AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಡಿಸಿಸಿ ಬ್ಯಾಂಕ್​ ‌ಹಗರಣದಲ್ಲಿ ಎಂಪಿ ಪಾತ್ರವೂ ಇದೆ: ಬಿವೈ ರಾಘವೇಂದ್ರ ವಿರುದ್ಧ ಬೇಳೂರು ಗಂಭೀರ ಆರೋಪ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ‌ಹಗರಣ ಸಂಸದ‌ ರಾಘವೇಂದ್ರ ಪಾತ್ರ ಇದೆ. ಈಗ ನಮ್ಮದೇ ಸರಕಾರ ಇದೆ. ಈ ಬಗ್ಗೆ ತನಿಖೆ ಆಗಬೇಕು. ಒಂದೊಂದು‌ ಹುದ್ದೆ ಕೊಡಲು 40 ಲಕ್ಷ ಲಂಚ ಪಡೆದಿದ್ದಾರೆ. ಲಂಚ ಹಣ ಪಡೆಯಲು ಉದ್ಯೋಗಿಗಳಿಗೆ ಬ್ಯಾಂಕ್ ನಲ್ಲೇ ಸಾಲ ಕೊಡಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್​ ‌ಹಗರಣದಲ್ಲಿ ಎಂಪಿ ಪಾತ್ರವೂ ಇದೆ: ಬಿವೈ ರಾಘವೇಂದ್ರ ವಿರುದ್ಧ ಬೇಳೂರು ಗಂಭೀರ ಆರೋಪ
ಬೇಳೂರು ಗೋಪಾಲಕೃಷ್ಣ
Follow us
Basavaraj Yaraganavi
| Updated By: ಆಯೇಷಾ ಬಾನು

Updated on: Nov 08, 2023 | 1:19 PM

ಶಿವಮೊಗ್ಗ, ನ.08: ಶಿವಮೊಗ್ಗ ಡಿಸಿಸಿ ಬ್ಯಾಂಕ್​ನಲ್ಲಿ ‌ಹಗರಣ (DCC Bank Scam) ನಡೆದಿದೆ. ಒಂದೊಂದು‌ ಹುದ್ದೆ ಕೊಡಲು 40 ಲಕ್ಷ ಲಂಚ ಪಡೆದಿದ್ದಾರೆ. ಲಂಚ ಹಣ ಪಡೆಯಲು ಉದ್ಯೋಗಿಗಳಿಗೆ ಬ್ಯಾಂಕ್ ನಲ್ಲೇ ಸಾಲ ಕೊಡಿಸಿದ್ದಾರೆ. ಈ ಹಗರಣದಲ್ಲಿ ಸಂಸದ‌ ರಾಘವೇಂದ್ರ (BY Raghavendra) ಪಾತ್ರ ಇದೆ. ಈಗ ನಮ್ಮದೇ ಸರಕಾರ ಇದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalakrishna) ಅವರು ಗಂಭೀರ ಆರೋಪ ಮಾಡಿದ್ದಾರೆ. ಹಾಗೂ ಬಿಜೆಪಿ ನಾಯಕರು ಬರ ಅಧ್ಯಯನ ಮಾಡುತ್ತಿದ್ದಾರೆ. ಬರಕ್ಕೆ ಮುಖ್ಯಮಂತ್ರಿಗಳು ಪರಿಹಾರ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ವಿಪಕ್ಷ ನಾಯಕನೇ ಇಲ್ಲ. ನಿಮ್ಮ ಕಾಲದಲ್ಲಿ ನೆರೆ ಬಂತು ಏನಾದರೂ ಪರಿಹಾರ ಕೊಟ್ರಾ? ಕೇವಲ ಸಮೀಕ್ಷೆ ಮಾಡಿಕೊಂಡು ಹೋದ್ರಿ ನಿಮ್ಮ ಪ್ರಧಾನಿ, ನಿಮ್ಮ ಸರಕಾರ ಏನಾದರೂ ಪರಿಹಾರ ಕೊಟ್ರಾ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದರು. ಷಡಾಕ್ಷರಿ ವರ್ಗಾವಣೆ ವಿಚಾರ ಏನು ದೊಡ್ಡ ವಿಚಾರವಲ್ಲ. ಆತ ಸಾಕಷ್ಟು ಅಕ್ರಮ ಆಸ್ತಿ ಸಂಪಾದಿಸಿದ್ದಾನೆ. ಆತನ ವಿರುದ್ದ ತನಿಖೆಯಾಗಬೇಕು. ಯಾರು ಯಾರದ್ದೋ ತನಿಖೆ ಮಾಡ್ತಾರೆ ಈತನ ವಿರುದ್ದವು ತನಿಖೆ ನಡೆಸಲಿ. ಇನ್ನು ಕಿಯೋನಿಕ್ಸ್ ಹಗರಣ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ತಪ್ಪು ಮಾಡಿದ್ರೆ ತನಿಖೆ ಮಾಡಲಿ ಎಂದರು.

ಇದನ್ನೂ ಓದಿ: ಬೆಳಗಾವಿ ಬಿಜೆಪಿ-ಕಾಂಗ್ರೆಸ್ ಕಿತ್ತಾಟ: ಸಂಬಳವಿಲ್ಲದೆ ಪರದಾಡುತ್ತಿರುವ ಪೌರ ಕಾರ್ಮಿಕರು

ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಆಸೆ ಇಟ್ಟುಕೊಂಡಿದ್ದೇನೆ

ಲೋಕಸಭಾ ಚುನಾವಣೆಗೆ ನಾನು ಪ್ರಬಲ ಆಕಾಂಕ್ಷಿ. ನಾನು ಈ ಬಾರಿ ಲೋಕಸಭೆಗೆ ಸ್ಪರ್ಧಿಸುವ ಆಸೆ ಹೊಂದಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದೇನೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಎದುರಿಸಲು ನಾನೇ ಪ್ರಬಲ ಸ್ಪರ್ಧಿ ಎಂದರು. ಇದೇ ವೇಳೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ವಿಚಾರ ಸಂಬಂಧ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಗ್ಗೆ ಮಾತನಾಡಲ್ಲ. ನಾನು ಹೇಳೋದು ಎಲ್ಲಾ ಶಾಸಕರಿಗೂ 20:20 ತಿಂಗಳು ಸಚಿವರನ್ನು ‌ಮಾಡಿ. ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ. 20:20 ತಿಂಗಳು ಎಲ್ಲರನ್ನು ಸಚಿವರನ್ನಾಗಿ ಮಾಡಿ. ಅಭಿವೃದ್ಧಿ ಆಗಬೇಕು ಅಂದ್ರೆ‌ ಹೇಗೆ ಬೇಕಾದರೂ ಆಗ್ತದೆ ಎಂದರು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಯಾರು ಅನ್ನೋದೆ ನನಗೆ ಗೊತ್ತಿಲ್ಲ. ನಾನು‌ ಕೇವಲ ಶಾಸಕ ಅಷ್ಟೇ. ಮೊದಲು ಮಧು ಬಂಗಾರಪ್ಪ ಉಸ್ತುವಾರಿ ಸಚಿವರಾಗಿದ್ದರಂತೆ. ಈಗ ಉಸ್ತುವಾರಿ ಸಚಿವರು ಯಾರು ಅಂತಾ ನನಗೆ ಗೊತ್ತಿಲ್ಲ ಇವತ್ತು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೆಡಿಪಿ ಸಭೆ ಇದೆಯಂತೆ ಕೆಡಿಪಿ ಸಭೆಗೆ ನನಗೆ ಆಹ್ವಾನವಿಲ್ಲ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​