AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಉದ್ಯಾನವನಕ್ಕೆ ಪುನೀತ್ ಹೆಸರು; ಪಾರ್ಕ್​ನಲ್ಲಿ ಗಿಡ ನೆಡುವ ಮೂಲಕ ಅಪ್ಪು ನಮನ ಕಾರ್ಯಕ್ರಮಕ್ಕೆ ಚಾಲನೆ

ಪುನೀತ್ ಅರಣ್ಯ ಇಲಾಖೆಗೆ ಸಂಬಂಧಿಸಿದ ಡಾಕ್ಯುಮೆಂಟ್ರಿ ಮಾಡುತ್ತಿದ್ದರು. ಪುನೀತ್ ಅವರಿಗೆ ಅರಣ್ಯ ಸಂಪತ್ತು ಹಾಗೂ ಪರಿಸರ ಮತ್ತು ವನ್ಯಜೀವಿಗಳ ಕುರಿತು ಸಾಕಷ್ಟು ಕಾಳಜಿ ಇತ್ತು ಹೀಗಾಗಿ ಅವರ ಹೆಸರನ್ನು ಉದ್ಯಾನವನಕ್ಕೆ ಇಡಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಶಿವಮೊಗ್ಗ: ಉದ್ಯಾನವನಕ್ಕೆ ಪುನೀತ್ ಹೆಸರು; ಪಾರ್ಕ್​ನಲ್ಲಿ ಗಿಡ ನೆಡುವ ಮೂಲಕ ಅಪ್ಪು ನಮನ ಕಾರ್ಯಕ್ರಮಕ್ಕೆ ಚಾಲನೆ
ಉದ್ಯಾನವನಕ್ಕೆ ಪುನೀತ್ ರಾಜ್​ ಕುಮಾರ್ ಹೆಸರು ನಾಮಕರಣ
TV9 Web
| Edited By: |

Updated on: Nov 29, 2021 | 1:58 PM

Share

ಶಿವಮೊಗ್ಗ: ಪುನಿತ್ ರಾಜ್​ಕುಮಾರ್​ ಅಕಾಲಿಕ ಮರಣ ಹೊಂದಿ ಹೆಚ್ಚು ಕಡಿಮೆ ಒಂದು ತಿಂಗಳ ಹತ್ತಿರವಾಯ್ತು. ಮಲೆನಾಡಿನಲ್ಲಿ ಇನ್ನು ಕೂಡಾ ಪುನೀತ್ ಅಗಲಿಕೆ ನೋವು ಎಲ್ಲರನ್ನು ಕಾಡುತ್ತಿದೆ. ಅವರ ಹೆಸರಿನಲ್ಲಿ ನಿತ್ಯ ಅನೇಕ ನಮನ, ಶ್ರದ್ಧಾಂಜಲಿ ಕಾರ್ಯಕ್ರಮಗಳು ನಡೆಯುತ್ತಿವೆ. ಅದರಂತೆ ನಿನ್ನೆ (ನವೆಂಬರ್ 28) ಉದ್ಯಾನವನಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇಡುವ ಮೂಲಕ ವಿಶೇಷ ಗೌರವ ಸಲ್ಲಿಸಿದ್ದಾರೆ. ಶಿವಮೊಗ್ಗದ ಗೋಪಾಲ ಗೌಡ ಬಡಾವಣೆ, ರಂಗನಾಥ್ ಬಡಾವಣೆಯ ನಿವಾಸಿಗಳು ಕೆಲವು ವರ್ಷಗಳ ಹಿಂದೆ ಒಂದು ಪಾರ್ಕ್ ಅಭಿವೃದ್ಧಿ ಮಾಡಿದ್ದರು. ಅವರು ಉಳಿಸಿ ಬೆಳಿಸಿದ ಸುಂದರ ಉದ್ಯಾನವನಕ್ಕೆ ಪುನೀತ್ ರಾಜ್​ಕುಮಾರ್ (Puneeth rajkumar) ಹೆಸರು ನಾಮಕರಣ ಮಾಡುವ ಮೂಲಕ ಸಂತಸ ಪಟ್ಟಿದ್ದಾರೆ. ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ಮಾಡಿ ಈ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಬಂದ ಗಣ್ಯರು ಈ ಉದ್ಯಾನವನದಲ್ಲಿ ಸಸಿಗಳನ್ನು ನೆಡುವ ಮೂಲಕ ಪುನೀತ್ ನಮನ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಚರಣೆ ಮಾಡಿದರು.

ಹೀಗೆ ಪುನೀತ್ ರಾಜ್​ಕುಮಾರ್ ಹೆಸರನ್ನು ಉದ್ಯಾನವನಕ್ಕೆ ಇಟ್ಟಿದ್ದಾರೆ. ಪುನೀತ್ ರಾಜ್​ಕುಮಾರ್ ಸೆಪ್ಟೆಂಬರ್ ತಿಂಗಳಲ್ಲಿ ಶಿವಮೊಗ್ಗದ ಸಕ್ರೆಬೈಲು ಆನೆಬಿಡಾರಕ್ಕೆ ಕೊನೆ ಬಾರಿ ಭೇಟಿ ನೀಡಿದ್ದರು. ಪುನೀತ್ ಅರಣ್ಯ ಇಲಾಖೆಗೆ ಸಂಬಂಧಿಸಿದ ಡಾಕ್ಯುಮೆಂಟ್ರಿ ಮಾಡುತ್ತಿದ್ದರು. ಪುನೀತ್ ಅವರಿಗೆ ಅರಣ್ಯ ಸಂಪತ್ತು ಹಾಗೂ ಪರಿಸರ ಮತ್ತು ವನ್ಯಜೀವಿಗಳ ಕುರಿತು ಸಾಕಷ್ಟು ಕಾಳಜಿ ಇತ್ತು ಹೀಗಾಗಿ ಅವರ ಹೆಸರನ್ನು ಉದ್ಯಾನವನಕ್ಕೆ ಇಡಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಪುನೀತ್ ಅವರ ಕಾಳಜಿಗೆ ಮನಸೋತು ಶಿವಮೊಗ್ಗದಲ್ಲಿನ ಬಡಾವಣೆಯ ಜನರೇ ಉದ್ಯಾನವನ ಮಾಡಿದ್ದರು. ಸದ್ಯ ಅದೇ ಉದ್ಯಾನವನಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇಡುವ ಮೂಲಕ ಯುವಕರು ಮತ್ತು ಹಿರಿಯರು ವಿಶೇಷ ಗೌರವವನ್ನು ನೀಡಿದ್ದಾರೆ. ಇನ್ನೂ ಈ ಉದ್ಯಾವನವನದ ಮೂಲಕ ಪುನೀತ್ ಸದಾ ಜನರೊಂದಿಗೆ ಇರುತ್ತಾರೆ ಎನ್ನುವ ಭಾವನೆ ಇಲ್ಲಿಯವರದ್ದಾಗಿದೆ.

ವರದಿ: ಬಸವರಾಜ್ ಯರಗಣವಿ

ಇದನ್ನೂ ಓದಿ: ಶಿವಮೊಗ್ಗ: ಬಡಾವಣೆಗೆ ಪುನೀತ್​ ರಾಜ್​ಕುಮಾರ್​ ಹೆಸರು; ಮಲೆನಾಡಿಗರಿಂದ ಅಪ್ಪುಗೆ ವಿಶೇಷ ಗೌರವ

ದೇವರ ಮಧ್ಯೆ ಪುನೀತ್​ ಫೋಟೋ ಇಟ್ಟು ಪೂಜೆ, ಸದ್ಯದಲ್ಲೇ ದೇವಸ್ಥಾನ ನವೀಕರಿಸಿ ನಿತ್ಯಪೂಜೆ; ಇದು ಅಪ್ಪು ಅಭಿಮಾನಿ ಅಭಿಲಾಷೆ

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್