AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ; ಸುತ್ತಮುತ್ತ ಪೊಲೀಸ್​ ಬಿಗಿಬಂದೋಬಸ್ತ್​

ಇಂದು(ಗುರುವಾರ) ಸಂಜೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಹಮ್ಮಿಕೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲೂ ಪೊಲೀಸ್​ ಬಿಗಿಬಂದೋಬಸ್ತ್​ ಮಾಡಲಾಗಿದೆ. ಜೊತೆಗೆ ಗಣಪತಿ ವಿಸರ್ಜನಾ ಕರ್ತವ್ಯದ ಕುರಿತು ಸಿಬ್ಬಂದಿಗಳಿಗೆ ಎಸ್​ಪಿ ಮಿಥುನ್ ಕುಮಾರ್ ಸಲಹೆ ಸೂಚನೆ ನೀಡಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ; ಸುತ್ತಮುತ್ತ ಪೊಲೀಸ್​ ಬಿಗಿಬಂದೋಬಸ್ತ್​
ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನಲೆ ಶಿವಮೊಗ್ಗದ ರಾಗಿಗುಡ್ಡದ ಸುತ್ತ ಖಾಕಿ ಸರ್ಪಗಾವಲು
Basavaraj Yaraganavi
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 12, 2024 | 5:12 PM

Share

ಶಿವಮೊಗ್ಗ, ಸೆ.12: ನಗರದ ರಾಗಿಗುಡ್ಡದಲ್ಲಿ ಇಂದು(ಗುರುವಾರ) ಸಂಜೆ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನಲೆ ಪೊಲೀಸ್​ ಬಿಗಿಬಂದೋಬಸ್ತ್​ ಮಾಡಲಾಗಿದೆ. ರಾಗಿಗುಡ್ಡ ಬಡಾವಣೆಯ ವಿವಿಧ ಏರಿಯಾದಲ್ಲಿ ಒಟ್ಟು 10 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ಗಣೇಶ ವಿಸರ್ಜನೆ ಹಮ್ಮಿಕೊಳ್ಳಲಾಗಿದೆ. ಇನ್ನು ಕಳೆದ ವರ್ಷ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಗಲಾಟೆ ಹಿನ್ನಲೆ ಈ ಬಾರಿ ಮುಂಜಾಗ್ರತೆ ಕೈಗೊಳ್ಳಲಾಗಿದೆ.

ಮುಂಜಾಗ್ರತಾ ಕ್ರಮ ಕೈಗೊಂಡ ಪೊಲೀಸ್ ಇಲಾಖೆ

  • 04 ಮಂದಿ ಡಿವೈಎಸ್ ಪಿ,
  • 14 ಮಂದಿ ಇನ್ಸ್ ಪೆಕ್ಟರ್
  • 26 ಮಂದಿ ಪಿಎಸ್ ಐ
  • 56 ಮಂದಿ ಎಎಸ್ ಐ
  • 416 ಮಂದಿ ಹೆಡ್ ಕಾನ್ಸ್‌ಟೇಬಲ್, ಕಾನ್ಸ್‌ಟೇಬಲ್ ಗಳು
  • 236 ಮಂದಿ ಗೃಹ ರಕ್ಷಕದಳ
  • 01 ಆರ್ ಎಎಫ್ ತುಕಡಿ
  • 05 ಕೆಎಸ್ ಆರ್ ಪಿ ತುಕಡಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಇನ್ನು ಗಣಪತಿ ವಿಸರ್ಜನಾ ಕರ್ತವ್ಯದ ಕುರಿತು ಸಿಬ್ಬಂದಿಗಳಿಗೆ ಎಸ್​ಪಿ ಮಿಥುನ್ ಕುಮಾರ್ ಸಲಹೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ: 30ಕ್ಕೂ ಹೆಚ್ಚು ಜನರು ವಶಕ್ಕೆ

ಕಳೆದ ವರ್ಷ ಈದ್ ಮಿಲಾದ್ ಹಬ್ಬದಾಚರಣೆ ವೇಳೆ ರಾಗಿಗುಡ್ಡದಲ್ಲಿ ಪ್ರಚೋದನಾಕಾರಿ ಫ್ಲೇಕ್ಸ್ ಮತ್ತು ಕಟೌಟ್ ವಿವಾದ ಶುರುಗಾಗಿತ್ತು. ಇದು ಬಳಿಕ ಎರಡು ಕೋಮಿನ ನಡುವೆ ಹಿಂಸಾರೂಪ ಪಡೆದುಕೊಂಡಿತ್ತು. 15 ದಿನಗಳ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ ಕೂಡ ಮಾಡಲಾಗಿತ್ತು. ಎಲ್ಲೆಂದರಲ್ಲಿ ಕಲ್ಲು ತೂರಾಟ, ಲಾಠಿ ಚಾರ್ಜ್, ಮನೆ ಮೇಲೆ ಕಲ್ಲುತೂರಾಟ ಸೇರಿದಂತೆ ಅನೇಕ ಹಿಂಸಾರೂಪದ ಘಟನೆಗಳು ನಡೆದಿದ್ದವು. ಈ ವರ್ಷ ಶಾಂತಿಯುತವಾಗಿ ಹಬ್ಬದಾಚರಣೆ ಆಗಬೇಕಿದೆ. ಈ ಹಿನ್ನಲೆಯಲ್ಲಿ ಎರಡು ಕೋಮಿನ ಮುಖಂಡರನ್ನು ಸೇರಿಸಿ ಶಾಂತಿ ಸಭೆಗಳು ನಿರಂತರವಾಗಿ ಶಿವಮೊಗ್ಗದಲ್ಲಿ ನಡೆದಿವೆ. ಅದರಂತೆ ಇಂದು ಖಾಕಿ ಸರ್ಪಗಾವಲಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ