AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ: ಸಚಿವ ಈಶ್ವರಪ್ಪ ಎಚ್ಚರಿಕೆ

ಒಂದು ಕಾಲಕ್ಕೆ ನಮ್ಮ ಸಂಘಟನೆ ಬಹಳ ದುರ್ಬಲವಾಗಿತ್ತು. ಆಗ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ನಮ್ಮ ಹಿರಿಯರು ಬಿ ಕಾಂ, ಬಿ ಕೂಲ್ ಎನ್ನುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ: ಸಚಿವ ಈಶ್ವರಪ್ಪ

ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ: ಸಚಿವ ಈಶ್ವರಪ್ಪ ಎಚ್ಚರಿಕೆ
ಸಚಿವ ಈಶ್ವರಪ್ಪ
TV9 Web
| Edited By: |

Updated on:Aug 08, 2021 | 4:51 PM

Share

ಶಿವಮೊಗ್ಗ: ಈಗ ನಮ್ಮದೇ ಸರ್ಕಾರ ದೇಶಾದ್ಯಂತ ಅಧಿಕಾರದಲ್ಲಿದೆ. ಹಾಗಾಗಿ ನಮ್ಮ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಯನ್ನು ಮುಟ್ಟಿ ನೋಡಲಿ ಅದರ ಪರಿಣಾಮವೇ ಬೇರೆಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಹಿಂದೆಲ್ಲ ಹಿಂದುತ್ವದ ಮೆರವಣಿಗೆ ಅಂದರೆ ಊಹಿಸಲೂ ಆಗುತ್ತಿರಲಿಲ್ಲ. ಆಗ ನಮ್ಮ ಕಾರ್ಯಕರ್ತರ ಕೊಲೆಗಳಾಗುತ್ತಿತ್ತು. ಏಕೆಂದರೆ ಆಗ ನಮಗೆ ಅಷ್ಟೊಂದು ಶಕ್ತಿ ಇರಲಿಲ್ಲ. ಹೀಗಾಗಿ ಏನೇ ಆದರೂ ಶಾಂತವಾಗಿರಿ ಎಂದು ಹಿರಿಯರು ಹೇಳುತ್ತಿದ್ದರು. ನಮಗೆ ಹೊಡೆದರೂ, ಕೊಲೆ ಮಾಡಿದರೂ ಸುಮ್ಮನಿರಿ ಎನ್ನುತ್ತಿದ್ದರು. ಆದರೆ ಈಗ ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೆದಿದೆ. ದೇಶದಲ್ಲಿ ಮೊದಲಿದ್ದ ಪರಿಸ್ಥಿತಿ ಈಗ ಇಲ್ಲ. ಯಾವುದರಲ್ಲಿ ಹೊಡೆಯುತ್ತಾರೋ ಅದರಲ್ಲೇ ಹೊಡೆದು ಒಂದಕ್ಕೆ ಎರಡು ತೆಗೆಯಿರಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ಕಾರ್ಯಕಾರಿಣಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಇಂದು ನಡೆದ ಬಿಜೆಪಿ ನಗರ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ, ಬಿಜೆಪಿ ಕೇವಲ ಅಧಿಕಾರಕ್ಕೆ ಇರುವ ಪಕ್ಷ ಅಲ್ಲ. ರಾಷ್ಟ್ರೀಯ ವಿಚಾರಧಾರೆ ಹಾಗೂ ಸಿದ್ಧಾಂತವನ್ನು ಹೊಂದಿರುವ ಪಕ್ಷ. ಈ ವಿಷಯವನ್ನು ಜನರಿಗೆ ಮುಟ್ಟಿಸಿ ಅವರ ಮನ ಗೆಲ್ಲಲು ಅಸಂಖ್ಯಾತ ಕಾರ್ಯಕರ್ತರು ಶ್ರಮ ವಹಿಸಿದ್ದಾರೆ. ಒಂದು ಕಾಲಕ್ಕೆ ನಮ್ಮ ಸಂಘಟನೆ ಬಹಳ ದುರ್ಬಲವಾಗಿತ್ತು. ಆಗ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ನಮ್ಮ ಹಿರಿಯರು ಬಿ ಕಾಂ, ಬಿ ಕೂಲ್ ಎನ್ನುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ದೇಶಾದ್ಯಂತ ಎಲ್ಲಾ ಹಂತಗಳಲ್ಲಿ ಪಕ್ಷ ಅಧಿಕಾರದಲ್ಲಿದೆ. ಕೇರಳ ಸೇರಿದಂತೆ ಎಲ್ಲೆಡೆ ಸಂಘಟನೆ ಬಲವಾಗಿದೆ. ಇಂತಹ ಸಂದರ್ಭದಲ್ಲ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆದರೆ ಸಂಘಟನೆಯ ಪ್ರಮುಖರು ಬಿ ಕಾಂ ಎಂದು ಹೇಳುವ ಬದಲು ಬಿ ಫೇಸ್ ವಿತ್ ಸೇಮ್ ಸ್ಟಿಕ್ ಎಂದು ಹೇಳುತ್ತಾರೆ. ಅಷ್ಟರ ಮಟ್ಟಿಗೆ ನಾವು ಸಂಘಟನಾತ್ಮಕವಾಗಿ ಶಕ್ತಿಯುತವಾಗಿ ಹೊರಹೊಮ್ಮಿದ್ದೇವೆ. ಆದರೆ ಇಷ್ಟಕ್ಕೆ ಮೈ ಮರೆಯಬಾರದು. ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಸೇರಿದಂತೆ ಪ್ರತಿ ಸಂದರ್ಭದಲ್ಲೂ ಸದಾ ಜಾಗೃತವಾಗಿ ಕೆಲಸ ಮಾಡಬೇಕಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಕ್ರೋಶ ನಮ್ಮ ತಂಟೆಗೆ ಯಾರೇ ಬಂದರೂ ನಾವು ಸುಮ್ಮನೆ ಬಿಡಲ್ಲ. ಯಾವುದರಲ್ಲಿ ಹೊಡೀತಾರೋ ಅದರಲ್ಲೇ ಹೊಡೆದು ತೆಗೀರಿ ಎಂಬ ಸಚಿವ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟಿವಿ9ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡುವ ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಿ ಎಂದು ಹೇಳಿದ್ದಾರೆ. ಸಚಿವ ಸಂಪುಟದಿಂದ ಈಶ್ವರಪ್ಪರನ್ನ ತೆಗೆಯುವಂತೆ ಒತ್ತಾಯ ಮಾಡಿದ್ದಾರೆ.

ಆರ್​ಎಸ್​ಎಸ್​ನವರಿಗೆ ಪ್ರಚೋದನಕಾರಿ ಹೇಳಿಕೆ ನೀಡುವವರೇ ಬೇಕು. ಇಂತಹ ಸಚಿವರಿಂದ ಬೇರೆ ಏನನ್ನೂ ನಿರೀಕ್ಷಿಸಲು ಆಗಲ್ಲ. ಕರ್ನಾಟಕ ರಾಜ್ಯದ ಜನರ ಹಿತಕ್ಕಿಂತ ಗೊಂದಲ ಸೃಷ್ಟಿಸುವುದೇ ಇಂಥವರ ಉದ್ದೇಶ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಲೀಂ ಅಹ್ಮದ್ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: 

ಕೆಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ; ಸಂಪುಟದಿಂದ ಕೈಬಿಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಒತ್ತಾಯ

ಕೆ.ಎಸ್.ಈಶ್ವರಪ್ಪ ಯಾವ ಊರಿನ ದಾಸಯ್ಯ? ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೀಗೇಕೆ ಹೇಳಿದರು!?

(Minister KS Eshwarappa says single of single BJP activist threatened the result is different)

Published On - 4:36 pm, Sun, 8 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?