AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳ ಮಹಿಳೆ

ಮಲೆನಾಡಿನಲ್ಲಿ ಹೆಬ್ಬೆಟ್ ಮಂಜನ ಹೆಸರು ಚಾಲ್ತಿಯಲ್ಲಿದೆ. ಆತನ ಸಹಚರರು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಹೆಬ್ಬೆಟ್ ಮಂಜನ ಗ್ಯಾಂಗ್ ಮಲೆನಾಡಿನಲ್ಲಿ ಅಕ್ರಮ ಮರಳು ದಂಧೆ ಸೇರಿದಂತೆ ಇತರೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳ ಮಹಿಳೆ
ಬಂಧಿತ ಮಹಿಳೆ ಸಾಹಿರಾ ಬಾನು
TV9 Web
| Edited By: sandhya thejappa|

Updated on:Oct 23, 2021 | 12:14 PM

Share

ಶಿವಮೊಗ್ಗ: ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬ ಮಹಿಳೆಯನ್ನು ಶಿವಮೊಗ್ಗ ಸೈಬರ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಹಿಳೆಯ ಪತಿ ಸದ್ದಾಂ ಹುಸೇನ್ ಬೆಂಗಳೂರಿನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಈತ ಜೈಲಿನಿಂದಲೇ ಶಿವಮೊಗ್ಗದ ಉದ್ಯಮಿಗೆ ವಾಟ್ಸಪ್ ಕಾಲ್ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ.

ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದಾನೆ. ಮಲೆನಾಡಿನಲ್ಲಿ ಹೆಬ್ಬೆಟ್ ಮಂಜನ ಹೆಸರು ಚಾಲ್ತಿಯಲ್ಲಿದೆ. ಆತನ ಸಹಚರರು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಹೆಬ್ಬೆಟ್ ಮಂಜನ ಗ್ಯಾಂಗ್ ಮಲೆನಾಡಿನಲ್ಲಿ ಅಕ್ರಮ ಮರಳು ದಂಧೆ ಸೇರಿದಂತೆ ಇತರೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಈ ಎಲ್ಲ ಚಟುವಟಿಕೆಗಳು ಹೆಬ್ಬೆಟ್ ಮಂಜನ ಹೆಸರಿನಲ್ಲಿ ನಡೆಯುತ್ತಿವೆ.

ಬೆದರಿಕೆ ಕರೆ ಬಂದಿದ್ದಾಗ ಉದ್ಯಮಿ ಒಮ್ಮೆ 50 ಸಾವಿರ ರೂ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದೇ ತಡ ಶಿವಮೊಗ್ಗ ಸೈಬರ್ ಠಾಣೆಯ ಸಿಪಿಐ ಗುರುರಾಜ್ ತಮ್ಮ ತಂಡದ ಜೊತೆ ಭಟ್ಕಳಗೆ ಹೋಗಿ ಆಪರೇಶನ್​ಗೆ ಮುಂದಾಗಿದ್ದರು. ಮಹಿಳೆ ಖಾತೆಯ ಜಾಡು ಹಿಡಿದು ತನಿಖೆ ಕೈಗೊಂಡಾಗ ಭಟ್ಕಳದ ಸಾಹಿರಾ ಬಾನು ಅವರದ್ದು ಎಂಬುದು ಗೊತ್ತಾಗಿದೆ.

ಪರಪ್ಪನ ಅಗ್ರಹಾರದಲ್ಲಿರುವ ಸದ್ದಾಂ ಹುಸೇನ್ ಬೆಂಗಳೂರಿನ ಚರ್ಚ್ಸ್ಟ್ರೀಟ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಸ್ಪೋಟಕ್ಕೆ ಬೇಕಾಗಿರುವ ಜೆಲೆಟಿನ್ ಕಡ್ಡಿಯನ್ನು ಈತನೇ ಪೂರೈಕೆ ಮಾಡಿದ್ದನು. ಭಟ್ಕಳದಲ್ಲಿ ಸದ್ದಾಂ ಮೇಲೆ ವಿವಿಧ ಕೇಸ್ಗಳು ಕೂಡಾ ದಾಖಲು ಆಗಿವೆ.

ಸದ್ಯ ತನಿಖೆ ಮುಂದುವರೆದಿದೆ. ಸದ್ದಾಂ ಜೊತೆಯಲ್ಲಿ ಇನ್ನೂ ನಾಲ್ಕೈದು ಜನರು ಇದ್ದಾರೆ. ಎಲ್ಲರೂ ಸೇರಿ ಇಂತಹ ಬೆದರಿಕೆ ಕೃತ್ಯದಲ್ಲಿ ತೊಡಗಿದ್ದಾರೆ. ವಿಚಾರಣೆ ಬಳಿಕವಷ್ಟೇ ಹೆಬ್ಬೆಟ್ ಮಂಜ ಮತ್ತು ಇವರ ನಡುವಿನ ಸಂಬಂಧ ಕುರಿತು ಮಾಹಿತಿಗಳು ಲಭ್ಯ ಆಗಬೇಕಿದೆ.

ಇದನ್ನೂ ಓದಿ

ಸಿದ್ದರಾಮಯ್ಯನ್ನ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು: ಕೇಂದ್ರಕ್ಕೆ ಮನವಿ ಮಾಡಿದ ಸಂಸದ ಶ್ರೀನಿವಾಸ್ ಪ್ರಸಾದ್

ಅಮರಿಂದರ್​ ಸಿಂಗ್​​ ಪಾಕ್​ ಗೆಳತಿ ಅರೂಸಾ ಅಲಂಗೆ ಐಎಸ್​ಐ ಲಿಂಕ್​ ಆರೋಪ; ಫೋಟೋ ಮೂಲಕ ಕಾಂಗ್ರೆಸ್​ಗೆ ತಿರುಗೇಟು ಕೊಟ್ಟ ಕ್ಯಾಪ್ಟನ್​

Published On - 12:12 pm, Sat, 23 October 21

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ