AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ: ಮುರಘಾಶ್ರೀಗಳ ಬಂಧನವಾಗಿಲ್ಲ – ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

ಪ್ರಕರಣದಲ್ಲಿ ಮುರಘಾಶ್ರೀಗಳ ಬಂಧನವಾಗಿಲ್ಲ, ಶ್ರೀಗಳು ಕಾನೂನು ಸಲಹೆ ಪಡೆಯಲು ಹೋಗಿದ್ದರು ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ: ಮುರಘಾಶ್ರೀಗಳ ಬಂಧನವಾಗಿಲ್ಲ - ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Updated By: ವಿವೇಕ ಬಿರಾದಾರ|

Updated on: Aug 29, 2022 | 3:20 PM

Share

ಶಿವಮೊಗ್ಗ: ಪ್ರಕರಣದಲ್ಲಿ ಮುರಘಾಶ್ರೀಗಳ ಬಂಧನವಾಗಿಲ್ಲ, ಶ್ರೀಗಳು ಕಾನೂನು ಸಲಹೆ ಪಡೆಯಲು ಹೋಗಿದ್ದರು ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. ಚಿತ್ರದುರ್ಗ ಮುರುಘಾ ಮಠದ (Murugha Mutt) ಶ್ರೀ ಶಿವಮೂರ್ತಿ ಸ್ವಾಮೀಜಿ (Shivamurthy Swamiji) ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಚಿತ್ರದುರ್ಗದ ಮುರುಘಾಮಠಕ್ಕೆ ಶ್ರೀಗಳು ವಾಪಸ್ ಬಂದಿದ್ದಾರೆ. ಮುರುಘಾಮಠದ ಸ್ವಾಮೀಜಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.

ನ್ಯಾಯಾಲಯ ವಿಚಾರವಾಗಿ ಚರ್ಚಿಸಲು ಸ್ವಾಮೀಜಿ ಬೆಳಗಾವಿಗೆ ಹೊರಟಿದ್ದರು: ಸಂಸದ ಬಿ ವೈ ರಾಘವೇಂದ್ರ

ಈ ವಿಚಾರವಾಗಿ ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಮತನಾಡಿ ನ್ಯಾಯಾಲಯ ವಿಚಾರವಾಗಿ ಚರ್ಚಿಸಲು ಸ್ವಾಮೀಜಿ ಬೆಳಗಾವಿಗೆ ಹೊರಟಿದ್ದರು. ಈಗ ಅವರು ವಾಪಸ್ ಅಲ್ಲಿಂದ ಬಂದಿದ್ದಾರೆ ಎಂದು ಹೇಳಿದರು. ಅವರ ಬಂಧನದ ಕುರಿತು ಮಾಧ್ಯಮಗಳಲ್ಲಿ ಕಪೋಕಲ್ಪಿತ ಸುದ್ದಿಗಳು ಬರುತ್ತಿವೆ.

ಗೃಹ ಸಚಿವರ ಜೊತೆ ಈಗ ತಾನೆ ಚರ್ಚೆ ಮಾಡಿ ಬಂದಿರುವೆ. ಮುರುಘಾಮಠದ ಶ್ರೀಗಳ ಬಂಧನವಾಗಿಲ್ಲ. ಅದು ನೂರಕ್ಕೆ ನೂರು ಸುಳ್ಳಾಗಿದೆ. ಕೋರ್ಟ್​ಗಳ ಪ್ರಕ್ರಿಯೆಗಳು ನಡೆಯುತ್ತವೆ. ಈ ಎಲ್ಲ ಬೆಳವಣಿಗೆಯಿಂದ ಮನಸ್ಸಿಗೆ ನೋವು ಆಗಿದೆ ಎಂದರು.

ತುಂಬಾ ಒಳ್ಳೆಯವರಿಗೆ ಈ ರೀತಿ ಆಗುವುದು ಸ್ವಾಭಾವಿಕ : ಸಚಿವ ವಿ ಸೋಮಣ್ಣ

ಬೆಂಗಳೂರು: ತುಂಬಾ ಒಳ್ಳೆಯವರಿಗೆ ಈ ರೀತಿ ಆಗುವುದು ಸ್ವಾಭಾವಿಕ. ಮಠಕ್ಕೆ ಉತ್ತರಾಧಿಕಾರಿಯಾಗುವ ಮೊದಲೇ ಅವರು ನನಗೆ ಗೊತ್ತಿದೆ ಎಂದು ಮುರುಘಾಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರವಾಗಿ ವಿಧಾನಸೌಧದಲ್ಲಿ ವಸತಿ ಸಚಿವ ವಿ ಸೋಮಣ್ಣ ಮಾತನಾಡಿದ್ದಾರೆ.

ಎಲ್ಲವೂ ನನಗೆ ಗೊತ್ತಿದೆ. ಪೊಲೀಸರು ಜಾಗರೂಕತೆಯಿಂದ ತನಿಖೆ ಮಾಡುತ್ತಿದ್ದಾರೆ. ನಾವು ಈಗ ಮಧ್ಯಪ್ರವೇಶ ಮಾಡುವುದು ಒಳ್ಳೆಯದಲ್ಲ. ಯಾವುದು ಏನು ಅನ್ನೋದು ಸತ್ಯ ಹೊರಗೆ ಬರುತ್ತದೆ. ನನಗೆ ತಿಳಿದಂತೆ ಸ್ವಾಮೀಜಿ ಇದರಿಂದ ಹೊರಗೆ ಬರುತ್ತಾರೆ ಎಂದರು.

ಈ ರೀತಿ ಆಗಬಾರದಿತ್ತು. ಸತ್ಯ ಹೊರಗೆ ಬರಲು ನಾವೆಲ್ಲಾ ಜವಾಬ್ದಾರಿ ಸ್ಥಾನದಲ್ಲಿರುವವರು ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡಬೇಕಾಗಿದೆ. 800 ವರ್ಷಕ್ಕೂ ಮೇಲ್ಪಟ್ಟು ಮಠಕ್ಕೆ ಇತಿಹಾಸ ಇದೆ. ಚುನಾವಣೆಗೂ ಇದಕ್ಕೂ ಸಂಬಂಧ ಇಲ್ಲ. ಕಾನೂನು ಎಲ್ಲರಿಗೂ ಒಂದೇ. ಯಾರ್ಯಾರು ಎಷ್ಟೆಷ್ಟು ಷಡ್ಯಂತ್ರ ಕೆಲವೇ ದಿನಗಳಲ್ಲಿ ತಿಳಿಯುತ್ತದೆ ಎಂದು ಹೇಳಿದರು.

ಪಠ್ಯ ಪುಸ್ತಕದಲ್ಲಿ ಸಾವರ್ಕರ್ ಬುಲ್ ಬುಲ್ ಪಕ್ಷಿ ಉಲ್ಲೇಖ ವಿಚಾರವಾಗಿ ಮಾತನಾಡಿದ ಅವರು ಆ ಬಗ್ಗೆ ಇನ್ನೂ ನನಗೆ ಏನೂ ಗೊತ್ತಿಲ್ಲ. ಗೊತ್ತಾದ ಮೇಲೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಮುರಘಾಶ್ರೀಗಳ ಬಂಧನವಾಗಿಲ್ಲ, ಶ್ರೀಗಳು ಕಾನೂನು ಸಲಹೆ ಪಡೆಯಲು ಹೋಗಿದ್ದರು ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!