AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ

ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ
ಶಿವಮೊಗ್ಗ ವಿಮಾನ ನಿಲ್ದಾಣ
TV9 Web
| Edited By: ಆಯೇಷಾ ಬಾನು|

Updated on:Feb 24, 2023 | 1:00 PM

Share

ಶಿವಮೊಗ್ಗ: ಜಿಲ್ಲೆಯಲ್ಲಿ ನೂತನ ಏರ್ ಪೋರ್ಟ್ ಉದ್ಘಾಟನೆಗೆ ಕ್ಷಣಗಣೆನೆ ಶುರುವಾಗಿದೆ. ದಶಕಗಳ ಬಳಿಕ ಮಲೆನಾಡಿನಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ದೇಶದ ಪ್ರಧಾನಿಗಳು ಚಾಲನೆ ನೀಡಲಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸದರ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅದನ್ನು ರೀ ಟ್ವೀಟ್ ಮಾಡಿದ್ದು ಶಿವಮೊಗ್ಗದ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕೇವಲ ವಿಮಾನ ನಿಲ್ದಾಣವಾಗದೆ ಮಲೆನಾಡು ಪ್ರದೇಶದ ಪರಿವರ್ತನೆಯ ಗೇಟ್‌ವೇ ಆಗಲಿದೆ ಎಂದು ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿದ್ದು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಮತ್ತೊಂದೆಡೆ ಇದನ್ನು ಪ್ರಧಾನಿಯವರು ರಿಟ್ವೀಟ್ ಮಾಡಿದ್ದಾರೆ.

ಮೋದಿಗೆ ಧನ್ಯವಾದ ತಿಳಿಸಿದ ಬಿವೈ ರಾಘವೇಂದ್ರ

ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ. ಸಂಪರ್ಕ ಕ್ರಾಂತಿ ಜೊತೆಗೆ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಸಾಧಿಸಲಿ. ಇನ್ನಷ್ಟು ಅಭಿವೃದ್ಧಿ ಸಾಧಿಸಲೆಂದು ಹಾರೈಸಿದ ಮೋದಿಗೆ ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಧನ್ಯವಾದ ತಿಳಿಸಿದ್ದಾರೆ. ಫೆ.27ರಂದು ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಹಲವು ಅಭಿವೃದ್ಧಿಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಡಿಗಲ್ಲು ಹಾಕುವ ಮೂಲಕ ಆಶೀರ್ವದಿಸಬೇಕೆಂದು ಕೋರಿಕೊಳ್ಳುತ್ತೇನೆ. ಶಿವಮೊಗ್ಗದ ಜನತೆ ಪರವಾಗಿ ತಮಗೆ ಆತ್ಮೀಯ ಸ್ವಾಗತ ಕೋರುತ್ತೇನೆ ಎಂದು ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:39 pm, Fri, 24 February 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?