AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ವಿದ್ಯುತ್ ದರ ಏರಿಕೆ ಖಂಡಿಸಿ ಮೆಸ್ಕಾಂ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ; ಕಲ್ಲು ತೂರಿದ ಕಾರ್ಯಕರ್ತ ಅರೆಸ್ಟ್

ವಿದ್ಯುತ್ ದರ ಏರಿಕೆ ಖಂಡಿಸಿ ಇಂದು(ಜೂ.14) ಮೆಸ್ಕಾಂ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾರ್ಯಕರ್ತರು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿದ್ದು, ಓರ್ವ ಕಾರ್ಯಕರ್ತನನ್ನು ವಶಕ್ಕೆ ಪಡೆಯಲಾಗಿದೆ.

ಕಿರಣ್ ಹನುಮಂತ್​ ಮಾದಾರ್
|

Updated on:Jun 14, 2023 | 1:47 PM

Share

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ  ರಾಜ್ಯಾದ್ಯಂತ ಪ್ರತಿಭಟನೆಗಳು ಜೋರಾಗಿವೆ. ಅದರಂತೆ ಇಂದು(ಜೂ.14) ಮೆಸ್ಕಾಂ ಕಚೇರಿ ಮುಂದೆ ಬಿಜೆಪಿ(BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಶಾಸಕ ಎಸ್.ಎನ್ ಚನ್ನಬಸಪ್ಪ(S.N Channabasappa) ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕಾರ್ಯಕರ್ತರು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಕಲ್ಲು ತೂರಿದ ಕಾರ್ಯಕರ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಓರ್ವ ಕಾರ್ಯಕರ್ತನನ್ನು ವಶಕ್ಕೆ ಪಡೆಯಲಾಗಿದೆ.

ಕೈಗಾರಿಕೆಗಳಿಗೂ ಕರೆಂಟ್ ಶಾಕ್: ಕೈಗಾರಿಕೆಗೆ ಬೀಗ ಹಾಕಿ, ಕೀ ಸರ್ಕಾರಕ್ಕೆ ಕೊಡ್ತೀವಿ ನೀವೇ ನಡೆಸಿ ಎಂದ ಪೀಣ್ಯ ಕೈಗಾರಿಕೆ ಸಂಘ

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಒಂದು ಕಡೆ ಉಚಿತ ವಿದ್ಯುತ್ ಎಂದು ಘೋಷಿಸಿ ಅದಕ್ಕೆ ಷರತ್ತುಗಳನ್ನು ವಿಧಿಸಿದೆ. ಮತ್ತೊಂದೆಡೆ ಉಚಿತ ವಿದ್ಯುತ್ ಪಡೆಯುವ ಮೊದಲೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್ ತಗುಲಿದೆ. 200 ರೂಪಾಯಿ ವಿದ್ಯುತ್ ಬಿಲ್ ಬರುತ್ತಿದ್ದದ್ದು, ಜೂನ್‌ನಲ್ಲಿ 600 ರೂಪಾಯಿ ಬಂದಿದ್ದರೆ, 500 ರೂಪಾಯಿ ಕಟ್ಟುತ್ತಿರುವವರು, ಜೂನ್‌ನಲ್ಲಿ 1500-1800 ರೂಪಾಯಿವರೆಗೆ ವಿದ್ಯುತ್ ಬಿಲ್ ಕಂಡು ಶಾಕ್ ಆಗಿದ್ದಾರೆ. ಇನ್ನು ಜನಸಾಮಾನ್ಯರದೊಂದು ಸಮಸ್ಯೆಯಾದ್ರೆ, ಕೈಗಾರಿಕೆಗಳು ಕೂಡ ವಿದ್ಯುತ್ ದರ ಏರಿಕೆಗೆ ಕಂಗಾಲಾಗಿವೆ. ವಿದ್ಯುತ್ ಬಿಲ್​ಗೆ ಬೆದರಿ ಸಣ್ಣ ಕೈಗಾರಿಕೆಗಳು ಬಳಲಿ ಬೆಂಡಾಗಿವೆ.

ಇದನ್ನೂ ಓದಿ:ವಿದ್ಯುತ್​ ಬಿಲ್​ ದರ ಏರಿಕೆ: ಬಳ್ಳಾರಿಯಲ್ಲಿ ಅಂಗಡಿಗಳನ್ನು ಬಂದ್​ ಮಾಡಿ ಮುಷ್ಕರ ನಡೆಸಿದ ವ್ಯಾಪಾರಸ್ಥರು

ಕೈಗಾರಿಕೆಗೆ ಬೀಗ ಹಾಕಿ ಸರ್ಕಾರಕ್ಕೆ ನಡೆಸುವಂತೆ ಕೀ ಕೊಡಲು ಪೀಣ್ಯ ಸಣ್ಣ ಕೈಗಾರಿಕೆಗಳು ಮುಂದಾಗಿವೆ. ಏಷ್ಯಾದಲ್ಲಿ ಸುಪ್ರಸಿದ್ದ, ಖ್ಯಾತಿ ಪಡೆದಿರುವ ಬೆಂಗಳೂರಿನ ಪೀಣ್ಯ ಕೈಗಾರಿಕೆಯು ಮೆಕಾನಿಕಲ್, ಗಾರ್ಮೆಂಟ್ ಸಣ್ಣ ಕೈಗಾರಿಕೆಗೆ ಹೆಸರುವಾಸಿ. ಆದ್ರೆ, ಈಗ ಕರೆಂಟ್ ಯೂನಿಟ್ ಬೆಲೆ ಹಾಗೂ ನಿಗಧಿತ ಶುಲ್ಕ ಹೆಚ್ಚಳದಿಂದ ಕೈಗಾರಿಕೆ ನಡೆಸಲು ಭಾರೀ ಸಮಸ್ಯೆ ಎದುರಾಗಿದೆ. ಇನ್ನು ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಕೊಡಿ. ಅದು ಬಿಟ್ಟು ಈ ರೀತಿ ಕರೆಂಟ್‌ ಶಾಕ್‌ ಕೊಡಬೇಡಿ. 4 ಸಾವಿರಕ್ಕೂ ಹೆಚ್ಚು ಮೆಕಾನಿಕಲ್ ಸಣ್ಣ ಕೈಗಾರಿಕೆಗಳಿಗೆ ಸಂಕಷ್ಟ ಎದುರಾಗಿದೆ. ಹೀಗೆ ಮುಂದುವರೆದ್ರೆ ಕೈಗಾರಿಕೆ ಬೀಗ ಹಾಕಿ ಅದರ ಕೀ ನಿಮಗೆ ಕೊಡ್ತೀವಿ, ನೀವೇ ನಡೆಸಿ ಎಂದು ಪೀಣ್ಯ ಕೈಗಾರಿಕೆ ಸಂಘದ ಅಧ್ಯಕ್ಷ ಮಂಜುನಾಥ್ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Wed, 14 June 23

Follow Us
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?