AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನಾಗಿರೋ ಮೋರಿ, ರಸ್ತೆ ಅಗೆದು ಕಾಮಗಾರಿ, ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ದುರ್ಬಳಕೆ

ಶಿವಮೊಗ್ಗ: ಶಿವಮೊಗ್ಗ ನಗರದ ತುಂಬೆಲ್ಲಾ ಬರೀ ಸ್ಮಾರ್ಟ್ ಸಿಟಿ ಕಾಮಗಾರಿಗಳೇ. ಆದ್ರೆ, ನೂರಾರು ಕೋಟಿ ರೂ ವೆಚ್ಚದಲ್ಲಿ ನಡೀತಿರೋ ಈ ಕಾಮಗಾರಿಗಳನ್ನ ನೋಡಿದ್ರೆ ಸಾರ್ವಜನಿಕರೇ ಬೆಚ್ಚಿ ಬೀಳ್ತಿದ್ದಾರೆ. ಸರ್ಕಾರದ ದುಡ್ಡಲ್ಲಿ ಕಾಮಗಾರಿ ಮಾಡ್ಕೊಂಡು, ಜನರಿಗೆ ಟಾರ್ಚರ್ ಕೊಡ್ತಿದ್ದಾರೆ. ಇರುವ ಮೋರಿಯನ್ನೇ ಒಡೆದು, ಹೊಸ ಮೋರಿ ಕಟ್ತಿದ್ದಾರೆ. ಇರೋ ರಸ್ತೆ ಕಿತ್ತು ಹೊಸ ರಸ್ತೆ ಮಾಡ್ತಿದ್ದಾರೆ. ಚೆನ್ನಾಗಿರೋ ಪಾರ್ಕ್​ ಹಾಳು ಮಾಡಿ ಕೋಟಿ ಕೋಟಿ ವೆಚ್ಚದಲ್ಲಿ ಹೊಸ ಪಾರ್ಕ್ ಕಾಮಗಾರಿಗಳು ನಡೀತಿವೆ. ಅಂದಹಾಗೆ, ಎಲ್ಲಾ ಚೆನ್ನಾಗಿದ್ದೂ ಈ ರೀತಿ […]

ಚೆನ್ನಾಗಿರೋ ಮೋರಿ, ರಸ್ತೆ ಅಗೆದು ಕಾಮಗಾರಿ, ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ದುರ್ಬಳಕೆ
ಸಾಧು ಶ್ರೀನಾಥ್​
|

Updated on:Feb 21, 2020 | 12:47 PM

Share

ಶಿವಮೊಗ್ಗ: ಶಿವಮೊಗ್ಗ ನಗರದ ತುಂಬೆಲ್ಲಾ ಬರೀ ಸ್ಮಾರ್ಟ್ ಸಿಟಿ ಕಾಮಗಾರಿಗಳೇ. ಆದ್ರೆ, ನೂರಾರು ಕೋಟಿ ರೂ ವೆಚ್ಚದಲ್ಲಿ ನಡೀತಿರೋ ಈ ಕಾಮಗಾರಿಗಳನ್ನ ನೋಡಿದ್ರೆ ಸಾರ್ವಜನಿಕರೇ ಬೆಚ್ಚಿ ಬೀಳ್ತಿದ್ದಾರೆ. ಸರ್ಕಾರದ ದುಡ್ಡಲ್ಲಿ ಕಾಮಗಾರಿ ಮಾಡ್ಕೊಂಡು, ಜನರಿಗೆ ಟಾರ್ಚರ್ ಕೊಡ್ತಿದ್ದಾರೆ.

ಇರುವ ಮೋರಿಯನ್ನೇ ಒಡೆದು, ಹೊಸ ಮೋರಿ ಕಟ್ತಿದ್ದಾರೆ. ಇರೋ ರಸ್ತೆ ಕಿತ್ತು ಹೊಸ ರಸ್ತೆ ಮಾಡ್ತಿದ್ದಾರೆ. ಚೆನ್ನಾಗಿರೋ ಪಾರ್ಕ್​ ಹಾಳು ಮಾಡಿ ಕೋಟಿ ಕೋಟಿ ವೆಚ್ಚದಲ್ಲಿ ಹೊಸ ಪಾರ್ಕ್ ಕಾಮಗಾರಿಗಳು ನಡೀತಿವೆ. ಅಂದಹಾಗೆ, ಎಲ್ಲಾ ಚೆನ್ನಾಗಿದ್ದೂ ಈ ರೀತಿ ಕಾಮಗಾರಿ ಹೆಸ್ರಲ್ಲಿ ನಗರವನ್ನ ಹಾಳು ಗೆಡವಿ, ಹಣ ಪೋಲು ಮಾಡ್ತಿರೋದು ಶಿವಮೊಗ್ಗ ನಗರದಲ್ಲಿ.

ಸ್ಮಾರ್ಟ್ ಸಿಟಿ ಹೆಸರಿನ ಕಾಮಗಾರಿಗಳಲ್ಲಿ ಮನೆಮುಂದಿನ ಮೋರಿ, ಚರಂಡಿಗಳು, ಕುಡಿಯುವ ನೀರಿನ ಹೊಸ ಸಂಪರ್ಕ ವಿವಿಧ ಕಾಮಗಾರಿಗಳು ಅವೈಜ್ಞನಿಕವಾಗಿ ನಿರ್ಮಿಸ್ತಿದ್ದಾರೆ. ಉತ್ತಮ ಗುಣಮಟ್ಟ ಮತ್ತು ಕಟ್ಟುವ ವಿಧಾನವು ಸರಿಯಾಗಿಲ್ಲ. ಇದ್ರಿಂದ ಶಿವಮೊಗ್ಗ ಜನ ಕಂಗೆಟ್ಟು ಹೋಗಿದ್ದಾರೆ. ಈ ರೀತಿ ಎಡವಟ್ಟುಗಳನ್ನ ಮಾಡಿದ್ರೆ ನಗರ ಸ್ಮಾರ್ಟ್ ಆಗಲು ಹೇಗೆ ಸಾಧ್ಯ ಅಂತಾ ಆಕ್ರೋಶ ಹೊರಹಾಕ್ತಿದ್ದಾರೆ.

ಸ್ಮಾರ್ಟ್ ನಗರವನ್ನಾಗಿಸುವ ಸಲುವಾಗಿ ಮನಸ್ಸಿಗೆ ಬಂದಂತೆ ನಗರದ ತುಂಬೆಲ್ಲಾ ಮೋರಿ, ಚರಂಡಿಗಳನ್ನ ಹೊಡೆದು, ಮತ್ತೆ ಹೊಸ ಕಾಮಗಾರಿಗಳನ್ನ ಮಾಡ್ತಿದ್ದಾರೆ. ಶಿವಮೊಗ್ಗ ಪಾಲಿಕೆ ಆಯುಕ್ತರಾದ ಚಿದಾನಂದ ವಟಾರೆ ಅವರೇ, ಸ್ಮಾರ್ಟ್ ಸಿಟಿ ಎಂಡಿ ಆಗಿದ್ದಾರೆ. ಪಾಲಿಕೆ ಆಯುಕ್ತ ಮತ್ತು ಎಂಡಿ ಎರಡರ ಜವಾಬ್ದಾರಿಯನ್ನೇ ಒಬ್ಬರೇ ನಿರ್ವಹಿಸ್ತಿರೋದು ಸದ್ಯ ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆ ಮತ್ತು ಗೋಲ್ ಮಾಲ್ ನಿಂದ ಕೂಡಿವೆ. ಆದ್ರೆ, ಈ ಬಗ್ಗೆ ಖುದ್ದಾಗಿ ದೂರು ನೀಡಿದ್ರೆ ಪರಿಶೀಲಿಸೋದಾಗಿ ಆಯುಕ್ತರು ಹೇಳ್ತಿದ್ದಾರೆ.

ಒಟ್ಟಾರೆ ಶಿವಮೊಗ್ಗ ನಗರವು ಸ್ಮಾರ್ಟ್ ಆಗುತ್ತದೇ ಬಿಡುತ್ತದೆಯೋ ಗೊತ್ತಿಲ್ಲ. ಈ ಕಾಮಗಾರಿ ಮಾಡ್ತಿರೋ ಗುತ್ತಿಗೆದಾರರು ಮತ್ತು ಅಧಿಕಾರಗಳು ಮಾತ್ರ ಫುಲ್ ಸ್ಮಾರ್ಟ್ ಆಗ್ತಿದ್ದಾರೆ. ದಿನನಿತ್ಯ ಜನರು ಕಾಮಗಾರಿ ಧೂಳಿನಲ್ಲೇ ವನವಾಸ ಅನುಭವಿಸ್ತಿರೋದು ವಿಪರ್ಯಾಸ.

Published On - 12:41 pm, Fri, 21 February 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!