AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಪ್ರೇಮ ಸಿಂಗ್ ಚಾಕು ಇರಿತ ಪ್ರಕರಣ; ನಗರ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ: ಎಡಿಜಿಪಿ ಅಲೋಕ್ ಕುಮಾರ್

ಪ್ರೇಮ ಸಿಂಗ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದ್ದು, ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತವಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಶಿವಮೊಗ್ಗ ಪ್ರೇಮ ಸಿಂಗ್ ಚಾಕು ಇರಿತ ಪ್ರಕರಣ; ನಗರ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ: ಎಡಿಜಿಪಿ ಅಲೋಕ್ ಕುಮಾರ್
ಅಲೋಕ್​ ಕುಮಾರ್, ಎಡಿಜಿಪಿ
TV9 Web
| Edited By: |

Updated on:Aug 17, 2022 | 11:00 AM

Share

ಶಿವಮೊಗ್ಗ: ಪ್ರೇಮ ಸಿಂಗ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದ್ದು, ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತವಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಪ್ರಕರಣದ ಸಂಬಂಧ ಟಿವಿ9 ಜೊತೆ ಮಾತನಾಡಿದ ಅವರು ನಗರದಲ್ಲಿ ಇಂದು ಶಾಲಾ-ಕಾಲೇಜುಗಳು ಆರಂಭವಾಗಿವೆ. ಯಾರು ಭಯಪಡುವ ಅಗತ್ಯವಿಲ್ಲ. 2 ದಿನದಲ್ಲಿ ನಗರ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದರು.

ಪೋಲೀಸ್ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಚಾಕು ಇರಿತ ಪ್ರಕರಣ ಆರೋಪಿಗಳ ಬಂಧನವಾಗಿದೆ. ಈಗಾಗಲೆ ಮುಬಾರಕನ ಬಂಧನವಾಗಿದೆ ಎಂದು ತಿಳಿಸಿದರು. ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದ್ದು, ಕಳೆದ ಎರಡು ದಿನಗಳಿಂದ ಗಾಂಧಿ ಬಜಾರ್ ಬಂದ್ ಆಗಿದೆ. ಗಾಂಧಿ ಬಜಾರ್​ನಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಹಿನ್ನಲೆ ಇಂದು ಗಾಂಧಿ ಬಜಾರ್ ಅಂಗಡಿ ಓಪನ್​ಗೆ ಅವಕಾಶ ನೀಡಲಾಗಿದೆ.

ಭದ್ರಾವತಿಯಲ್ಲಿ ಮುಂದುವರಿದ ಅಘೋಷಿತ ಬಂದ್ ಮುಂದುವರೆದಿದ್ದು, ಭದ್ರಾವತಿಯಲ್ಲಿ ಇಂದು ಕೂಡ ಅಂಗಡಿಗಳು ಬಂದ್​ ಆಗಿವೆ. ಅಗತ್ಯ ವಸ್ತುಗಳ ಅಂಗಡಿ ಹೊರತುಪಡಿಸಿ ಎಲ್ಲ ಬಂದ್ ಆಗಿವೆ. ಹೋಟೆಲ್​​ನಲ್ಲಿ ಪಾರ್ಸೆಲ್​​ಗಷ್ಟೇ ಅವಕಾಶ ನೀಡಲಾಗಿದೆ. ಒಟ್ಟಾರೆಯಾಗಿ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆಯಾಗಿದ್ದು, ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಇದೆ.

ಶಿವಮೊಗ್ಗದಲ್ಲಿ ಮತ್ತೊಂದು ಎಫ್ ಐಆರ್ ದಾಖಲು

ವೀರ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವೇಳೆ ಗಲಾಟೆ ವಿಚಾರವಾಗಿ ಮತ್ತೊಂದು ಎಫ್ ಐಆರ್ ದಾಖಲಾಗಿದೆ. ಗಲಾಟೆ ಸಂಬಂಧ ಈವರೆಗೆ ದೊಡ್ಡಪೇಟೆ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿವೆ. ಸಾವರ್ಕರ್ ಫ್ಲೆಕ್ಸ್​​ನ್ನು ತೆರವುಗೊಳಿಸುವ ವೇಳೆ ಕಿಡಿಗೇಡಿಗಳು ತೆಗಿರೋ ಆ ಸಾವರ್ಕರ್ ಫೋಟೋ ತೇರಿ ಮಾಕಿ ಎಂದು ಕೂಗಿ, ನಂತರ ಫ್ಲೆಕ್ಸ್ ಕಿತ್ತು ಹಾಕಿದ್ದರು.

ಈ ಸಂಬಂಧ  ಭಾವನೆಗಳಿಗೆ ಧಕ್ಕೆ ತರುವ ಘೋಷಣೆ ಕೂಗಿದ್ದಾರೆಂದು ಅನ್ಯಕೋಮಿನ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಪೊಲೀಸರು 2ನೇ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಮೂರರಿಂದ ನಾಲ್ಕು ಜನರು ಕಾರಣಕರ್ತರು ಎಂದು ಪೊಲೀಸ್​ ಎಫ್ಐಆರ್​ನಲ್ಲಿ ದಾಖಲಾಗಿದೆ. ಎಫ್ಐಆರ್​​ನಲ್ಲಿ ಅಪರಿಚಿತ ವ್ಯಕ್ತಿಗಳು ಎಂದು ಪ್ರಕರಣ ದಾಖಲಾಗಿದೆ. ಆ 4 ಜನರಿಗೆ ದೊಡ್ಡಪೇಟೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Published On - 10:20 am, Wed, 17 August 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ