AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್​ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್‌ ಮಾಡಿ ಆರೋಪಿಯ ಬಂಧನ

ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್​ಗೆ ಸಂಬಂಧಿಸಿಂದತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.

ಅರೆಸ್ಟ್​ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್‌ ಮಾಡಿ ಆರೋಪಿಯ ಬಂಧನ
ಮೃತ ಬಾರ್ ಕ್ಯಾಷಿಯರ್‌ ಸಚಿನ್
ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 8:17 PM

Share

ಶಿವಮೊಗ್ಗ: ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್​ಗೆ ಸಂಬಂಧಿಸಿಂದತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಫೈರಿಂಗ್​ ಮಾಡುವ ಮೂಲಕ ಆರೋಪಿಯನ್ನು ಪೊಲೀಸರು ಅರೆಸ್ಟ್ (arrest)​ ಮಾಡಿದ್ದಾರೆ. ಸತೀಶ್​​ ಬಂಧಿತ ಆರೋಪಿ. ಶಿವಮೊಗ್ಗ ತಾಲ್ಲೂಕಿನ ಆಯನೂರಿನಲ್ಲಿ ಬಾರ್ ಕ್ಯಾಷಿಯರ್​ ಸಚಿನ್ ಮರ್ಡರ್​ ಕೇಸ್ ಸಂಬಂಧ ಅರೆಸ್ಟ್​ ಮಾಡಲಾಗಿದೆ.​ ಪಿಎಸ್‌ಐ ಎಸ್ ರಾಜು ರೆಡ್ಡಿರಿಂದ ಸ್ವಯಂ ರಕ್ಷಣೆ ಹಿನ್ನಲೆ ಆರೋಪಿ ಕಾಲಿಗೆ ಫೈರಿಂಗ್​ ಮಾಡಲಾಗಿದೆ.

ಗಾಯಾಳು ಸತೀಶ್​ ನನ್ನು ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್​ಗೆ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಜಾರ್ಖಂಡ್‌ನಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ: 3 ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳ ಬಂಧನ

ಘಟನೆ ಹಿನ್ನಲೆ

ಮದ್ಯ ನೀಡಲು ನಿರಾಕರಿಸಿದ್ದಕ್ಕೆ ಬಾರ್​ ಕ್ಯಾಶಿಯರ್​ ಸಚಿನ್​ ನನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ನಿನ್ನೆ (ಜೂ.05) ಬಾರ್​ಗೆ ಗಾಂಜಾ ಅಮಲಿನಲ್ಲಿ ಬಂದ ಮೂವರು ಮದ್ಯ ಕೇಳಿದ್ದಾರೆ. ಅದಕ್ಕೆ ಕ್ಯಾಶಿಯರ್​ ಸಚಿನ್​​ ಸಮಯ ಮುಗದಿದೆ ಮದ್ಯ ನೀಡಲು ಆಗುವುದಿಲ್ಲ ಎಂದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮೂವರು ಗಲಾಟೆ ಮಾಡಿದ್ದಾರೆ.

ನಂತರ ಡ್ರ್ಯಾಗನ್​ನಿಂದ ದುಷ್ಕರ್ಮಿಗಳು ಕ್ಯಾಶಿಯರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೇ ಆರೋಪಿಗಳು ಬಾರ್​ ಸನಿಹ ಗಸ್ತಿಗೆ ನೀಯೋಜಿಸಿದ್ದ ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mandya News: ಟಾರ್ಗೆಟ್ ಮಾಡಿದ್ದು ತಮ್ಮನನ್ನ, ಹಂತಕರ ಕೈಯಲ್ಲಿ ತಗ್ಲಾಕೊಂಡು ದುರಂತ ಅಂತ್ಯ ಕಂಡಿದ್ದು ಅಣ್ಣ

ಗಂಭೀರಗೊಂಡಿದ್ದ ಕ್ಯಾಶಿಯರ್ ಸಚಿನ್​​ನನ್ನು ಸ್ಥಳೀಯರು ಕೂಡಲೇ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕುಂಸಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಿದೆ.

ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆ

ತುಮಕೂರು: ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆಯಾಗಿರುವಂತಹ ಘಟನೆ  ಅಂತಸರನಹಳ್ಳಿ ತರಕಾರಿ ಮಾರ್ಕೆಟ್‌ನಲ್ಲಿ ನಡೆದಿದೆ. ಸಾರ್ವಜನಿಕ ಶೌಚಾಲಯದಲ್ಲಿ ಲಖನ್ ಮಾಂಜಿ(36) ಶವ ಪತ್ತೆಯಾಗಿದೆ. ಮಾಂಜಿ 6 ತಿಂಗಳಿಂದ ಮಾರ್ಕೆಟ್‌ನ ಶೌಚಾಲಯ ಕೀಪರ್ ಆಗಿದ್ದ. ತುಮಕೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ