AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಾ ಜಲಾಶಯದ 500 ಮೀ ವ್ಯಾಪ್ತಿಯಲ್ಲಿ 1 ತಿಂಗಳು ನಿಷೇಧಾಜ್ಞೆ ಜಾರಿ, ಕಾರಣವೇನು?

ಮಲೆನಾಡಿನಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಮಳೆಯಿಂದ ಬಹುಬೇಗನೆ ಮಲೆನಾಡಿನ ಡ್ಯಾಂಗಳು ಭರ್ತಿ ಆಗಿವೆ. ಈ ನಡುವೆ ತುಂಗಾ ಡ್ಯಾಂ ಭರ್ತಿಯಾಗಿ ನದಿಗೆ ನೀರು ಬಿಡುಗಡೆ ಆಗುತ್ತಿದೆ. ಹಿನ್ನೆಲೆ ಜಲಾಶಯದ 500 ಮೀಟರ್​ ವ್ಯಾಪ್ತಿಯಲ್ಲಿ ಆಗಸ್ಟ್ 3 ರಿಂದ ಸೆಪ್ಟೆಂಬರ್ 2 ರವರೆಗೆ ಒಂದು ತಿಂಗಳ‌ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. 

ತುಂಗಾ ಜಲಾಶಯದ 500 ಮೀ ವ್ಯಾಪ್ತಿಯಲ್ಲಿ 1 ತಿಂಗಳು ನಿಷೇಧಾಜ್ಞೆ ಜಾರಿ, ಕಾರಣವೇನು?
ತುಂಗಾ ಜಲಾಶಯದ 500 ಮೀ ವ್ಯಾಪ್ತಿಯಲ್ಲಿ 1 ತಿಂಗಳು ನಿಷೇಧಾಜ್ಞೆ ಜಾರಿ
Basavaraj Yaraganavi
| Edited By: |

Updated on: Aug 02, 2024 | 8:55 PM

Share

ಶಿವಮೊಗ್ಗ, ಆ.02: ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಡ್ಯಾಂ(Tunga Dam) ಭರ್ತಿಯಾದ ಹಿನ್ನೆಲೆ ಜಲಾಶಯದ 500 ಮೀಟರ್​ ವ್ಯಾಪ್ತಿಯಲ್ಲಿ ಆಗಸ್ಟ್ 3 ರಿಂದ ಸೆಪ್ಟೆಂಬರ್ 2 ರವರೆಗೆ ಒಂದು ತಿಂಗಳ‌ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಗೆ ಆಗಮಿಸುತ್ತಿರುವ ಹಿನ್ನೆಲೆ ಪ್ರವಾಸಿಗರು ಹಾಗೂ ಜಲಾಶಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಭದ್ರೆ ಅಬ್ಬರಕ್ಕೆ ಗ್ರಾಮ ಮುಳುಗಡೆ

ಇತ್ತ ಭದ್ರಾ ಡ್ಯಾಂ ನಿಂದ ನಿನ್ನೆ(ಆ.01) 65 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಿದ್ದಾರೆ. ಡ್ಯಾಂನಿಂದ ದೊಡ್ಡ ಪ್ರಮಾಣದಲ್ಲಿ ಬಿಟ್ಟ ನೀರಿನಿಂದ ದೊಡ್ಡ ಅವಾಂತರವೇ ಭದ್ರಾವತಿ ನಗರ ಮತ್ತು ತಾಲೂಕಿನಲ್ಲಿ ಸೃಷ್ಟಿಯಾಗಿದೆ. ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಹೊಸ ಸೇತುವೆ ಸಂಪೂರ್ಣವಾಗಿ ಮುಳುಗಿ ಹೋಗಿದೆ. ಹೊಸ ಸೇತುವೆ ಸಂಚಾರ ಕಡಿತಗೊಂಡಿದೆ. ಹೊಸ ಸೇತುವೆ ಅಕ್ಕಪಕ್ಕದ ಬಡಾವಣೆಗಳಿಗೂ ನೀರು ನುಗ್ಗಿ ದೊಡ್ಡ ಅವಾಂತರ ಸೃಷ್ಟಿ ಮಾಡಿದೆ. ನೂರಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಮನೆಯಲ್ಲಿರುವ ಅಗತ್ಯದ ವಸ್ತುಗಳು ನೀರುಪಾಲಾಗಿವೆ.

ಇದನ್ನೂ ಓದಿ:ವಿಜಯನಗರ; ತುಂಗಾಭದ್ರ ಜಲಾಶಯದ ಹಿನ್ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ, ವಿಡಿಯೋ ನೋಡಿ

ಭದ್ರಾವತಿಯಲ್ಲಿ ಮೂರು ಕಾಳಜಿ ಕೇಂದ್ರ ಓಪನ್

ಭದ್ರಾವತಿಯಲ್ಲಿ ಮೂರು ಕಾಳಜಿ ಕೇಂದ್ರ ಓಪನ್ ಮಾಡಲಾಗಿದೆ. ಭದ್ರಾವತಿ ನಗರಕ್ಕೆ ಭದ್ರಾ ನದಿಯ ನೆರೆ ಬಂದಿದ್ದು, ಜನರನ್ನು ಬೆಚ್ಚಿಬಿಳಿಸಿದೆ. ಸದ್ಯ ಡ್ಯಾಂ ನಿಂದ ಇದೇ ರೀತಿ ನೀರು ಬಿಟ್ಟರೇ ಭದ್ರಾ ತೀರಿದ ಮತ್ತಿಷ್ಟು ಬಡಾವಣೆಗಳಿಗೆ ನೀರು ನುಗ್ಗಿ ಸಮಸ್ಯೆಗಳನ್ನು ಮಾಡುವುದು ಗ್ಯಾರಂಟಿ. ಇದಕ್ಕೆಲ್ಲ ಶಾಶ್ವತ ಪರಿಹಾರ ಬೇಕಿದೆ. ಭದ್ರಾವತಿ ನಗರದ ತುಂಗಾ ನದಿ ತೀರಿದ ತಗ್ಗು ಪ್ರದೇಶಗಳಿಗೆ ತಡೆಗೋಡೆ ನಿರ್ಮಾಣ ಮಾಡಬೇಕಿದೆ. ಅಂದರೆ ಮಾತ್ರ ಭದ್ರೆ ನೆರೆಯಿಂದ ಸಂತ್ರಸ್ತರಿಗೆ ಮುಕ್ತಿ ಸಿಗಲು ಸಾಧ್ಯ. ಭದ್ರಾ ನದಿ ಹೊಡೆತಕ್ಕೆ ಭದ್ರಾವತಿಯ ಜನರು ನಲುಗಿ ಹೋಗಿದ್ದಾರೆ. ಇದೇ ರೀತಿ ಡ್ಯಾಂನಿಂದ ಇನ್ನೂ ಹೆಚ್ಚು ನೀರು ಬಿಟ್ಟರೆ ಭದ್ರಾದ ನದಿ ಪಾತ್ರದ ಜನರಿಗೆ ಮತ್ತಷ್ಟ ಸಂಕಷ್ಟಗಳು ಎದುರಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು