AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ವಿಚಾರಣಾಧೀನ ಕೈದಿಯ ಹೊಟ್ಟೆಯೊಳಗಿತ್ತು ಮೊಬೈಲ್ ಫೋನ್!

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಿತ್ರ ಪ್ರಕರಣವೊಂದು ವರದಿಯಾಗಿದೆ. ವಿಚಾರಣಾಧೀನ ಕೈದಿಯೊಬ್ಬ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಕಲ್ಲು ನುಂಗಿದ್ದೇನೆಂದು ವೈದ್ಯರ ಬಳಿ ಹೇಳಿಕೊಂಡಿದ್ದ. ಆದರೆ, ಪರಿಸ್ಥಿತಿ ಬಿಗಡಾಯಿಸಿದಾಗ ವೈದ್ಯರಿಗೆ ತಿಳಿದು ಬಂದ ವಿಚಾರವೇ ಬೇರೆ. ಆತನ ಹೊಟ್ಟೆಲ್ಲಿದ್ದುದು ಕಲ್ಲಲ್ಲ, ಬದಲಿಗೆ ಮೊಬೈಲ್ ಫೋನ್! ನಂತರ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ಹೊರ ತೆಗೆಯಲಾಗಿದೆ.

ಶಿವಮೊಗ್ಗ: ವಿಚಾರಣಾಧೀನ ಕೈದಿಯ ಹೊಟ್ಟೆಯೊಳಗಿತ್ತು ಮೊಬೈಲ್ ಫೋನ್!
ಶಿವಮೊಗ್ಗ ಕೇಂದ್ರ ಕಾರಾಗೃಹ
Ganapathi Sharma
|

Updated on: May 03, 2024 | 7:19 AM

Share

ಬೆಂಗಳೂರು, ಮೇ 3: ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ (Shivamogga Central Jail) ವಿಚಾರಣಾಧೀನ ಕೈದಿಯಾಗಿರುವ ವ್ಯಕ್ತಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ (Mobile Phone) ಇರುವುದು ಪತ್ತೆಯಾಗಿದ್ದು, ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ (Surgery) ಮೂಲಕ ಅದನ್ನು ಹೊರ ತೆಗೆದಿದ್ದಾರೆ. ಏಪ್ರಿಲ್ 25 ರಂದು ಶಸ್ತ್ರಚಿಕಿತ್ಸೆ ನಡೆಸಿದಾಗ ಈ ವಿಚಾರ ಗೊತ್ತಾಗಿದೆ ಎಂದು ವರದಿಯಾಗಿದೆ. ಮಾರ್ಚ್ 28 ರಂದು ವಿಚಾರಣಾಧೀನ ಕೈದಿ 26 ವರ್ಷದ ಪರಶುರಾಮ್ ಹೊಟ್ಟೆ ನೋವಿದೆ ಎಂದು ದೂರು ನೀಡಿದ್ದರು. ಹೀಗಾಗಿ ಜೈಲು ಆವರಣದಲ್ಲಿರುವ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ನಂತರ ನೋವು ತಡೆಯಲಾಗುತ್ತಿಲ್ಲ ಎಂದು ಹೇಳಿದ ಕಾರಣ, ಅದೇ ರಾತ್ರಿ ಅವರನ್ನು ಮೆಕ್‌ಗಾನ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕೆಲ ಸಮಯದ ಹಿಂದೆ ಕಲ್ಲು ನುಂಗಿದ್ದೆ ಎಂದು ಪರಶುರಾಮ್ ಅಲ್ಲಿನ ವೈದ್ಯರಿಗೆ ತಿಳಿಸಿದ್ದರು. ಅದರಂತೆ, ವೈದ್ಯರು ಬಾಹ್ಯ ವಸ್ತು ಹೊಟ್ಟೆ ಸೇರಿರುವುದರಿಂದ ಹೊಟ್ಟೆ ನೋವಿರಬಹುದು ಎಂದು ಔಷಧ ನೀಡಿದ್ದರು.

ಆದರೆ, ಏಪ್ರಿಲ್ 1 ರಂದು ಪರಶುರಾಮ್ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ಹೀಗಾಗಿ ಪರಶುರಾಮ್‌ಗೆ ಕೆಲವು ವಿಶೇಷ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಜೈಲು ಅಧಿಕಾರಿಗಳಿಗೆ ಸೂಚಿಸಿದರು. ಏಪ್ರಿಲ್ 6 ರಂದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಏಪ್ರಿಲ್ 25 ರಂದು ಶಸ್ತ್ರಚಿಕಿತ್ಸೆ ಮೂಲಕ ಪರಶುರಾಮ್ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರ ತೆಗೆಯಲಾಯಿತು ಎಂದು ‘ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: SSI Mantra: ಬೀದರ್​ ಮಗುವಿಗೆ ಮೇಡ್ ಇನ್ ಇಂಡಿಯಾ ರೋಬೋಟ್​ನಿಂದ ಶಸ್ತ್ರಚಿಕಿತ್ಸೆ: ದೇಶದ ವೈದ್ಯಕೀಯ ಇತಿಹಾಸದಲ್ಲೇ ಮೊದಲು

ಜೈಲಿನಲ್ಲಿದ್ದಾಗ ಮೊಬೈಲ್ ಫೋನ್ ಹೊಂದಿದ್ದಕ್ಕಾಗಿ ಪರಶುರಾಮ್ ವಿರುದ್ಧ ‘ಕರ್ನಾಟಕ ಕಾರಾಗೃಹಗಳ (ತಿದ್ದುಪಡಿ) ಕಾಯ್ದೆ – 2022’ ರ ಸೆಕ್ಷನ್ 42 ರ ಅಡಿಯಲ್ಲಿ ಶಿವಮೊಗ್ಗದ ತುಂಗಾನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!