Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಉದ್ಯಾನವನಕ್ಕೆ ಪುನೀತ್ ಹೆಸರು; ಪಾರ್ಕ್​ನಲ್ಲಿ ಗಿಡ ನೆಡುವ ಮೂಲಕ ಅಪ್ಪು ನಮನ ಕಾರ್ಯಕ್ರಮಕ್ಕೆ ಚಾಲನೆ

ಪುನೀತ್ ಅರಣ್ಯ ಇಲಾಖೆಗೆ ಸಂಬಂಧಿಸಿದ ಡಾಕ್ಯುಮೆಂಟ್ರಿ ಮಾಡುತ್ತಿದ್ದರು. ಪುನೀತ್ ಅವರಿಗೆ ಅರಣ್ಯ ಸಂಪತ್ತು ಹಾಗೂ ಪರಿಸರ ಮತ್ತು ವನ್ಯಜೀವಿಗಳ ಕುರಿತು ಸಾಕಷ್ಟು ಕಾಳಜಿ ಇತ್ತು ಹೀಗಾಗಿ ಅವರ ಹೆಸರನ್ನು ಉದ್ಯಾನವನಕ್ಕೆ ಇಡಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಶಿವಮೊಗ್ಗ: ಉದ್ಯಾನವನಕ್ಕೆ ಪುನೀತ್ ಹೆಸರು; ಪಾರ್ಕ್​ನಲ್ಲಿ ಗಿಡ ನೆಡುವ ಮೂಲಕ ಅಪ್ಪು ನಮನ ಕಾರ್ಯಕ್ರಮಕ್ಕೆ ಚಾಲನೆ
ಉದ್ಯಾನವನಕ್ಕೆ ಪುನೀತ್ ರಾಜ್​ ಕುಮಾರ್ ಹೆಸರು ನಾಮಕರಣ
Follow us
TV9 Web
| Updated By: preethi shettigar

Updated on: Nov 29, 2021 | 1:58 PM

ಶಿವಮೊಗ್ಗ: ಪುನಿತ್ ರಾಜ್​ಕುಮಾರ್​ ಅಕಾಲಿಕ ಮರಣ ಹೊಂದಿ ಹೆಚ್ಚು ಕಡಿಮೆ ಒಂದು ತಿಂಗಳ ಹತ್ತಿರವಾಯ್ತು. ಮಲೆನಾಡಿನಲ್ಲಿ ಇನ್ನು ಕೂಡಾ ಪುನೀತ್ ಅಗಲಿಕೆ ನೋವು ಎಲ್ಲರನ್ನು ಕಾಡುತ್ತಿದೆ. ಅವರ ಹೆಸರಿನಲ್ಲಿ ನಿತ್ಯ ಅನೇಕ ನಮನ, ಶ್ರದ್ಧಾಂಜಲಿ ಕಾರ್ಯಕ್ರಮಗಳು ನಡೆಯುತ್ತಿವೆ. ಅದರಂತೆ ನಿನ್ನೆ (ನವೆಂಬರ್ 28) ಉದ್ಯಾನವನಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇಡುವ ಮೂಲಕ ವಿಶೇಷ ಗೌರವ ಸಲ್ಲಿಸಿದ್ದಾರೆ. ಶಿವಮೊಗ್ಗದ ಗೋಪಾಲ ಗೌಡ ಬಡಾವಣೆ, ರಂಗನಾಥ್ ಬಡಾವಣೆಯ ನಿವಾಸಿಗಳು ಕೆಲವು ವರ್ಷಗಳ ಹಿಂದೆ ಒಂದು ಪಾರ್ಕ್ ಅಭಿವೃದ್ಧಿ ಮಾಡಿದ್ದರು. ಅವರು ಉಳಿಸಿ ಬೆಳಿಸಿದ ಸುಂದರ ಉದ್ಯಾನವನಕ್ಕೆ ಪುನೀತ್ ರಾಜ್​ಕುಮಾರ್ (Puneeth rajkumar) ಹೆಸರು ನಾಮಕರಣ ಮಾಡುವ ಮೂಲಕ ಸಂತಸ ಪಟ್ಟಿದ್ದಾರೆ. ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ಮಾಡಿ ಈ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಬಂದ ಗಣ್ಯರು ಈ ಉದ್ಯಾನವನದಲ್ಲಿ ಸಸಿಗಳನ್ನು ನೆಡುವ ಮೂಲಕ ಪುನೀತ್ ನಮನ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಚರಣೆ ಮಾಡಿದರು.

ಹೀಗೆ ಪುನೀತ್ ರಾಜ್​ಕುಮಾರ್ ಹೆಸರನ್ನು ಉದ್ಯಾನವನಕ್ಕೆ ಇಟ್ಟಿದ್ದಾರೆ. ಪುನೀತ್ ರಾಜ್​ಕುಮಾರ್ ಸೆಪ್ಟೆಂಬರ್ ತಿಂಗಳಲ್ಲಿ ಶಿವಮೊಗ್ಗದ ಸಕ್ರೆಬೈಲು ಆನೆಬಿಡಾರಕ್ಕೆ ಕೊನೆ ಬಾರಿ ಭೇಟಿ ನೀಡಿದ್ದರು. ಪುನೀತ್ ಅರಣ್ಯ ಇಲಾಖೆಗೆ ಸಂಬಂಧಿಸಿದ ಡಾಕ್ಯುಮೆಂಟ್ರಿ ಮಾಡುತ್ತಿದ್ದರು. ಪುನೀತ್ ಅವರಿಗೆ ಅರಣ್ಯ ಸಂಪತ್ತು ಹಾಗೂ ಪರಿಸರ ಮತ್ತು ವನ್ಯಜೀವಿಗಳ ಕುರಿತು ಸಾಕಷ್ಟು ಕಾಳಜಿ ಇತ್ತು ಹೀಗಾಗಿ ಅವರ ಹೆಸರನ್ನು ಉದ್ಯಾನವನಕ್ಕೆ ಇಡಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಪುನೀತ್ ಅವರ ಕಾಳಜಿಗೆ ಮನಸೋತು ಶಿವಮೊಗ್ಗದಲ್ಲಿನ ಬಡಾವಣೆಯ ಜನರೇ ಉದ್ಯಾನವನ ಮಾಡಿದ್ದರು. ಸದ್ಯ ಅದೇ ಉದ್ಯಾನವನಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇಡುವ ಮೂಲಕ ಯುವಕರು ಮತ್ತು ಹಿರಿಯರು ವಿಶೇಷ ಗೌರವವನ್ನು ನೀಡಿದ್ದಾರೆ. ಇನ್ನೂ ಈ ಉದ್ಯಾವನವನದ ಮೂಲಕ ಪುನೀತ್ ಸದಾ ಜನರೊಂದಿಗೆ ಇರುತ್ತಾರೆ ಎನ್ನುವ ಭಾವನೆ ಇಲ್ಲಿಯವರದ್ದಾಗಿದೆ.

ವರದಿ: ಬಸವರಾಜ್ ಯರಗಣವಿ

ಇದನ್ನೂ ಓದಿ: ಶಿವಮೊಗ್ಗ: ಬಡಾವಣೆಗೆ ಪುನೀತ್​ ರಾಜ್​ಕುಮಾರ್​ ಹೆಸರು; ಮಲೆನಾಡಿಗರಿಂದ ಅಪ್ಪುಗೆ ವಿಶೇಷ ಗೌರವ

ದೇವರ ಮಧ್ಯೆ ಪುನೀತ್​ ಫೋಟೋ ಇಟ್ಟು ಪೂಜೆ, ಸದ್ಯದಲ್ಲೇ ದೇವಸ್ಥಾನ ನವೀಕರಿಸಿ ನಿತ್ಯಪೂಜೆ; ಇದು ಅಪ್ಪು ಅಭಿಮಾನಿ ಅಭಿಲಾಷೆ

ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ