AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಿಂದ ತಿರುಪತಿ ಮಾರ್ಗವಾಗಿ ಚೆನ್ನೈಗೆ ಹೊಸ ರೈಲು; ನೂತನ ರೈಲು ಸೇವೆಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ

ಜಿಲ್ಲೆಯಲ್ಲಿ ತಮಿಳು ಸಮಾಜದ ಜನರು ಹೆಚ್ಚಿದ್ದು, ಚೆನ್ನೈಗೆ ತೆರಳಲು ಜನರಿಗೆ ಅನುಕೂಲವಾಗಲಿದೆ. ನಾಲ್ಕು ರೇಲ್ವೆ ಪ್ರೈಓವರ್ ಕಾಮಗಾರಿ ಶಿವಮೊಗ್ಗದಲ್ಲಿ ನಡೆಯುತ್ತಿದೆ.

ಶಿವಮೊಗ್ಗದಿಂದ ತಿರುಪತಿ ಮಾರ್ಗವಾಗಿ ಚೆನ್ನೈಗೆ ಹೊಸ ರೈಲು; ನೂತನ ರೈಲು ಸೇವೆಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ
ಸಂಸದ ಬಿ ವೈ ರಾಘವೇಂದ್ರ
TV9 Web
| Edited By: |

Updated on: Apr 17, 2022 | 7:48 PM

Share

ಶಿವಮೊಗ್ಗ: ಶಿವಮೊಗ್ಗದಿಂದ ತಿರುಪತಿಗೆ ಮಾರ್ಗವಾಗಿ ಚನ್ನೈ ಸಂಪರ್ಕಿಸುವ ನೂತನ ರೈಲು (New Train) ಸೇವೆಗೆ ಸಂಸದ ಬಿ ವೈ ರಾಘವೇಂದ್ರ ಚಾಲನೆ ನೀಡಿದ್ದಾರೆ.  ಇಂದಿನಿಂದ ಶಿವಮೊಗ್ಗದಿಂದ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗ ವಾಗಿ ಚೆನ್ನೈಗೆ ರೈಲು ತೆರಳುತ್ತದೆ. ಈ ಕುರಿತಾಗಿ ಸಂಸದ ಬಿ.ವೈ ರಾಘವೇಂದ್ರ ಹೇಳಿಕೆ ನೀಡಿದ್ದು, ಮಲೆನಾಡಿನ ಜನರಿಗೆ ತಿರುಪತಿ ದರ್ಶನಕ್ಕೆ ಈ ವಿಶೇಷ ರೈಲಿನಿಂದ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ತಮಿಳು ಸಮಾಜದ ಜನರು ಹೆಚ್ಚಿದ್ದು, ಚೆನ್ನೈಗೆ ತೆರಳಲು ಜನರಿಗೆ ಅನುಕೂಲವಾಗಲಿದೆ. ನಾಲ್ಕು ರೇಲ್ವೆ ಪ್ರೈಓವರ್ ಕಾಮಗಾರಿ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಎರಡು ರೇಲ್ವೆ ಅಂಡರ್ ಗ್ರೌಂಡ್ ಕಾಮಗಾರಿ ನಡೆಯುತ್ತಿದೆ. ಕೋಟೆಗಂಗೂರುನಲ್ಲಿ ರೇಲ್ವೇ ಕೋಚಿಂಗ್ ಡಿಪೋ ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದ್ದು, ಪಿಎಂ ಮೋದಿಗೆ ಸಂಸದ ಬಿ.ವೈ ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವ ಕೆ.ಸಿ ನಾರಾಯಣ ಗೌಡ, ಎಂಎಲ್​ಸಿಗಳಾದ ರುದ್ರೇಗೌಡ, ಆಯನೂರು ಮಂಜುನಾಥ್, ಡಿಸಿ ಸೇಲ್ವಮಣಿ, ಸಿಇಓ ವೈಶಾಲಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ರಂಜಾನ್ ಮಾಸ‌ ಹಿನ್ನೆಲೆ ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ರಂಜಾನ್ ಮಾಸ‌ ಹಿನ್ನೆಲೆ ಸಿದ್ದರಾಮಯ್ಯರಿಂದ ಇಫ್ತಿಯಾರ್ ಕೂಟವನ್ನು ನಗರದ ಬೆಂಗಳೂರು ರಸ್ತೆಯ ಮಿಲನ್ ಫಂಕ್ಷನ್ ಹಾಲ್‌ನಲ್ಲಿ ಆಯೋಜನೆ ಮಾಡಲಾಗಿದ್ದು, ಬಿಳಿ ಬಣ್ಣದ ಮುಸ್ಲಿಂ ಟೋಪಿ ಹಾಕಿಕೊಂಡು ಇಫ್ತಿಯಾರ್ ಕೂಟದಲ್ಲಿ ಭಾಗಿಯಾಗಿದ್ದಾರೆ. ಮಗ ಡಾ. ಯತೀಂದ್ರ ಸಿದ್ದರಾಮಯ್ಯ ಸಹಾ ಟೋಪಿ ಹಾಕಿಕೊಂಡು ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಇಫ್ತಿಯಾರ್ ಕೂಟ ಆರಂಭವಾಗಿದ್ದು, ರಾತ್ರಿ 9 ಗಂಟೆವರೆಗೂ ಇಫ್ತಿಯಾರ್ ಕೂಟ ನಡೆಯಲಿದೆ. ಪ್ರತಿವರ್ಷದಂತೆ ಈ ಬಾರಿಯೂ ಇಫ್ತಿಯಾರ್ ಕೂಟ ಆಯೋಜನೆ ಮಾಡಿದ್ದು, ಶಾಸಕರಾದ ತನ್ವೀರ್ ಸೇಠ್, ಡಾ.ಹೆಚ್. ಪಿ ಮಂಜುನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ಸೇರಿ ಹಲವು ಮುಸ್ಲಿಂ ಮುಖಂಡರು ಭಾಗಿಯಾಗಿದ್ದಾರೆ.

ಇದನ್ನೂ ಓದಿ:

Bhavana Menon: ಸಾಂಪ್ರದಾಯಿಕ ಲುಕ್​ನಲ್ಲಿ ಮಿಂಚಿದ ‘ಟಗರು’ ಬೆಡಗಿ; ಭಾವನಾ ಮೆನನ್ ಕ್ಯೂಟ್ ಫೋಟೋ ಆಲ್ಬಂ

ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆದುಹಾಕಲು ಮೇ3ರ ವರೆಗೆ ಗಡುವು; ದೇಶಭಕ್ತ ಹಿಂದೂಗಳು ಬೆಂಬಲಿಸುವಂತೆ ಕರೆ ನೀಡಿದ ಎಂಎನ್ಎಸ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್