Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ

ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ
ಶಿವಮೊಗ್ಗ ವಿಮಾನ ನಿಲ್ದಾಣ
Follow us
TV9 Web
| Updated By: ಆಯೇಷಾ ಬಾನು

Updated on:Feb 24, 2023 | 1:00 PM

ಶಿವಮೊಗ್ಗ: ಜಿಲ್ಲೆಯಲ್ಲಿ ನೂತನ ಏರ್ ಪೋರ್ಟ್ ಉದ್ಘಾಟನೆಗೆ ಕ್ಷಣಗಣೆನೆ ಶುರುವಾಗಿದೆ. ದಶಕಗಳ ಬಳಿಕ ಮಲೆನಾಡಿನಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ದೇಶದ ಪ್ರಧಾನಿಗಳು ಚಾಲನೆ ನೀಡಲಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸದರ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅದನ್ನು ರೀ ಟ್ವೀಟ್ ಮಾಡಿದ್ದು ಶಿವಮೊಗ್ಗದ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕೇವಲ ವಿಮಾನ ನಿಲ್ದಾಣವಾಗದೆ ಮಲೆನಾಡು ಪ್ರದೇಶದ ಪರಿವರ್ತನೆಯ ಗೇಟ್‌ವೇ ಆಗಲಿದೆ ಎಂದು ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿದ್ದು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಮತ್ತೊಂದೆಡೆ ಇದನ್ನು ಪ್ರಧಾನಿಯವರು ರಿಟ್ವೀಟ್ ಮಾಡಿದ್ದಾರೆ.

ಮೋದಿಗೆ ಧನ್ಯವಾದ ತಿಳಿಸಿದ ಬಿವೈ ರಾಘವೇಂದ್ರ

ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ. ಸಂಪರ್ಕ ಕ್ರಾಂತಿ ಜೊತೆಗೆ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಸಾಧಿಸಲಿ. ಇನ್ನಷ್ಟು ಅಭಿವೃದ್ಧಿ ಸಾಧಿಸಲೆಂದು ಹಾರೈಸಿದ ಮೋದಿಗೆ ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಧನ್ಯವಾದ ತಿಳಿಸಿದ್ದಾರೆ. ಫೆ.27ರಂದು ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಹಲವು ಅಭಿವೃದ್ಧಿಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಡಿಗಲ್ಲು ಹಾಕುವ ಮೂಲಕ ಆಶೀರ್ವದಿಸಬೇಕೆಂದು ಕೋರಿಕೊಳ್ಳುತ್ತೇನೆ. ಶಿವಮೊಗ್ಗದ ಜನತೆ ಪರವಾಗಿ ತಮಗೆ ಆತ್ಮೀಯ ಸ್ವಾಗತ ಕೋರುತ್ತೇನೆ ಎಂದು ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:39 pm, Fri, 24 February 23

ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?