AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಕ್ಸ್​ನ ಅಸಲಿ ಸತ್ಯ ಬಯಲು, ಆರೋಪಿಗಳ ಖತರ್ನಾಕ್ ಪ್ಲ್ಯಾನ್ ಹೇಗಿದೆ ನೋಡಿ

ಪೊಲೀಸರ ವಿಚಾರಣೆಯಲ್ಲಿ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾದ ಬಾಕ್ಸ್ ಹಿಂದಿನ ಅಕ್ರಮದ ಬಗ್ಗೆ ಆರೋಪಿಗಳು ಬಾಯಿಬಿಟ್ಟಿದ್ದಾರೆ. ಬಾಕ್ಸ್​ನಲ್ಲಿ ಕಂತೆ, ಕಂತೆ ಹಣ ಇದೆ. ಆ ಬಾಕ್ಸ್ ನಿಮ್ಮದಾಗಲು 5 ಲಕ್ಷ ಕೊಡಿ ಬಳಿಕ ಬಾಕ್ಸ್ ತೆಗೆದುಕೊಂಡು ಹೋಗಿ ಎಂದು ಉದ್ಯಮಿಯೊಬ್ಬರಿಗೆ ಈ ಖದೀಮರು ಟೋಪಿ ಹಾಕಿದ್ದ ಬಗ್ಗೆ ತನಿಖೆಯಲ್ಲಿ ಬಯಲಾಗಿದೆ.

ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಕ್ಸ್​ನ ಅಸಲಿ ಸತ್ಯ ಬಯಲು, ಆರೋಪಿಗಳ ಖತರ್ನಾಕ್ ಪ್ಲ್ಯಾನ್ ಹೇಗಿದೆ ನೋಡಿ
ಅನಾಮಧೇಯ ಬಾಕ್ಸ್ ಪತ್ತೆ
Basavaraj Yaraganavi
| Updated By: ಆಯೇಷಾ ಬಾನು|

Updated on: Nov 07, 2023 | 1:59 PM

Share

ಶಿವಮೊಗ್ಗ, ನ.07: ಶಿವಮೊಗ್ಗದ ರೈಲ್ವೆ ನಿಲ್ದಾಣದ (Shivamogga Railway Station) ಬಳಿ‌ ಪತ್ತೆಯಾದ ಎರಡು ಅನುಮಾನಾಸ್ಪದ ಬಾಕ್ಸ್ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಬೃಹತ್ ಬಾಕ್ಸ್​ಗಳು ಪತ್ತೆಯಾಗುತ್ತಿದ್ದಂತೆ ತನಿಖೆಗೆ ಇಳಿದ ಪೊಲೀಸರು ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದಲ್ಲಿ ಭದ್ರಾವತಿ ಮೂಲದ ನಸ್ರುಲ್ಲಾ ಹಾಗೂ ತಿಪಟೂರಿನ ಜಬೀವುಲ್ಲಾ ಎಂಬ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದರು. ಸದ್ಯ ಪೊಲೀಸರ ವಿಚಾರಣೆಯಲ್ಲಿ ಬಾಕ್ಸ್ ಹಿಂದಿನ ಅಕ್ರಮದ ಬಗ್ಗೆ ಆರೋಪಿಗಳು ಬಾಯಿಬಿಟ್ಟಿದ್ದಾರೆ. ಬಾಕ್ಸ್​ನಲ್ಲಿ ಕಂತೆ, ಕಂತೆ ಹಣ ಇದೆ. ಆ ಬಾಕ್ಸ್ ನಿಮ್ಮದಾಗಲು 5 ಲಕ್ಷ ಕೊಡಿ ಬಳಿಕ ಬಾಕ್ಸ್ ತೆಗೆದುಕೊಂಡು ಹೋಗಿ ಎಂದು ಉದ್ಯಮಿಯೊಬ್ಬರಿಗೆ ಈ ಖದೀಮರು ಟೋಪಿ ಹಾಕಿದ್ದ ಬಗ್ಗೆ ತನಿಖೆಯಲ್ಲಿ ಬಯಲಾಗಿದೆ.

ಆರೋಪಿ ನಸ್ರುಲ್ಲಾ ಮತ್ತು ಜಬೀವುಲ್ಲಾ ಎಂಬ ಇಬ್ಬರು ಬೇಗ ಹಣ ಮಾಡಬೇಕು ಎಂಬ ದುರುದ್ದೇಶದಿಂದ ತಿಪಟೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ ಎಂಬುವವರನ್ನು ಸಂಪರ್ಕಿಸಿ, ನಮಗೆ ಹಣ ತುಂಬಿದ ಬಾಕ್ಸ್​ಗಳು ಸಿಕ್ಕಿವೆ. ಹಣ ಬೇಕಾ ಎಂದು ಹಣದ ಆಸೆ ತೋರಿಸಿದ್ದರು. ಬಳಿಕ ಹಣ ಬೇಕಾದರೆ ಮೊದಲು ಎರಡೂವರೆ ಲಕ್ಷ ಹಣವನ್ನು ನಮ್ಮ ಖಾತೆಗೆ ಹಾಕು ಎಂದು ಹೇಳಿದ್ದಾರೆ. ಇದನ್ನು ನಂಬಿದ ರಮೇಶ್ ಹಣ ಕಳಿಸಿದ್ದಾರೆ. ನಂತರ ಹಣ ಪಡೆದು ಒಂದು ವಾರ ಕಳೆದರೂ ಹಣದ ಬಾಕ್ಸ್​ಗಳನ್ನು ತೋರಿಸದ ಕಾರಣ ರಮೇಶ್​, ಆರೋಪಿಗಳಿಗೆ ಕರೆ ಮಾಡಿ ತಾನು ಕೊಟ್ಟ ಹಣವನ್ನು ವಾಪಾಸ್ ಕೊಡುವಂತೆ ಮನವಿ ಮಾಡಿದ್ದಾರೆ. ಆಗ ಆರೋಪಿಗಳು ಹಣ ಬೇಕಾದರೆ ಮತ್ತೆ ಎರಡೂವರೆ ಲಕ್ಷ ಹಣ ಹಾಕುವಂತೆ ತಿಳಿಸಿದ್ದಾರೆ. ಹೀಗೆ ಒಟ್ಟು ಐದು ಲಕ್ಷ ಹಣ ಪಡೆದಿದ್ದಾರೆ. ಬಳಿಕ ಹಣ ಬೇಕಾದರೆ ಶಿವಮೊಗ್ಗಕ್ಕೆ ಬಾ ಎಂದು ಕರೆಸಿಕೊಂಡು ರೈಲ್ವೆ ನಿಲ್ದಾಣದ ಬಳಿ ಹಣದ ಪೆಟ್ಟಿಗೆ ಇದೆ ಎಂದು ಬಾಕ್ಸ್ ತೋರಿಸಿದ್ದಾರೆ. ಬಾಕ್ಸ್ ನೋಡುತ್ತಿದ್ದಂತೆ ಅನುಮಾನಗೊಂಡ ರಮೇಶ್ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಆರೋಪಿಗಳು ಬಾಕ್ಸ್​ನಲ್ಲಿ ಉಪ್ಪಿನ ಚೀಲ ತುಂಬಿ ಪ್ಯಾಕ್ ಮಾಡಿಟ್ಟಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ: ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಅನಾಮಧೇಯ ಬಾಕ್ಸ್​ ಪತ್ತೆ; ಇಬ್ಬರು ಶಂಕಿತರ ವಿಚಾರಣೆ

ನವೆಂಬರ್ 05ರಂದು ಶಿವಮೊಗ್ಗದ ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್​​ನಲ್ಲಿ 2 ಅನಾಮಧೇಯ ಬಾಕ್ಸ್ ಪತ್ತೆ  ಆಗಿತ್ತು. ಜೊತೆಗೆ ಬಾಕ್ಸ್ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಮತ್ತು ಫುಡ್​ ಗ್ರೈನ್ಸ್ ಆ್ಯಂಡ​​ ಶುಗರ್ಸ್ ಎಂದು ಬರೆಯಲಾಗಿತ್ತು. ಬಾಕ್ಸ್​ಗಳ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕೂಡಲೇ ಬಾಂಬ್​ ಸ್ಕ್ವಾಡ್, ಶ್ವಾನದಳ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದರು. ಬಾಕ್ಸ್​​ ಬಳಿ ಯಾರೂ ತೆರಳದಂತೆ ಬ್ಯಾರಿಕೇಡ್​​ ಹಾಕಲಾಗಿತ್ತು. ಬಳಿಕ ತುಮಕೂರಿನಲ್ಲಿ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು ಹಣ ಗಳಿಕೆಗಾಗಿ ಬಾಕ್ಸ್​ಗಳಲ್ಲಿ ಉಪ್ಪು ತುಂಬಿ ಹಣ ಇದೆ ಎಂದು ನಂಬಿಸಿ ವಂಚನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಹಿರಂಗವಾಗಿದೆ.

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ