AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ; ಸುತ್ತಮುತ್ತ ಪೊಲೀಸ್​ ಬಿಗಿಬಂದೋಬಸ್ತ್​

ಇಂದು(ಗುರುವಾರ) ಸಂಜೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಹಮ್ಮಿಕೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲೂ ಪೊಲೀಸ್​ ಬಿಗಿಬಂದೋಬಸ್ತ್​ ಮಾಡಲಾಗಿದೆ. ಜೊತೆಗೆ ಗಣಪತಿ ವಿಸರ್ಜನಾ ಕರ್ತವ್ಯದ ಕುರಿತು ಸಿಬ್ಬಂದಿಗಳಿಗೆ ಎಸ್​ಪಿ ಮಿಥುನ್ ಕುಮಾರ್ ಸಲಹೆ ಸೂಚನೆ ನೀಡಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ; ಸುತ್ತಮುತ್ತ ಪೊಲೀಸ್​ ಬಿಗಿಬಂದೋಬಸ್ತ್​
ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನಲೆ ಶಿವಮೊಗ್ಗದ ರಾಗಿಗುಡ್ಡದ ಸುತ್ತ ಖಾಕಿ ಸರ್ಪಗಾವಲು
Basavaraj Yaraganavi
| Edited By: |

Updated on: Sep 12, 2024 | 5:12 PM

Share

ಶಿವಮೊಗ್ಗ, ಸೆ.12: ನಗರದ ರಾಗಿಗುಡ್ಡದಲ್ಲಿ ಇಂದು(ಗುರುವಾರ) ಸಂಜೆ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನಲೆ ಪೊಲೀಸ್​ ಬಿಗಿಬಂದೋಬಸ್ತ್​ ಮಾಡಲಾಗಿದೆ. ರಾಗಿಗುಡ್ಡ ಬಡಾವಣೆಯ ವಿವಿಧ ಏರಿಯಾದಲ್ಲಿ ಒಟ್ಟು 10 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ಗಣೇಶ ವಿಸರ್ಜನೆ ಹಮ್ಮಿಕೊಳ್ಳಲಾಗಿದೆ. ಇನ್ನು ಕಳೆದ ವರ್ಷ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಗಲಾಟೆ ಹಿನ್ನಲೆ ಈ ಬಾರಿ ಮುಂಜಾಗ್ರತೆ ಕೈಗೊಳ್ಳಲಾಗಿದೆ.

ಮುಂಜಾಗ್ರತಾ ಕ್ರಮ ಕೈಗೊಂಡ ಪೊಲೀಸ್ ಇಲಾಖೆ

  • 04 ಮಂದಿ ಡಿವೈಎಸ್ ಪಿ,
  • 14 ಮಂದಿ ಇನ್ಸ್ ಪೆಕ್ಟರ್
  • 26 ಮಂದಿ ಪಿಎಸ್ ಐ
  • 56 ಮಂದಿ ಎಎಸ್ ಐ
  • 416 ಮಂದಿ ಹೆಡ್ ಕಾನ್ಸ್‌ಟೇಬಲ್, ಕಾನ್ಸ್‌ಟೇಬಲ್ ಗಳು
  • 236 ಮಂದಿ ಗೃಹ ರಕ್ಷಕದಳ
  • 01 ಆರ್ ಎಎಫ್ ತುಕಡಿ
  • 05 ಕೆಎಸ್ ಆರ್ ಪಿ ತುಕಡಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಇನ್ನು ಗಣಪತಿ ವಿಸರ್ಜನಾ ಕರ್ತವ್ಯದ ಕುರಿತು ಸಿಬ್ಬಂದಿಗಳಿಗೆ ಎಸ್​ಪಿ ಮಿಥುನ್ ಕುಮಾರ್ ಸಲಹೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ: 30ಕ್ಕೂ ಹೆಚ್ಚು ಜನರು ವಶಕ್ಕೆ

ಕಳೆದ ವರ್ಷ ಈದ್ ಮಿಲಾದ್ ಹಬ್ಬದಾಚರಣೆ ವೇಳೆ ರಾಗಿಗುಡ್ಡದಲ್ಲಿ ಪ್ರಚೋದನಾಕಾರಿ ಫ್ಲೇಕ್ಸ್ ಮತ್ತು ಕಟೌಟ್ ವಿವಾದ ಶುರುಗಾಗಿತ್ತು. ಇದು ಬಳಿಕ ಎರಡು ಕೋಮಿನ ನಡುವೆ ಹಿಂಸಾರೂಪ ಪಡೆದುಕೊಂಡಿತ್ತು. 15 ದಿನಗಳ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ ಕೂಡ ಮಾಡಲಾಗಿತ್ತು. ಎಲ್ಲೆಂದರಲ್ಲಿ ಕಲ್ಲು ತೂರಾಟ, ಲಾಠಿ ಚಾರ್ಜ್, ಮನೆ ಮೇಲೆ ಕಲ್ಲುತೂರಾಟ ಸೇರಿದಂತೆ ಅನೇಕ ಹಿಂಸಾರೂಪದ ಘಟನೆಗಳು ನಡೆದಿದ್ದವು. ಈ ವರ್ಷ ಶಾಂತಿಯುತವಾಗಿ ಹಬ್ಬದಾಚರಣೆ ಆಗಬೇಕಿದೆ. ಈ ಹಿನ್ನಲೆಯಲ್ಲಿ ಎರಡು ಕೋಮಿನ ಮುಖಂಡರನ್ನು ಸೇರಿಸಿ ಶಾಂತಿ ಸಭೆಗಳು ನಿರಂತರವಾಗಿ ಶಿವಮೊಗ್ಗದಲ್ಲಿ ನಡೆದಿವೆ. ಅದರಂತೆ ಇಂದು ಖಾಕಿ ಸರ್ಪಗಾವಲಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್