ ಮೂಲಕ ಆರೋಪಿಯನ್ನು ಪೊಲೀಸರು ಅರೆಸ್ಟ್ (arrest)​ ಮಾಡಿದ್ದಾರೆ. ಸತೀಶ್​​ ಬಂಧಿತ ಆರೋಪಿ. ಶಿವಮೊಗ್ಗ ತಾಲ್ಲೂಕಿನ ಆಯನೂರಿನಲ್ಲಿ ಬಾರ್ ಕ್ಯಾಷಿಯರ್​ ಸಚಿನ್ ಮರ್ಡರ್​ ಕೇಸ್ ಸಂಬಂಧ ಅರೆಸ್ಟ್​ ಮಾಡಲಾಗಿದೆ.​ ಪಿಎಸ್‌ಐ ಎಸ್ ರಾಜು ರೆಡ್ಡಿರಿಂದ ಸ್ವಯಂ ರಕ್ಷಣೆ ಹಿನ್ನಲೆ ಆರೋಪಿ ಕಾಲಿಗೆ ಫೈರಿಂಗ್​ ಮಾಡಲಾಗಿದೆ.

ಗಾಯಾಳು ಸತೀಶ್​ ನನ್ನು ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್​ಗೆ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಜಾರ್ಖಂಡ್‌ನಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ: 3 ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳ ಬಂಧನ

ಘಟನೆ ಹಿನ್ನಲೆ

ಮದ್ಯ ನೀಡಲು ನಿರಾಕರಿಸಿದ್ದಕ್ಕೆ ಬಾರ್​ ಕ್ಯಾಶಿಯರ್​ ಸಚಿನ್​ ನನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ನಿನ್ನೆ (ಜೂ.05) ಬಾರ್​ಗೆ ಗಾಂಜಾ ಅಮಲಿನಲ್ಲಿ ಬಂದ ಮೂವರು ಮದ್ಯ ಕೇಳಿದ್ದಾರೆ. ಅದಕ್ಕೆ ಕ್ಯಾಶಿಯರ್​ ಸಚಿನ್​​ ಸಮಯ ಮುಗದಿದೆ ಮದ್ಯ ನೀಡಲು ಆಗುವುದಿಲ್ಲ ಎಂದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮೂವರು ಗಲಾಟೆ ಮಾಡಿದ್ದಾರೆ.

ನಂತರ ಡ್ರ್ಯಾಗನ್​ನಿಂದ ದುಷ್ಕರ್ಮಿಗಳು ಕ್ಯಾಶಿಯರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೇ ಆರೋಪಿಗಳು ಬಾರ್​ ಸನಿಹ ಗಸ್ತಿಗೆ ನೀಯೋಜಿಸಿದ್ದ ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mandya News: ಟಾರ್ಗೆಟ್ ಮಾಡಿದ್ದು ತಮ್ಮನನ್ನ, ಹಂತಕರ ಕೈಯಲ್ಲಿ ತಗ್ಲಾಕೊಂಡು ದುರಂತ ಅಂತ್ಯ ಕಂಡಿದ್ದು ಅಣ್ಣ

ಗಂಭೀರಗೊಂಡಿದ್ದ ಕ್ಯಾಶಿಯರ್ ಸಚಿನ್​​ನನ್ನು ಸ್ಥಳೀಯರು ಕೂಡಲೇ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕುಂಸಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಿದೆ.

ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆ

ತುಮಕೂರು: ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆಯಾಗಿರುವಂತಹ ಘಟನೆ  ಅಂತಸರನಹಳ್ಳಿ ತರಕಾರಿ ಮಾರ್ಕೆಟ್‌ನಲ್ಲಿ ನಡೆದಿದೆ. ಸಾರ್ವಜನಿಕ ಶೌಚಾಲಯದಲ್ಲಿ ಲಖನ್ ಮಾಂಜಿ(36) ಶವ ಪತ್ತೆಯಾಗಿದೆ. ಮಾಂಜಿ 6 ತಿಂಗಳಿಂದ ಮಾರ್ಕೆಟ್‌ನ ಶೌಚಾಲಯ ಕೀಪರ್ ಆಗಿದ್ದ. ತುಮಕೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್