Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಧರ್ಮದ ಪಾದ್ರಿ ಮತ್ತು ತಂಡದಿಂದ ಧರ್ಮ ಪ್ರಚಾರ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತವರು ಕ್ಷೇತ್ರದಲ್ಲಿ ಘಟನೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತವರು ಕ್ಷೇತ್ರ ಶಿಕಾರಿಪುರ ತಾಲ್ಲೂಕು ಅಂಬಾರಗೊಪ್ಪ ಗ್ರಾಮದಲ್ಲಿ ಕ್ರೈಸ್ತ ಧರ್ಮದ ಪಾದ್ರಿ ಮತ್ತು ಅವರ 7 ಜನರ ತಂಡದಿಂದ ಧರ್ಮ ಪ್ರಚಾರ ಮಾಡಿರುವಂತಹ ಘಟನೆ ಕಂಡುಬಂದಿದೆ. ಬಂಜಾರ ಸಮಾಜದ ಮನೆಗೆ ಬಂದಿದ್ದ ಕ್ರೈಸ್ತ ಸಮಾಜದ ತಂಡ, ಈ ವೇಳೆ ಶಿಕಾರಿಪುರದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮತ್ತು ಮುಖಂಡರಿಂದ ವಿರೋಧ ವ್ಯಕ್ತಪಡಿಸಲಾಗಿದೆ.

ಕ್ರೈಸ್ತ ಧರ್ಮದ ಪಾದ್ರಿ ಮತ್ತು ತಂಡದಿಂದ ಧರ್ಮ ಪ್ರಚಾರ: ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ ತವರು ಕ್ಷೇತ್ರದಲ್ಲಿ ಘಟನೆ
ಪಾದ್ರಿ ತಂಡ ಮತ್ತು ಗ್ರಾಮಸ್ಥರ, ಸಂಘಟನೆ ನಡುವೆ ಮಾತಿನ ಚಕಮಕಿ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Dec 28, 2023 | 10:36 PM

ಶಿವಮೊಗ್ಗ, ಡಿಸೆಂಬರ್​ 28: ಕ್ರೈಸ್ತ (Christian) ಧರ್ಮದ ಪಾದ್ರಿ ಮತ್ತು ಅವರ 7 ಜನರ ತಂಡದಿಂದ ಧರ್ಮ ಪ್ರಚಾರ ಮಾಡಿರುವಂತಹ ಘಟನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತವರು ಕ್ಷೇತ್ರ ಶಿಕಾರಿಪುರ ತಾಲ್ಲೂಕು ಅಂಬಾರಗೊಪ್ಪ ಗ್ರಾಮದಲ್ಲಿ ನಡೆದಿದೆ. ಬಂಜಾರ ಸಮಾಜದ ಮನೆಗೆ ಬಂದಿದ್ದ ಕ್ರೈಸ್ತ ಸಮಾಜದ ತಂಡ, ಈ ವೇಳೆ ಶಿಕಾರಿಪುರದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮತ್ತು ಮುಖಂಡರಿಂದ ವಿರೋಧ ವ್ಯಕ್ತಪಡಿಸಲಾಗಿದೆ.

ಮತಾಂತರಕ್ಕೆ ಬಂದಿದ್ದಾರೆಂದು ಗ್ರಾಮದ ತುಂಬ ಸುದ್ದಿ ಹಬ್ಬಿದೆ. ಪಾದ್ರಿ ತಂಡ ಜೋರಾಗಿ ಭಜನೆ ಮಾಡುತ್ತಿದ್ದು, ಘಟನಾ ಸ್ಥಳಕ್ಕೆ ಗ್ರಾಮಸ್ಥರು ದೌಡಾಯಿಸಿದ್ದಾರೆ. ಪಾದ್ರಿ ತಂಡ ಮತ್ತು ಗ್ರಾಮಸ್ಥರು, ಸಂಘಟನೆ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಪರಸ್ಪರ ನೂಕಾಟ, ತಳ್ಳಾಟ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಚಿತ್ರದುರ್ಗ: ಪರಶುರಾಂಪುರ ಗ್ರಾಮದಲ್ಲಿ ಕುರುಬ ಬಾಲಕನ ಮತಾಂತರ, ದೂರು ಕೊಟ್ಟರೂ ಪೊಲೀಸರು ಮೌನ

ಗಲಾಟೆ ನಡೆಯುತ್ತಿದ್ದಂತೆ ಗ್ರಾಮಕ್ಕೆ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆಗಮಿಸಿದ್ದು, ಪರಿಸ್ಥಿತಿ ತಿಳಿಗೊಳಿಸಿದರು. ಧರ್ಮ ಪ್ರಚಾರಕ್ಕೆ ಬಂದ ತಂಡವನ್ನು ಶಿಕಾರಿಪುರ ಠಾಣೆಗೆ ಪೊಲೀಸರು ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಪರಸ್ಪರ ಹಲ್ಲೆ ಮಾಡಿದ್ದಾರೆಂದು ದೂರು ಪ್ರತಿದೂರು ದಾಖಲು ಮಾಡಲಾಗಿದೆ.

ಹಿಂದೂಗಳನ್ನು ಕ್ರಿಶ್ಚಿಯನ್ ಸಮುದಾಯಕ್ಕೆ ಮತಾಂತರ ಆರೋಪ

ಇದೀಗ ಹಿಂದೂಗಳನ್ನು ಕ್ರಿಶ್ಚಿಯನ್ ಸಮುದಾಯಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರಾರ್ಥನೆ ನಡೆಯುತಿದ್ದ ಸ್ಥಳಕ್ಕೆ ಸ್ಥಳೀಯರು ಮುತ್ತಿಗೆ ಹಾಕಿ ತರಾಟೆ ತೆಗೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿ ನಡೆದಿತ್ತು. ಚಿತ್ತಾಕುಲದ ಕ್ರಿಶ್ ಹಾಲ್​ನಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಸಮುದಾಯಕ್ಕೆ ಮತಾಂತರಗೊಂಡಿದ್ದ ಚಿತ್ತಾಕುಲದ ಶ್ಯಾಮ್ ನಾಯಕ್ ಎಂಬುವವರು ಪ್ರಾರ್ಥನೆ ಆಯೋಜನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್