AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ

ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ
ಶಿವಮೊಗ್ಗ ವಿಮಾನ ನಿಲ್ದಾಣ
TV9 Web
| Edited By: |

Updated on:Feb 24, 2023 | 1:00 PM

Share

ಶಿವಮೊಗ್ಗ: ಜಿಲ್ಲೆಯಲ್ಲಿ ನೂತನ ಏರ್ ಪೋರ್ಟ್ ಉದ್ಘಾಟನೆಗೆ ಕ್ಷಣಗಣೆನೆ ಶುರುವಾಗಿದೆ. ದಶಕಗಳ ಬಳಿಕ ಮಲೆನಾಡಿನಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ದೇಶದ ಪ್ರಧಾನಿಗಳು ಚಾಲನೆ ನೀಡಲಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸದರ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅದನ್ನು ರೀ ಟ್ವೀಟ್ ಮಾಡಿದ್ದು ಶಿವಮೊಗ್ಗದ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕೇವಲ ವಿಮಾನ ನಿಲ್ದಾಣವಾಗದೆ ಮಲೆನಾಡು ಪ್ರದೇಶದ ಪರಿವರ್ತನೆಯ ಗೇಟ್‌ವೇ ಆಗಲಿದೆ ಎಂದು ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿದ್ದು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಮತ್ತೊಂದೆಡೆ ಇದನ್ನು ಪ್ರಧಾನಿಯವರು ರಿಟ್ವೀಟ್ ಮಾಡಿದ್ದಾರೆ.

ಮೋದಿಗೆ ಧನ್ಯವಾದ ತಿಳಿಸಿದ ಬಿವೈ ರಾಘವೇಂದ್ರ

ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ. ಸಂಪರ್ಕ ಕ್ರಾಂತಿ ಜೊತೆಗೆ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಸಾಧಿಸಲಿ. ಇನ್ನಷ್ಟು ಅಭಿವೃದ್ಧಿ ಸಾಧಿಸಲೆಂದು ಹಾರೈಸಿದ ಮೋದಿಗೆ ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಧನ್ಯವಾದ ತಿಳಿಸಿದ್ದಾರೆ. ಫೆ.27ರಂದು ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಹಲವು ಅಭಿವೃದ್ಧಿಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಡಿಗಲ್ಲು ಹಾಕುವ ಮೂಲಕ ಆಶೀರ್ವದಿಸಬೇಕೆಂದು ಕೋರಿಕೊಳ್ಳುತ್ತೇನೆ. ಶಿವಮೊಗ್ಗದ ಜನತೆ ಪರವಾಗಿ ತಮಗೆ ಆತ್ಮೀಯ ಸ್ವಾಗತ ಕೋರುತ್ತೇನೆ ಎಂದು ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:39 pm, Fri, 24 February 23

Follow Us
Web contact
Web contact

TV9 Kannada

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ