AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್​ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್‌ ಮಾಡಿ ಆರೋಪಿಯ ಬಂಧನ

ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್​ಗೆ ಸಂಬಂಧಿಸಿಂದತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.

ಅರೆಸ್ಟ್​ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್‌ ಮಾಡಿ ಆರೋಪಿಯ ಬಂಧನ
ಮೃತ ಬಾರ್ ಕ್ಯಾಷಿಯರ್‌ ಸಚಿನ್
ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 8:17 PM

Share

ಶಿವಮೊಗ್ಗ: ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್​ಗೆ ಸಂಬಂಧಿಸಿಂದತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಫೈರಿಂಗ್​ ಮಾಡುವ ಮೂಲಕ ಆರೋಪಿಯನ್ನು ಪೊಲೀಸರು ಅರೆಸ್ಟ್ (arrest)​ ಮಾಡಿದ್ದಾರೆ. ಸತೀಶ್​​ ಬಂಧಿತ ಆರೋಪಿ. ಶಿವಮೊಗ್ಗ ತಾಲ್ಲೂಕಿನ ಆಯನೂರಿನಲ್ಲಿ ಬಾರ್ ಕ್ಯಾಷಿಯರ್​ ಸಚಿನ್ ಮರ್ಡರ್​ ಕೇಸ್ ಸಂಬಂಧ ಅರೆಸ್ಟ್​ ಮಾಡಲಾಗಿದೆ.​ ಪಿಎಸ್‌ಐ ಎಸ್ ರಾಜು ರೆಡ್ಡಿರಿಂದ ಸ್ವಯಂ ರಕ್ಷಣೆ ಹಿನ್ನಲೆ ಆರೋಪಿ ಕಾಲಿಗೆ ಫೈರಿಂಗ್​ ಮಾಡಲಾಗಿದೆ.

ಗಾಯಾಳು ಸತೀಶ್​ ನನ್ನು ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್​ಗೆ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಜಾರ್ಖಂಡ್‌ನಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ: 3 ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳ ಬಂಧನ

ಘಟನೆ ಹಿನ್ನಲೆ

ಮದ್ಯ ನೀಡಲು ನಿರಾಕರಿಸಿದ್ದಕ್ಕೆ ಬಾರ್​ ಕ್ಯಾಶಿಯರ್​ ಸಚಿನ್​ ನನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ನಿನ್ನೆ (ಜೂ.05) ಬಾರ್​ಗೆ ಗಾಂಜಾ ಅಮಲಿನಲ್ಲಿ ಬಂದ ಮೂವರು ಮದ್ಯ ಕೇಳಿದ್ದಾರೆ. ಅದಕ್ಕೆ ಕ್ಯಾಶಿಯರ್​ ಸಚಿನ್​​ ಸಮಯ ಮುಗದಿದೆ ಮದ್ಯ ನೀಡಲು ಆಗುವುದಿಲ್ಲ ಎಂದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮೂವರು ಗಲಾಟೆ ಮಾಡಿದ್ದಾರೆ.

ನಂತರ ಡ್ರ್ಯಾಗನ್​ನಿಂದ ದುಷ್ಕರ್ಮಿಗಳು ಕ್ಯಾಶಿಯರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೇ ಆರೋಪಿಗಳು ಬಾರ್​ ಸನಿಹ ಗಸ್ತಿಗೆ ನೀಯೋಜಿಸಿದ್ದ ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mandya News: ಟಾರ್ಗೆಟ್ ಮಾಡಿದ್ದು ತಮ್ಮನನ್ನ, ಹಂತಕರ ಕೈಯಲ್ಲಿ ತಗ್ಲಾಕೊಂಡು ದುರಂತ ಅಂತ್ಯ ಕಂಡಿದ್ದು ಅಣ್ಣ

ಗಂಭೀರಗೊಂಡಿದ್ದ ಕ್ಯಾಶಿಯರ್ ಸಚಿನ್​​ನನ್ನು ಸ್ಥಳೀಯರು ಕೂಡಲೇ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕುಂಸಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಿದೆ.

ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆ

ತುಮಕೂರು: ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆಯಾಗಿರುವಂತಹ ಘಟನೆ  ಅಂತಸರನಹಳ್ಳಿ ತರಕಾರಿ ಮಾರ್ಕೆಟ್‌ನಲ್ಲಿ ನಡೆದಿದೆ. ಸಾರ್ವಜನಿಕ ಶೌಚಾಲಯದಲ್ಲಿ ಲಖನ್ ಮಾಂಜಿ(36) ಶವ ಪತ್ತೆಯಾಗಿದೆ. ಮಾಂಜಿ 6 ತಿಂಗಳಿಂದ ಮಾರ್ಕೆಟ್‌ನ ಶೌಚಾಲಯ ಕೀಪರ್ ಆಗಿದ್ದ. ತುಮಕೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ