AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಿಂದ ತಿರುಪತಿ ಮಾರ್ಗವಾಗಿ ಚೆನ್ನೈಗೆ ಹೊಸ ರೈಲು; ನೂತನ ರೈಲು ಸೇವೆಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ

ಜಿಲ್ಲೆಯಲ್ಲಿ ತಮಿಳು ಸಮಾಜದ ಜನರು ಹೆಚ್ಚಿದ್ದು, ಚೆನ್ನೈಗೆ ತೆರಳಲು ಜನರಿಗೆ ಅನುಕೂಲವಾಗಲಿದೆ. ನಾಲ್ಕು ರೇಲ್ವೆ ಪ್ರೈಓವರ್ ಕಾಮಗಾರಿ ಶಿವಮೊಗ್ಗದಲ್ಲಿ ನಡೆಯುತ್ತಿದೆ.

ಶಿವಮೊಗ್ಗದಿಂದ ತಿರುಪತಿ ಮಾರ್ಗವಾಗಿ ಚೆನ್ನೈಗೆ ಹೊಸ ರೈಲು; ನೂತನ ರೈಲು ಸೇವೆಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ
ಸಂಸದ ಬಿ ವೈ ರಾಘವೇಂದ್ರ
TV9 Web
| Edited By: |

Updated on: Apr 17, 2022 | 7:48 PM

Share

ಶಿವಮೊಗ್ಗ: ಶಿವಮೊಗ್ಗದಿಂದ ತಿರುಪತಿಗೆ ಮಾರ್ಗವಾಗಿ ಚನ್ನೈ ಸಂಪರ್ಕಿಸುವ ನೂತನ ರೈಲು (New Train) ಸೇವೆಗೆ ಸಂಸದ ಬಿ ವೈ ರಾಘವೇಂದ್ರ ಚಾಲನೆ ನೀಡಿದ್ದಾರೆ.  ಇಂದಿನಿಂದ ಶಿವಮೊಗ್ಗದಿಂದ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗ ವಾಗಿ ಚೆನ್ನೈಗೆ ರೈಲು ತೆರಳುತ್ತದೆ. ಈ ಕುರಿತಾಗಿ ಸಂಸದ ಬಿ.ವೈ ರಾಘವೇಂದ್ರ ಹೇಳಿಕೆ ನೀಡಿದ್ದು, ಮಲೆನಾಡಿನ ಜನರಿಗೆ ತಿರುಪತಿ ದರ್ಶನಕ್ಕೆ ಈ ವಿಶೇಷ ರೈಲಿನಿಂದ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ತಮಿಳು ಸಮಾಜದ ಜನರು ಹೆಚ್ಚಿದ್ದು, ಚೆನ್ನೈಗೆ ತೆರಳಲು ಜನರಿಗೆ ಅನುಕೂಲವಾಗಲಿದೆ. ನಾಲ್ಕು ರೇಲ್ವೆ ಪ್ರೈಓವರ್ ಕಾಮಗಾರಿ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಎರಡು ರೇಲ್ವೆ ಅಂಡರ್ ಗ್ರೌಂಡ್ ಕಾಮಗಾರಿ ನಡೆಯುತ್ತಿದೆ. ಕೋಟೆಗಂಗೂರುನಲ್ಲಿ ರೇಲ್ವೇ ಕೋಚಿಂಗ್ ಡಿಪೋ ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದ್ದು, ಪಿಎಂ ಮೋದಿಗೆ ಸಂಸದ ಬಿ.ವೈ ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವ ಕೆ.ಸಿ ನಾರಾಯಣ ಗೌಡ, ಎಂಎಲ್​ಸಿಗಳಾದ ರುದ್ರೇಗೌಡ, ಆಯನೂರು ಮಂಜುನಾಥ್, ಡಿಸಿ ಸೇಲ್ವಮಣಿ, ಸಿಇಓ ವೈಶಾಲಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ರಂಜಾನ್ ಮಾಸ‌ ಹಿನ್ನೆಲೆ ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ರಂಜಾನ್ ಮಾಸ‌ ಹಿನ್ನೆಲೆ ಸಿದ್ದರಾಮಯ್ಯರಿಂದ ಇಫ್ತಿಯಾರ್ ಕೂಟವನ್ನು ನಗರದ ಬೆಂಗಳೂರು ರಸ್ತೆಯ ಮಿಲನ್ ಫಂಕ್ಷನ್ ಹಾಲ್‌ನಲ್ಲಿ ಆಯೋಜನೆ ಮಾಡಲಾಗಿದ್ದು, ಬಿಳಿ ಬಣ್ಣದ ಮುಸ್ಲಿಂ ಟೋಪಿ ಹಾಕಿಕೊಂಡು ಇಫ್ತಿಯಾರ್ ಕೂಟದಲ್ಲಿ ಭಾಗಿಯಾಗಿದ್ದಾರೆ. ಮಗ ಡಾ. ಯತೀಂದ್ರ ಸಿದ್ದರಾಮಯ್ಯ ಸಹಾ ಟೋಪಿ ಹಾಕಿಕೊಂಡು ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಇಫ್ತಿಯಾರ್ ಕೂಟ ಆರಂಭವಾಗಿದ್ದು, ರಾತ್ರಿ 9 ಗಂಟೆವರೆಗೂ ಇಫ್ತಿಯಾರ್ ಕೂಟ ನಡೆಯಲಿದೆ. ಪ್ರತಿವರ್ಷದಂತೆ ಈ ಬಾರಿಯೂ ಇಫ್ತಿಯಾರ್ ಕೂಟ ಆಯೋಜನೆ ಮಾಡಿದ್ದು, ಶಾಸಕರಾದ ತನ್ವೀರ್ ಸೇಠ್, ಡಾ.ಹೆಚ್. ಪಿ ಮಂಜುನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ಸೇರಿ ಹಲವು ಮುಸ್ಲಿಂ ಮುಖಂಡರು ಭಾಗಿಯಾಗಿದ್ದಾರೆ.

ಇದನ್ನೂ ಓದಿ:

Bhavana Menon: ಸಾಂಪ್ರದಾಯಿಕ ಲುಕ್​ನಲ್ಲಿ ಮಿಂಚಿದ ‘ಟಗರು’ ಬೆಡಗಿ; ಭಾವನಾ ಮೆನನ್ ಕ್ಯೂಟ್ ಫೋಟೋ ಆಲ್ಬಂ

ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆದುಹಾಕಲು ಮೇ3ರ ವರೆಗೆ ಗಡುವು; ದೇಶಭಕ್ತ ಹಿಂದೂಗಳು ಬೆಂಬಲಿಸುವಂತೆ ಕರೆ ನೀಡಿದ ಎಂಎನ್ಎಸ್

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು