AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ

ಮಗನ ಮೇಲಿನ ದಾಳಿಯನ್ನು ತಡೆಯಲು ಹೋಗಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾವು ಹಲ್ಲೆ ನಡೆಸಿದ್ದ ವ್ಯಕ್ತಿಗೆ ಉಪಚರಿಸಿರುವುದನ್ನೇ ನೆಪ ಮಾಡಿಕೊಂಡು ಜಗಳ ತೆಗೆದಿರುವ ಆರೋಪಿಗಳು, ಮೃತ ಮಹಿಳೆಯ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಮಚ್ಚಿನಿಂದ ದಾಳಿಗೂ ಯತ್ನಿಸಿದ್ದು, ಈ ವೇಳೆ ತಡೆಯಲು ಯತ್ನಿಸಿದ ಮಹಿಳೆಗೆ ಮಚ್ಚಿನೇಟು ಬಿದ್ದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ
ಮಹಿಳೆಯ ಹತ್ಯೆ
Basavaraj Yaraganavi
| Edited By: |

Updated on: Nov 10, 2025 | 5:07 PM

Share

ಶಿವಮೊಗ್ಗ, ನವೆಂಬರ್​ 10: ಮಗನ ಮೇಲಿನ ದಾಳಿಯನ್ನು ತಡೆಯಲು ಹೋಗಿ ಮಹಿಳೆಯೋರ್ವರು ಬರ್ಬರವಾಗಿ ಕೊಲೆಯಾಗಿರುವ ಘಟನೆ ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ಗಂಗಮ್ಮ (45) ಮೃತ ದುರ್ದೈವಿಯಾಗಿದ್ದು, ಆರೋಪಿಗಳಾದ ಹರೀಶ್ ಮತ್ತು ನಾಗೇಶ್​ರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಚ್ಚಿನಿಂದ ದಾಳಿ ಮಾಡಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಗಂಗಮ್ಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿದ್ದೇಶ್ವರ ಬಡಾವಣೆಯಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಆರೋಪಿಗಳಾದ ಹರೀಶ್ ಮತ್ತು ನಾಗೇಶ್​​ ಬೈಕ್​ನಲ್ಲಿ ತೆರಳುತ್ತಿದ್ದ ಅದೇ ಬಡಾವಣೆಯ ಮಂಜುನಾಥ್​ ಎಂಬವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದರು. ಮಾನವೀಯತೆಯಿಂದ ಗಾಯಗೊಂಡ ಮಂಜುನಾಥನಿಗೆ ಗಂಗಮ್ಮ ಉಪಚರಿಸಿದ್ದರು. ಮಂಜುನಾಥ್​ ತಲೆಗೆ ಅರಿಶಿಣ ಹಚ್ಚಿ, ನೀರು ಕುಡಿಸಿದ್ದರು. ಇದೇ ವಿಚಾರಕ್ಕೆ ಕುಪಿತಗೊಂಡ ಆರೋಪಿಗಳು ಗಂಗಮ್ಮ ಅವರ ಪುತ್ರ ಜೀವನ್​ ಬಳಿ ಗಲಾಟೆ ಮಾಡಿದ್ದಾರೆ. ನಾವು ಹೊಡೆದವರಿಗೆ ಅರಿಶಿಣ ಹಚ್ಚುತ್ತೀರಾ ಎಂದು ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಳಿಕ ಮನೆಯಿಂದ ಮಚ್ಚು ತಂದು ಜೀವನ್​​ ಮೇಲೆ ಬೀಸಿದ್ದು, ಈ ವೇಳೆ ಅಲ್ಲೇ ಇದ್ದ ಗಂಗಮ್ಮ ತಲೆ ಮತ್ತು ಕುತ್ತಿಗೆ ಭಾಗಮನ್ನು ಮಚ್ಚು ಸಿಳಿದೆ. ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದ್ದು, ಹಳೆಯ ದ್ವೇಷದ ಹಿನ್ನಲೆ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಪತ್ನಿ ಪಾಲಿಗೆ ಪ್ರೀತಿಸಿ ಮದುವೆಯಾದಾತನೇ ವಿಲನ್​: ಪತಿ ಅಟ್ಟಹಾಸಕ್ಕೆ 6 ತಿಂಗಳ ಭ್ರೂಣ ಸಾವು

ಹಳೆಯ ದ್ವೇಷಕ್ಕೆ ಹರಿದ ನೆತ್ತರು

ಮೃತ ಗಂಗಮ್ಮ ಅವರ ಮಗ ಜೀವನ್​ ಮೇಲೆ ಆರೋಪಿಗಳಿಗೆ ಹಳೆಯ ದ್ವೇಷ ಇತ್ತು ಎನ್ನಲಾಗಿದೆ. ಈ ಹಿಂದೆ ಇದೇ ದುಮ್ಮಳ್ಳಿ ಗ್ರಾಮದಲ್ಲಿ ಜೀವನ್ ಸಂಬಂಧಿಕರ ಮನೆ ಬಾಡಿಗೆ ಪಡೆದು ನಾಗೇಶ್​ ಮತ್ತು ಹರೀಶ್​ ನೆಲೆಸಿದ್ದರು. ಆದರೆ ಬಾಡಿಗೆ ಹಣ ನೀಡಿರಲಿಲ್ಲ. ಹೀಗಾಗಿ ಊರಿನ ಸರ್ಕಲ್​ನಲ್ಲಿ ಹಣ ನೀಡುವಂತೆ ಜೀವನ್​ ಕೇಳಿದ್ದ. ಆ ವೇಳೆ ಇವರ ನಡುವೆ ಗಲಾಟೆ ನಡೆದಿತ್ತು. ಆ ಬಳಿಕ ಜೀವನ್​ ಮನೆ ಮುಂಭಾಗವೇ ಇರುವ ಮನೆಯಲ್ಲಿ ಬಂದು ನೆಲೆಸಿದ್ದ ಆರೋಪಿಗಳು, ಜೀವನ್​​ಗೆ ಗುರಾಯಿಸಿಕೊಂಡೇ ಓಡಾಡುತ್ತಿದ್ದರು. ಇವರ ನಡುವೆ ಆಗಾಗ ಸಣ್ಣ ಪುಟ್ಟ ಗಲಾಟೆ ಸಹ ನಡೆಯುತ್ತಿತ್ತು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್