AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ

ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ
ಶಿವಮೊಗ್ಗ ವಿಮಾನ ನಿಲ್ದಾಣ
Follow us
TV9 Web
| Updated By: ಆಯೇಷಾ ಬಾನು

Updated on:Feb 24, 2023 | 1:00 PM

ಶಿವಮೊಗ್ಗ: ಜಿಲ್ಲೆಯಲ್ಲಿ ನೂತನ ಏರ್ ಪೋರ್ಟ್ ಉದ್ಘಾಟನೆಗೆ ಕ್ಷಣಗಣೆನೆ ಶುರುವಾಗಿದೆ. ದಶಕಗಳ ಬಳಿಕ ಮಲೆನಾಡಿನಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ದೇಶದ ಪ್ರಧಾನಿಗಳು ಚಾಲನೆ ನೀಡಲಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸದರ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅದನ್ನು ರೀ ಟ್ವೀಟ್ ಮಾಡಿದ್ದು ಶಿವಮೊಗ್ಗದ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕೇವಲ ವಿಮಾನ ನಿಲ್ದಾಣವಾಗದೆ ಮಲೆನಾಡು ಪ್ರದೇಶದ ಪರಿವರ್ತನೆಯ ಗೇಟ್‌ವೇ ಆಗಲಿದೆ ಎಂದು ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿದ್ದು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಮತ್ತೊಂದೆಡೆ ಇದನ್ನು ಪ್ರಧಾನಿಯವರು ರಿಟ್ವೀಟ್ ಮಾಡಿದ್ದಾರೆ.

ಮೋದಿಗೆ ಧನ್ಯವಾದ ತಿಳಿಸಿದ ಬಿವೈ ರಾಘವೇಂದ್ರ

ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ. ಸಂಪರ್ಕ ಕ್ರಾಂತಿ ಜೊತೆಗೆ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಸಾಧಿಸಲಿ. ಇನ್ನಷ್ಟು ಅಭಿವೃದ್ಧಿ ಸಾಧಿಸಲೆಂದು ಹಾರೈಸಿದ ಮೋದಿಗೆ ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಧನ್ಯವಾದ ತಿಳಿಸಿದ್ದಾರೆ. ಫೆ.27ರಂದು ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಹಲವು ಅಭಿವೃದ್ಧಿಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಡಿಗಲ್ಲು ಹಾಕುವ ಮೂಲಕ ಆಶೀರ್ವದಿಸಬೇಕೆಂದು ಕೋರಿಕೊಳ್ಳುತ್ತೇನೆ. ಶಿವಮೊಗ್ಗದ ಜನತೆ ಪರವಾಗಿ ತಮಗೆ ಆತ್ಮೀಯ ಸ್ವಾಗತ ಕೋರುತ್ತೇನೆ ಎಂದು ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:39 pm, Fri, 24 February 23

ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!