AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಮಠಾಧೀಶರು

ಈ  ರೀತಿಯ ಹಿಂಸಾತ್ಮಕ ಸಂಘರ್ಷ ಯಾರಿಗೂ ಭೂಷಣವಲ್ಲ. ಹರ್ಷನನ್ನು ಕಳೆದುಕೊಂಡು ರಾಜ್ಯ ಹಾಗೂ ರಾಷ್ಟ್ರವೇ ದುಃಖದಲ್ಲಿದೆ. ಹಾಗೇಯೇ ಕುಟುಂಬವು ನೋವಿನಲ್ಲಿದ್ದು, ಎಲ್ಲರೂ ಸಾಂತ್ವಾನ ಹೇಳಿದ್ದೇವೆ ಅಂತ ಡಾ.ಶಿವಮೂರ್ತಿ ಮುರಘಾ ಶರಣರು ಹೇಳಿದರು.

ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಮಠಾಧೀಶರು
ಹರ್ಷನ ಮನೆಗೆ ಭೇಟಿ ನೀಡಿದ ಮಠಾಧೀಶರು
TV9 Web
| Updated By: sandhya thejappa|

Updated on: Feb 26, 2022 | 1:16 PM

Share

ಶಿವಮೊಗ್ಗ: ಬಜರಂಗದಳ (Bajrang Dal) ಕಾರ್ಯಕರ್ತ ಹರ್ಷನ ಮನೆಗೆ ಇಂದು (ಫೆ.26) ವಿವಿಧ ಮಠಾಧೀಶರು ಭೇಟಿ ನೀಡಿದ್ದಾರೆ. ಈ ವೇಳೆ ಹರ್ಷನ (Harsha) ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ.ಶಿವಮೂರ್ತಿ ಮುರಘಾ ಶರಣರು, ದೇಶದಲ್ಲಿ ಎಲ್ಲರೂ ಭಾವೈಕ್ಯತೆ ಹಾಗೂ ರಾಷ್ಟ್ರೀಯತೆಯನ್ನು ಹೊಂದಬೇಕು. ರಾಷ್ಟ್ರ ಉಳಿದರೇ ನಾವು ಉಳಿದಂತೆ ಎಂಬ ಭಾವ ಬೇಕು. ಈ ಸಿಟ್ಟಿನಲ್ಲಿ ರಾಷ್ಟ್ರೀಯ ಪ್ರಜ್ಞೆ ಜಾಗೃತಗೊಳಿಸುತ್ತಿದ್ದ ಯುವ ಉತ್ಸಾಹಿ ಹರ್ಷ ಹತ್ಯೆಯಾಗಿದ್ದಾನೆ. ಹಿಂಸಾತ್ಮಕ ಸಂಘರ್ಷದಲ್ಲಿ ಹರ್ಷ ಹತ್ಯೆಯಾಗಿದ್ದಾನೆ ಎಂದರು.

ಮುಂದುವರಿದು ಮಾತನಾಡಿದ ಅವರು, ಈ  ರೀತಿಯ ಹಿಂಸಾತ್ಮಕ ಸಂಘರ್ಷ ಯಾರಿಗೂ ಭೂಷಣವಲ್ಲ. ಹರ್ಷನನ್ನು ಕಳೆದುಕೊಂಡು ರಾಜ್ಯ ಹಾಗೂ ರಾಷ್ಟ್ರವೇ ದುಃಖದಲ್ಲಿದೆ. ಹಾಗೇಯೇ ಕುಟುಂಬವು ನೋವಿನಲ್ಲಿದ್ದು, ಎಲ್ಲರೂ ಸಾಂತ್ವಾನ ಹೇಳಿದ್ದೇವೆ. ಸಂತರ ನಡೆ ಸಾಂತ್ವಾನದ ಕಡೆ ಎಂಬಂತೆ ನೊಂದವರಿಗೆ ಸಾಂತ್ವಾನ ಹೇಳಿದ್ದೇವೆ ಎಂದು ತಿಳಿಸಿದರು.

ಇನ್ನೂ ಸಿಗದ ಹರ್ಷ ಮೊಬೈಲ್: ಹರ್ಷ ಕೊಲೆಯಾಗಿ 6 ದಿನ ಕಳೆದರೂ ಆತನ ಮೊಬೈಲ್ ಇನ್ನೂ ಸಿಗಲಿಲ್ಲ. ಹರ್ಷ ಕೊಲೆ ಬಳಿಕ 30 ನಿಮಿಷದವರೆಗೆ ಮೊಬೈಲ್ ಆನ್ ಇತ್ತು. 30 ನಿಮಿಷದ ಬಳಿಕ ಮೃತ ಹರ್ಷ ಮೊಬೈಲ್ ಸ್ವಿಚ್‌ ಆಫ್ ಆಗಿದೆ. ಕೊಲೆ ನಡೆದ 30 ನಿಮಿಷದ ವರೆಗೆ ಮೊಬೈಲ್ ರಿಂಗ್ ಆಗುತ್ತಿತ್ತು. ಕುಟುಂಬಸ್ಥರು, ಸ್ನೇಹಿತರು ಘಟನೆ ರಾತ್ರಿ ನಿರಂತರ ಕಾಲ್. ಮಾಡುತ್ತಿದ್ದರು. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದೆ. ಸದ್ಯ ಮೊಬೈಲ್​ಗಾಗಿ ಶಿವಮೊಗ್ಗ ವಿಶೇಷ  ಪೊಲೀಸ್ ತಂಡ ಹುಡುಕಾಟ ನಡೆಸಿದೆ.

10 ಕೊಲೆ ಆರೋಪಿಗಳನ್ನು ವಶಕ್ಕೆ ನಿನ್ನೆ 10 ಕೊಲೆ ಆರೋಪಿಗಳನ್ನು ವಿಶೇಷ ಪೊಲೀಸ್ ತಂಡ ವಶಕ್ಕೆ ಪಡೆದಿದೆ. ನಿನ್ನೆ ರಾತ್ರಿಯಿಂದಲೇ ಕೊಲೆಯ ಕುರಿತು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಕಾರಿನಲ್ಲಿ ಬಂದಿದ್ದು ಎಷ್ಟು ಜನರು? ಅದು ಯಾರು? ಯಾರು? ಹರ್ಷನ ಮೇಲೆ ಮಾರಕಾಸ್ತ್ರದಿಂದ ದಾಳಿ ಮಾಡಿದ್ದು ಎಷ್ಟು ಜನರು? ಇವರಿಗೆ ಮಾರಕಾಸ್ತ್ರ ಪೂರೈಕೆ ಮಾಡಿದ್ದು ಯಾರು? ಎಷ್ಟು ದಿನಗಳಿಂದ ಹರ್ಷ ಕೊಲೆಗೆ ಪ್ಲ್ಯಾನ್ ಮಾಡಲಾಗಿತ್ತು? ಹೀಗೆ ಕೊಲೆ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತನಿಖಾಧಿಕಾರಿ ಗುರುರಾಜ್ ನೇತೃತ್ವದಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಹಣ ನೀಡದಕ್ಕೆ ಹೆತ್ತಮ್ಮನ ಕೆನ್ನೆಗೆ ಹೊಡೆದ ಪುತ್ರ! ತಾಯಿ ಸ್ಥಳದಲ್ಲೇ ಕೊನೆಯುಸಿರು

ಉಕ್ರೇನ್- ರಷ್ಯಾ ಧ್ವಜ ಹೊದ್ದು ನಿಂತ ಜೋಡಿಯ ಪೋಟೋ ವೈರಲ್​: ಇಲ್ಲಿದೆ ಫೋಟೋ ಹಿಂದಿನ ಅಸಲಿ ಕಹಾನಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ