AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಹಸುಗಳು ಹಾಲು ಕೊಡುತ್ತಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ ರೈತ

ಬಾಳೆಹೊನ್ನೂರು ಬಳಿಯ ಸಿದ್ದೀಪುರ ಗ್ರಾಮದ 40 ವರ್ಷದ ರೈತ ರಾಮಯ್ಯ ಎನ್ನುವವರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ನಮ್ಮ ಮನೆಯಲ್ಲಿರುವ ನಾಲ್ಕು ಹಸುಗಳನ್ನು ಸರಿಯಾಗಿ ಮೇಯಲು ಕರೆದುಕೊಂಡು ಹೋದರೂ ಹಾಲು ಕೊಡುತ್ತಿಲ್ಲ. ಹಸುಗಳನ್ನು ಠಾಣೆಗೆ ಕರೆಸಿ ಬುದ್ಧಿ ಹೇಳಿ ನ್ಯಾಯ ಕೊಡಿಸಬೇಕು ಎಂದು ದೂರು ನೀಡಿದ್ದಾರೆ.

ಶಿವಮೊಗ್ಗ: ಹಸುಗಳು ಹಾಲು ಕೊಡುತ್ತಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ ರೈತ
ಸಾಂದರಭಿಕಕ ಚಿತ್ರ
TV9 Web
| Edited By: |

Updated on:Dec 05, 2021 | 12:25 PM

Share

ಶಿವಮೊಗ್ಗ: ವ್ಯಕ್ತಿಗಳ ನಡುವೆ ಅಥವಾ ಗುಂಪುಗಳ ನಡುವೆ ಜಗಳವಾದರೆ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ ಇಲ್ಲೊಬ್ಬ ರೈತ ತನ್ನ ಹಸುಗಳು ಹಾಲು ಕೊಡುತ್ತಿಲ್ಲ ಅವುಗಳಿಗೆ ನೀವೇ ಬುದ್ದಿ ಹೇಳಿ ಎಂದು  ತನ್ನ ನಾಲ್ಕು ಹಸುಗಳ ವಿರುದ್ಧವೇ  ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾಳೆಹೊನ್ನೂರು ಬಳಿ ಈ ಘಟನೆ ನಡೆದಿದೆ. ಬಾಳೆಹೊನ್ನೂರು ಬಳಿಯ ಸಿದ್ದೀಪುರ ಗ್ರಾಮದ 40 ವರ್ಷದ ರೈತ ರಾಮಯ್ಯ ಎನ್ನುವವರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ನಮ್ಮ ಮನೆಯಲ್ಲಿರುವ ನಾಲ್ಕು ಹಸುಗಳನ್ನು ಸರಿಯಾಗಿ ಮೇಯಲು ಕರೆದುಕೊಂಡು ಹೋದರೂ ಹಾಲು ಕೊಡುತ್ತಿಲ್ಲ. ಹಸುಗಳನ್ನು ಠಾಣೆಗೆ ಕರೆಸಿ ಬುದ್ಧಿ ಹೇಳಿ ನ್ಯಾಯ ಕೊಡಿಸಬೇಕು ಎಂದು ದೂರು ನೀಡಿದ್ದಾರೆ.

ದೂರಿನಲ್ಲಿ ರಾಮಯ್ಯ ಅವರು ಸಿದ್ದೀಪುರ ಗ್ರಾಮದಲ್ಲಿ ನನ್ನ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ವಾಸವಾಗಿದ್ದೇನೆ. ವ್ಯವಸಾಯದ ಜತೆಗೆ ಜೀವನೋಪಾಯಕ್ಕಾಗಿ ನಾಲ್ಕು ಹಸುಗಳನ್ನು ಸಾಕಿಕೊಂಡಿದ್ದೇನೆ. ಅವುಗಳನ್ನು ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಮೇಯಿಸಲು ಹಸಿರು ಹುಲ್ಲುಗಳಿರುವ ಜಾಗಕ್ಕೆ ಕರೆದುಕೊಂಡು ಹೋಗುತ್ತೇನೆ. ಬೆಳಗ್ಗೆ ಮಾತ್ರವಲ್ಲದೆ ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಮೇಯಿಸಲು ಕರೆದೊಯ್ಯುತ್ತೇನೆ. ಹೀಗಿದ್ದರೂ ಪ್ರತಿದಿನ ಹಸುಗಳು ನನಗೆ ಹಾಗೂ ನನ್ನ ಹೆಂಡತಿ ರತ್ನಮ್ಮಗೆ ಹಾಲು ಕರೆಯಲು ಕೊಡದೆ ಒದೆಯುತ್ತಿವೆ.

ಹೀಗಾಗಿ ತಾವು ತನ್ನ ನಾಲ್ಕು ಹಸುಗಳನ್ನು ಪೊಲೀಸ್ ಠಾಣೆಗೆ ಕರೆಸಿ ನಾಲ್ಕು ಬುದ್ದಿ ಮಾತು ಹೇಳಿ ನ್ಯಾಯ ಒದಗಿಸಿಕೊಡಬೇಕು. ಅದೇ ರೀತಿ ತನ್ನ ಹಸುಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಿಕೊಡಬೇಕು ಎಂದು ಬಾಳೆಹೊನ್ನೂರಿನ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ರೈತನ ದೂರು ನೋಡಿ ಪೊಲೀಸರೇ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ತನ್ನ ಹಸುಗಳು ಹಾಲು ಕೊಡುತ್ತಿಲ್ಲ ಎಂದು ರೈತ ಪೊಲೀಸರಿಗೆ ದೂರು ನೀಡಿದ ಪ್ರತಿ ವೈರಲ್ ಆಗಿದ್ದು, ನೆಟ್ಟಿಗರು ಇದೆಂಥಾ ರೀತಿಯ ದೂರು? ಎನ್ನುತ್ತಿದ್ದಾರೆ.

case against cow

ರೈತ ಬರೆದ ಪತ್ರದ ಪ್ರತಿ

ಇದನ್ನೂ ಓದಿ:

ಹೇಗಿದ್ದ ಖುಷ್ಬೂ ಹೇಗಾದ್ರು ನೋಡಿ; ಅಚ್ಚರಿಯ ರೀತಿ ಸ್ಲಿಮ್​ ಆದ ‘ರಣಧೀರ’ ಚೆಲುವೆಯ ಸೀಕ್ರೆಟ್​ ಇಲ್ಲಿದೆ

ಒಂದು ವರ್ಷದಲ್ಲಿ 56 ಚಿನ್ನ ಕದ್ದ ಪ್ರಕರಣಗಳನ್ನು ಪತ್ತೆ ಹಚ್ಚಿದ ರಾಮನಗರ ಪೊಲೀಸ್, 86 ಮಂದಿ ಅರೆಸ್ಟ್

Published On - 12:22 pm, Sun, 5 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?