AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನಾಲೆಯ 100 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಪ್ರಸಕ್ತ ಮುಂಗಾರು ಮತ್ತು ಹಿಂಗಾರು ಸಂಪೂರ್ಣ ಕೈಕೊಟ್ಟು ನದಿಯಲ್ಲಿ ನೀರು ಬತ್ತಿ ಹೋಗಿದೆ. ಬೇಸಿಗೆ ದಿನಗಳಲ್ಲಿ ಕುಡಿವ ನೀರಿಗೂ ತತ್ವಾರ ಬರುವ ಆತಂಕವಿದೆ. ಈ ಹಿನ್ನೆಲೆ ಹಾವೇರಿ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಭದ್ರಾ ಜಲಾಶಯ(Bhadra Dam)ದಿಂದ ನೀರು ಬಿಡುಗಡೆ ಮಾಡಲಾಗಿದೆ.

ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನಾಲೆಯ 100 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಭದ್ರಾ ಜಲಾಶಯ
Basavaraj Yaraganavi
| Edited By: |

Updated on: Feb 20, 2024 | 2:45 PM

Share

ಶಿವಮೊಗ್ಗ, ಫೆ.20: ಭದ್ರಾ ಜಲಾಶಯ(Bhadra Dam)ದಿಂದ ನೀರು ಬಿಡುಗಡೆ ಹಿನ್ನೆಲೆ ನಾಲೆಯ 100 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಹಾವೇರಿ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ನಾಲೆಗೆ ರೈತರು ಪಂಪ್ ಸೆಟ್ ಅಳವಡಿಸಿದ್ದು, ಕೊನೆಯ ಭಾಗದ ರೈತರಿಗೆ ಕುಡಿಯುವ ನೀರು ತಲುಪದ ಹಿನ್ನೆಲೆ ಭದ್ರಾ ನಾಲೆಯ ಮೇಲೆ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನದಿ ಮತ್ತು ಕಾಲುವೆಗಳ ಪ್ರದೇಶದಲ್ಲಿ ಅನಧಿಕೃತವಾಗಿ ರೈತರು ಹೊಲಗಳಿಗೆ ನೀರನ್ನು ಹರಿಸುವುದಾಗಲೀ ಅಥವಾ ಪಂಪ್ ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿದೆ. ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿಸಲಾಗಿದೆ. ಇನ್ನು ನಿಷೇಧಾಜ್ಞೆ ಸಮಯದಲ್ಲಿ ಶಸ್ತ್ರ, ಬಡಿಗೆ,ಬರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದಂತಹ ಯಾವುದೇ ಮಾರಕಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ನಿಷೇಧಿಸಿದೆ.

ಇದನ್ನೂ ಓದಿ:4 ಜಿಲ್ಲೆಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಕೇವಲ 24 ಗಂಟೆಯಲ್ಲಿ ಹರಿದುಬಂತು 5 TMC ನೀರು

ಜೊತೆಗೆ ಕಲ್ಲುಗಳನ್ನು ಇಲ್ಲವೇ ಸ್ಫೋಟಕ ವಸ್ತುಗಳು, ಇತ್ಯಾದಿಗಳನ್ನು ತೆಗೆದುಕೊಂಡು ಓಡಾಡುವುದು ಹಾಗೂ ಶೇಖರಿಸುವ ಹಾಗಿಲ್ಲ. ಬಹಿರಂಗವಾಗಿ ಘೋಷಣೆಗಳನ್ನು ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಮಾಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನಗಳನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ. ಯಾರದರೂ ಇದನ್ನು ಅನುಸರಿಸಿದೆ ಇದ್ದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಖಡಕ್​ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Yaraganavi
Basavaraj Yaraganavi
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!