Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಜಾತಿನಿಂದನೆ ಆರೋಪ: ಖಾಸಗಿ ಕಾಲೇಜ್​ ಪ್ರಿನ್ಸಿಪಾಲ್​ ಅರೆಸ್ಟ್​​

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದಡಿ ಖಾಸಗಿ ಕಾಲೇಜ್​​ ಪ್ರಿನ್ಸಿಪಾಲ್​​ರನ್ನು ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

Shivamogga News: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಜಾತಿನಿಂದನೆ ಆರೋಪ: ಖಾಸಗಿ ಕಾಲೇಜ್​ ಪ್ರಿನ್ಸಿಪಾಲ್​ ಅರೆಸ್ಟ್​​
ಕೋಟೆ ಪೊಲೀಸ್ ಠಾಣೆ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on:Jul 20, 2023 | 7:10 PM

ಶಿವಮೊಗ್ಗ, ಜುಲೈ 20: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದಡಿ ಖಾಸಗಿ ಕಾಲೇಜ್​ ಪ್ರಿನ್ಸಿಪಾಲ್​ (principal) ​ರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸಿಸ್​ ಫರ್ನಾಂಡಿಸ್ ಬಂಧಿತ ಪ್ರಿನ್ಸಿಪಾಲ್. ಫ್ರಾನ್ಸಿಸ್​ ಫರ್ನಾಂಡಿಸ್ ಚರ್ಚ್ ಫಾದರ್​ ಕೂಡ ಆಗಿದ್ದಾರೆ.​​ ಸದ್ಯ ಫ್ರಾನ್ಸಿಸ್​ ಫರ್ನಾಂಡಿಸ್ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೇಸ್​ ದಾಖಲಿಸಲಾಗಿದೆ.

ಸೆಕ್ರೆಡ್ ಹಾರ್ಟ್ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಸುವ ನಾಟಕವಾಡಿದ್ದರು ಎನ್ನಲಾಗಿದೆ. ಎಸ್​ಸಿಎಸ್​ಟಿ ವಸತಿ ನಿಲಯದಲ್ಲಿದ್ದುಕೊಂಡು ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ಫರ್ನಾಂಡಿಸ್ ಕಿರುಕುಳದಿಂದ ವಿದ್ಯಾರ್ಥಿನಿ ನಿನ್ನೆ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ: ಮಗನ ಬರ್ತಡೇ ಸಂಭ್ರಮದಲ್ಲಿದ್ದ ತಂದೆಯ ಎದೆಗೆ ಚೂರಿ ಇರಿದ ಹಂತಕರು, ಉದ್ಯಮಿ ಕೊಲೆ ಪ್ರಕರಣಕ್ಕೆ ಬಿಗ್ ಟಿಸ್ಟ್

ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳ ಅಂದರ್

ರಾಮನಗರ: ಐಜೂರು ಪೊಲೀಸ್ ಕಾರ್ಯಾಚರಣೆ ಮಾಡಿ ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸಿದ್ದಾರೆ. ಕನಕಪುರ ತಾಲೂಕಿನ ಹೊಸದುರ್ಗ ಗ್ರಾಮದ ಕೇಶವ ಬಂಧಿತ ಆರೋಪಿ. ಬೈಕ್ ಕದಿಯುವುದೇ ಹವ್ಯಾಸ ಮಾಡಿಕೊಂಡಿದ್ದ. ಸದ್ಯ ಕೇಶವನಿಂದ 10 ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಹೋಟೆಲ್ ಕ್ಯಾಶಿಯರ್​ ಕೊಲೆ: ಹೌಸ್​ಕೀಪರ್​​ ಬಂಧನ​​

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ರೂಪಾಯಿ ನಗದು ಜಪ್ತಿ

ಕೋಲಾರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವಂತಹ ಘಟನೆ ಕೋಲಾರ ತಾಲೂಕಿನ ನರಸಾಪುರ ಬಳಿ ನಡೆದಿದೆ. ಹೋಟೆಲ್​ ಬಳಿ ಕಾರಿನಲ್ಲಿ ಕುಳಿತು ಹಣ ಎಣಿಸುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ. ಆಂದ್ರದ ಹಿಂದೂಪುರ ಮೂಲದ ಶ್ಯಾಮ್ ಪ್ರಸಾದ್ ರೆಡ್ಡಿ ಎಂಬುವರಿಗೆ ಹಣ ಸೇರಿದೆ ಎನ್ನಲಾಗಿದೆ.  ಮನೆ ಮಾರಿದ ದುಡ್ಡು ಎಂದು ಸುಳ್ಳು ಹೇಳಿಕೆ ಮತ್ತು ದಾಖಲೆ ಇಲ್ಲದ ಹಿನ್ನಲೆ ವ್ಯಕ್ತಿ ಹಾಗೂ ಹಣವನ್ನ ವೇಮಗಲ್ ಪೊಲೀಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:08 pm, Thu, 20 July 23

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್