AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಮೂಕ ಪ್ರಾಣಿಗಳ ಮಾರಣಹೋಮ; 150ಕ್ಕೂ ಹೆಚ್ಚು ಬೀದಿ ನಾಯಿಗಳ ಜೀವಂತ ಸಮಾಧಿ

ಮೈಸೂರಿನ ಮೂಲದವರಿಗೆ ಬೀದಿ ನಾಯಿ ಹಿಡಿಯುವ ಟೆಂಡರ್ ನೀಡಲಾಗಿದೆ ಎಂಬ ಮಾಹಿತಿ ದೊರೆತಿದ್ದು, ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ವೆಚ್ಚ ಉಳಿಸಲು ಈ ಕೃತ್ಯ ಮಾಡಿರುವ ಸಾಧ್ಯತೆ ಇದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಸದ್ಯ ಈ ಸಂಬಂಧ ದೂರು ದಾಖಲಾಗಿದೆ.

ಶಿವಮೊಗ್ಗ: ಮೂಕ ಪ್ರಾಣಿಗಳ ಮಾರಣಹೋಮ; 150ಕ್ಕೂ ಹೆಚ್ಚು ಬೀದಿ ನಾಯಿಗಳ ಜೀವಂತ ಸಮಾಧಿ
ಬೀದಿ ನಾಯಿಗಳ ಮಾರಣಹೋಮ
TV9 Web
| Edited By: |

Updated on:Sep 08, 2021 | 9:11 AM

Share

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.  ಕಂಬದಾಳು-ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗನಾಥಪುರದಲ್ಲಿ ಮೂಕ ಪ್ರಾಣಿಗಳ ಮಾರಣಹೋಮ ನಡೆದಿದೆ. ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. 

ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ.  ಆದರೆ ನಂತರ ಯಾವುದೇ ಶಬ್ಧಗಳು ಕೇಳಿ ಬಂದಿಲ್ಲ. ಬಳಿಕ ಅನುಮಾನಗೊಂಡ ಗ್ರಾಮದ ಕೆಲ ಯುವಕರು  ಶಿವಮೊಗ್ಗದ ಪ್ರಾಣಿ ದಯಾ ಸಂಘಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಎನಿಮಲ್ ರೇಸ್ಕೂ ಕ್ಲಬ್ (ಪ್ರಾಣಿ ದಯಾ ಸಂಘ) ಆಗಮನಿಸಿದ್ದು, ನಾಯಿಗಳನ್ನು ಪತ್ತೆ ಮಾಡಿದ್ದಾರೆ. ಈ ವೇಳೆ ಮಣ್ಣಲ್ಲಿ  ಸುಮಾರು 150 ನಾಯಿಗಳು ಹೂತಿರುವುದು ಬೆಳಕಿಗೆ ಬಂದಿದೆ.

ಇಲ್ಲಿನ ಗ್ರಾಮ ಪಂಚಾಯತಿಯವರೇ ಮೈಸೂರು ಮೂಲದವರಿಗೆ ಬೀದಿ ನಾಯಿ ಹಿಡಿಯುವ ಟೆಂಡರ್ ನೀಡಿದ್ದಾರೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿವೆ. ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ವೆಚ್ಚ ಉಳಿಸಲು ಈ ಕೃತ್ಯ ಮಾಡಿರುವ ಸಾಧ್ಯತೆ ಇದೆ ಎಂಬ ಅನುಮಾನ ಸೃಷ್ಟಿಯಾಗಿದೆ.  ಆದರೆ ನಾಯಿಗಳ ಸಾವಿಗೆ ಇನ್ನೂ ಕೂಡ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

ಇದನ್ನೂ ಓದಿ: ಹಾಸನ: ಮಂಗಗಳ ಮಾರಣಹೋಮ ಪ್ರಕರಣಕ್ಕೆ ತಿರುವು; ಐವರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಗಳ ಮಾರಣಹೋಮ‌ ಮಾಸುವ ಮುನ್ನವೇ ಹಾಸನದಲ್ಲಿ 20ಕ್ಕೂ ಹೆಚ್ಚು ಕರುಗಳು ಸಾವು

Published On - 8:55 am, Wed, 8 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ