AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ

ಮಗನ ಮೇಲಿನ ದಾಳಿಯನ್ನು ತಡೆಯಲು ಹೋಗಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾವು ಹಲ್ಲೆ ನಡೆಸಿದ್ದ ವ್ಯಕ್ತಿಗೆ ಉಪಚರಿಸಿರುವುದನ್ನೇ ನೆಪ ಮಾಡಿಕೊಂಡು ಜಗಳ ತೆಗೆದಿರುವ ಆರೋಪಿಗಳು, ಮೃತ ಮಹಿಳೆಯ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಮಚ್ಚಿನಿಂದ ದಾಳಿಗೂ ಯತ್ನಿಸಿದ್ದು, ಈ ವೇಳೆ ತಡೆಯಲು ಯತ್ನಿಸಿದ ಮಹಿಳೆಗೆ ಮಚ್ಚಿನೇಟು ಬಿದ್ದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ
ಮಹಿಳೆಯ ಹತ್ಯೆ
Basavaraj Yaraganavi
| Edited By: |

Updated on: Nov 10, 2025 | 5:07 PM

Share

ಶಿವಮೊಗ್ಗ, ನವೆಂಬರ್​ 10: ಮಗನ ಮೇಲಿನ ದಾಳಿಯನ್ನು ತಡೆಯಲು ಹೋಗಿ ಮಹಿಳೆಯೋರ್ವರು ಬರ್ಬರವಾಗಿ ಕೊಲೆಯಾಗಿರುವ ಘಟನೆ ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ಗಂಗಮ್ಮ (45) ಮೃತ ದುರ್ದೈವಿಯಾಗಿದ್ದು, ಆರೋಪಿಗಳಾದ ಹರೀಶ್ ಮತ್ತು ನಾಗೇಶ್​ರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಚ್ಚಿನಿಂದ ದಾಳಿ ಮಾಡಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಗಂಗಮ್ಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿದ್ದೇಶ್ವರ ಬಡಾವಣೆಯಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಆರೋಪಿಗಳಾದ ಹರೀಶ್ ಮತ್ತು ನಾಗೇಶ್​​ ಬೈಕ್​ನಲ್ಲಿ ತೆರಳುತ್ತಿದ್ದ ಅದೇ ಬಡಾವಣೆಯ ಮಂಜುನಾಥ್​ ಎಂಬವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದರು. ಮಾನವೀಯತೆಯಿಂದ ಗಾಯಗೊಂಡ ಮಂಜುನಾಥನಿಗೆ ಗಂಗಮ್ಮ ಉಪಚರಿಸಿದ್ದರು. ಮಂಜುನಾಥ್​ ತಲೆಗೆ ಅರಿಶಿಣ ಹಚ್ಚಿ, ನೀರು ಕುಡಿಸಿದ್ದರು. ಇದೇ ವಿಚಾರಕ್ಕೆ ಕುಪಿತಗೊಂಡ ಆರೋಪಿಗಳು ಗಂಗಮ್ಮ ಅವರ ಪುತ್ರ ಜೀವನ್​ ಬಳಿ ಗಲಾಟೆ ಮಾಡಿದ್ದಾರೆ. ನಾವು ಹೊಡೆದವರಿಗೆ ಅರಿಶಿಣ ಹಚ್ಚುತ್ತೀರಾ ಎಂದು ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಳಿಕ ಮನೆಯಿಂದ ಮಚ್ಚು ತಂದು ಜೀವನ್​​ ಮೇಲೆ ಬೀಸಿದ್ದು, ಈ ವೇಳೆ ಅಲ್ಲೇ ಇದ್ದ ಗಂಗಮ್ಮ ತಲೆ ಮತ್ತು ಕುತ್ತಿಗೆ ಭಾಗಮನ್ನು ಮಚ್ಚು ಸಿಳಿದೆ. ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದ್ದು, ಹಳೆಯ ದ್ವೇಷದ ಹಿನ್ನಲೆ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಪತ್ನಿ ಪಾಲಿಗೆ ಪ್ರೀತಿಸಿ ಮದುವೆಯಾದಾತನೇ ವಿಲನ್​: ಪತಿ ಅಟ್ಟಹಾಸಕ್ಕೆ 6 ತಿಂಗಳ ಭ್ರೂಣ ಸಾವು

ಹಳೆಯ ದ್ವೇಷಕ್ಕೆ ಹರಿದ ನೆತ್ತರು

ಮೃತ ಗಂಗಮ್ಮ ಅವರ ಮಗ ಜೀವನ್​ ಮೇಲೆ ಆರೋಪಿಗಳಿಗೆ ಹಳೆಯ ದ್ವೇಷ ಇತ್ತು ಎನ್ನಲಾಗಿದೆ. ಈ ಹಿಂದೆ ಇದೇ ದುಮ್ಮಳ್ಳಿ ಗ್ರಾಮದಲ್ಲಿ ಜೀವನ್ ಸಂಬಂಧಿಕರ ಮನೆ ಬಾಡಿಗೆ ಪಡೆದು ನಾಗೇಶ್​ ಮತ್ತು ಹರೀಶ್​ ನೆಲೆಸಿದ್ದರು. ಆದರೆ ಬಾಡಿಗೆ ಹಣ ನೀಡಿರಲಿಲ್ಲ. ಹೀಗಾಗಿ ಊರಿನ ಸರ್ಕಲ್​ನಲ್ಲಿ ಹಣ ನೀಡುವಂತೆ ಜೀವನ್​ ಕೇಳಿದ್ದ. ಆ ವೇಳೆ ಇವರ ನಡುವೆ ಗಲಾಟೆ ನಡೆದಿತ್ತು. ಆ ಬಳಿಕ ಜೀವನ್​ ಮನೆ ಮುಂಭಾಗವೇ ಇರುವ ಮನೆಯಲ್ಲಿ ಬಂದು ನೆಲೆಸಿದ್ದ ಆರೋಪಿಗಳು, ಜೀವನ್​​ಗೆ ಗುರಾಯಿಸಿಕೊಂಡೇ ಓಡಾಡುತ್ತಿದ್ದರು. ಇವರ ನಡುವೆ ಆಗಾಗ ಸಣ್ಣ ಪುಟ್ಟ ಗಲಾಟೆ ಸಹ ನಡೆಯುತ್ತಿತ್ತು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ