AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊದಲ ವಿಮಾನ ಪ್ರಧಾನಿ ಮೋದಿಯವರದ್ದು; ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಶಿವಮೊಗ್ಗಕ್ಕೆ ವಿಶೇಷ ವಿಮಾನದ ಮೂಲಕ ಬಂದಿಳಿಯಲಿದ್ದಾರೆ. ಈ ಮೂಲಕ ಪ್ರಧಾನಿಗಳ ವಿಶೇಷ ವಿಮಾನವೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊಟ್ಟ ಮೊದಲ ವಿಮಾನವಾಗಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊದಲ ವಿಮಾನ ಪ್ರಧಾನಿ ಮೋದಿಯವರದ್ದು; ಸಂಸದ ಬಿ ವೈ ರಾಘವೇಂದ್ರ
ಶಿವಮೊಗ್ಗ ವಿಮಾನ ನಿಲ್ದಾಣ
ವಿವೇಕ ಬಿರಾದಾರ
|

Updated on: Feb 18, 2023 | 10:38 AM

Share

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಉದ್ಘಾಟನೆಗೆ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೆಹಲಿಯಿಂದ ಶಿವಮೊಗ್ಗಕ್ಕೆ ವಿಶೇಷ ವಿಮಾನದ ಮೂಲಕ ಬಂದಿಳಿಯಲಿದ್ದಾರೆ. ಈ ಮೂಲಕ ಪ್ರಧಾನಿಗಳ ವಿಶೇಷ ವಿಮಾನವೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊಟ್ಟ ಮೊದಲ ವಿಮಾನವಾಗಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ (BY Raghavendra) ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರಧಾನಿಗಳ ವಿಮಾನವೇ ಮೊದಲ ವಿಮಾನ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಲಿದೆ. ಇದು ನಮಗೆ ಬಹಳ ಸಂಸತಸ ತಂದಿದೆ. ಇದೇ ವೇಳೆ ಪ್ರಧಾನಿ ಮೋದಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಅವರ ಕಾರ್ಯಕ್ರಮ ವೇಳಾಪಟ್ಟಿ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 12:30ಕ್ಕೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಭೆಗೆ 2ಲಕ್ಷ ಜನರು ಸೇರುವ ಸಾಧ್ಯತೆ ಇದೆ. ಅಂದಿನ ಕಾರ್ಯಮದ ತಯಾರಿ ಈಗಾಗಲೇ ಪ್ರಾರಂಭವಾಗಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣ ಉದ್ಘಾಟನೆಯಾದ 15 ಅಥವಾ 1 ತಿಂಗಳ ನಂತರ ತನ್ನ ಕಾರ್ಯಾರಂಭ ಮಾಡಲಿದೆ. ಮತ್ತು ಆಧ್ಯತೆ ಪ್ರಕಾರ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ವಿಮಾನಗಳ ಪಟ್ಟಿ ಸಿದ್ದವಾಗಿದೆ ಎಂದು ರಾಘವೇಂದ್ರ ತಿಳಿಸಿದ್ದಾರೆ.

ಒಟ್ಟು ವಿಮಾನ ನಿಲ್ದಾಣಕ್ಕೆ 600 ಕೋಟಿ ರೂ. ವ್ಯಯಿಸಲಾಗಿದೆ. ಇದರಲ್ಲಿ ಕಟ್ಟಡ ಕಾಮಗಾರಿಗೆ 449 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನು ಉಳಿದ ಹಣದಲ್ಲಿ ಭೂ ಖರೀದಿಗೆ ನೀಡಲಾಗಿದೆ. ಭೂಮಿಯನ್ನು ಕಳೆದುಕೊಂಡವರಿಗೆ ಕರ್ನಾಟಕ ಗೃಹ ಮಂಡಳಿ ನಿವೇಶನ ನೀಡಲಿದೆ. ಈಗಾಗಲೇ 320 ಕುಟುಂಬಗಳಿಗೆ ನೀಡಲು ನಿವೇಶನಗಳು ಸಿದ್ದವಾಗಿವೆ ಎಂದರು.

ಹಾಗೇ ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಧಾನಿ ಮೋದಿ ಅವರು ಹೈವೆ, ಸ್ಮಾರ್ಟ್​ ಸಿಟಿ, ರೇಲ್ವೆ ಕಾಮಗಾರಿಗಳನ್ನು ಮತ್ತು ಹಲವು ಗ್ರಾಮಗಳಿಗೆ ನೀರಿನ ಸೌಲಭ್ಯ, ಜನ್​ ಜೀವನ್​ ಮಿಷನ್​ನ್ನು ಉದ್ಘಾಟಿಸಲಿದ್ದಾರೆ. ಮತ್ತು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು