AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಗೆ ಕಾಲಿಗೆ ಗುಂಡೇಟು; ಮಟ ಮಟ ಮಧ್ಯಾಹ್ನವೇ ದಾಳಿ ಮಾಡಿದ್ದ ರೌಡಿ ಶೀಟರ್ ಪೊಲೀಸ್​ ಬಲೆಗೆ

ಕಳೆದ ಮೂರು ದಿನಗಳ ಹಿಂದೆ ಶಿವಮೊಗ್ಗ ನಗರದಲ್ಲಿ ಹಾಡು ಹಗಲೇ ರೌಡಿಗಳು ಅಟ್ಟಹಾಸ ಮೆರೆದಿದ್ದರು. ರೌಡಿ ಮತ್ತು ಸಹಚರರು ಮಟ ಮಟ ಮಧ್ಯಾಹ್ನವೇ ಮಾರಕಾಸ್ತ್ರಗಳಿಂದ ವ್ಯಕ್ತಿ ಮೇಲೆ ದಾಳಿ ಮಾಡಿದ್ದರು. ಈ ದಾಳಿ ನಡದು ಮೂರು ದಿನಗಳ ಬಳಿಕ ರೌಡಿಸಂ ಖದರ್ ತೋರಿಸಿದ್ದ ರೌಡಿ ಕಾಲಿಗೆ ಪೊಲೀಸರು ಗುಂಟೇಟು ಹೊಡೆದಿದ್ದಾರೆ.

ರೌಡಿಗೆ ಕಾಲಿಗೆ ಗುಂಡೇಟು; ಮಟ ಮಟ ಮಧ್ಯಾಹ್ನವೇ ದಾಳಿ ಮಾಡಿದ್ದ ರೌಡಿ ಶೀಟರ್ ಪೊಲೀಸ್​ ಬಲೆಗೆ
ಆರೋಪಿ. ಎಸ್​ಪಿ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 28, 2023 | 9:28 PM

ಶಿವಮೊಗ್ಗ, ಡಿ.28: ನಗರದ ಫ್ರೀಡಂ ಪಾರ್ಕ್​ನಲ್ಲಿ ಡಿಸೆಂಬರ್​ 25 ರ ಮಧ್ಯಾಹ್ನ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಗಾಯಗೊಂಡಿರುವ ವ್ಯಕ್ತಿಯನ್ನು ಶಿವಮೊಗ್ಗ(Shivamogga)ದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಫ್ರೀಡಂ ಪಾರ್ಕ್​ನಲ್ಲಿರುವ ವಾಕಿಂಗ್ ಪಾತ್​ನ ಮೇಲೆ ಶಶಿಕುಮಾರ್ ಯುವಕ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ಮೂವರು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಈ ಘಟನೆ ನಡೆದು ಎರಡು ದಿನಗಳ ಬಳಿಕ ಇಂದು ಬೆಳಗಿನ ಜಾವ ಶಿವಮೊಗ್ಗ ತಾಲೂಕಿನ ತ್ಯಾಜವಳ್ಳಿಯಲ್ಲಿ ದಾಳಿ ಮಾಡಿದ ಆರೋಪಿ ರೌಡಿ ಶೀಟರ್ ಓಲಂಗ ಮಂಜುನಾಥ್​ನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಪ್ರಕರಣದ ತನಿಖೆಯ ಕುರಿತು ಬೆಳಗಿನ ಜಾವ ಸ್ಥಳ ಮಹಜರಕ್ಕೆ ತೆರಳಿದ್ದ ವೇಳೆಯಲ್ಲಿ ಈ ಘಟನೆ ನಡೆದಿದ್ದು, ರೌಡಿಯು ಡ್ರ್ಯಾಗನ್​ನಿಂದ ಮೊದಲು ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಜಯನಗರ ಸಿಪಿಐ ಸಿದ್ದನಗೌಡ ವಾರ್ನಿಂಗ್ ಮಾಡಿದರೂ ರೌಡಿಯು ಕೇಳದೇ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಆತನ ಕಾಲಿಗೆ ಗುಂಡೇಟು ಕೊಟ್ಟು ಪೊಲೀಸರು ರೌಡಿಯನ್ನು ಬಂಧಿಸಿದ್ದಾರೆ. ಗಾಯಾಳು ರೌಡಿಯನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಕತ್ತು ಸೀಳಿ ಎರಡನೇ ಪತ್ನಿಯ ಕೊಲೆ

ಘಟನೆ  ವಿವರ

ಶಿವಮೊಗ್ಗದ ಜಟ್ ಪಟ್ ನಗರದಲ್ಲಿ ಮೂರು ದಿನಗಳ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಶಶಿಕುಮಾರ್ ಮತ್ತು ಬೊಮ್ಮಕಟ್ಟೆಯ ರೌಡಿಶೀಟರ್ ಮಂಜುನಾಥ್ ಓಲಂಗ ಗ್ಯಾಂಗ್ ನಡುವೆ ಕಿರಿಕ್ ಆಗಿತ್ತು. ಇದೇ ಗಲಾಟೆಯನ್ನು ಮುಂದೆ ಇಟ್ಟುಕೊಂಡು ಮಂಜುನಾಥ್ ಮತ್ತು ಆತನ ಸಹಚರರು ಸೇರಿಕೊಂಡು ಶಶಿ ಕುಮಾರ್ ಮೇಲೆ ಮಾರಣಾಂತಿಕ ದಾಳಿ ಮಾಡಿದ್ದರು. ನಂತರ ಇಂದು ಮುಂಜಾನೆ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಹೋಗಿದ್ದ ರೌಡಿಯು, ಈಗ ಕಾಲಿಗೆ ಖಾಕಿಯಿಂದ ಗುಂಡೇಟು ತಿಂದು ಆಸ್ಪತ್ರೆ ಪಾಲಾಗಿದ್ದಾನೆ. ಇತನ ಮೇಲೆ 10 ಕ್ಕೂ ಹೆಚ್ಚು ಪ್ರಕರಣಗಳಿವೆ. ಕೊಲೆ ಮತ್ತು ಕೊಲೆಗೆ ಯತ್ನ ಸಂಬಂಧಿಸಿದಂತೆ ವಿವಿಧ ಕೇಸ್​ಗಳಿವೆ. ಇನ್ನು ರೌಡಿ ಕಾಲಿಗೆ ಬುಲೆಟ್ ಹಾರಿಸುವ ಮೂಲಕ ಖಡಕ್ ಎಚ್ಚರಿಕೆ ಶಿವಮೊಗ್ಗ ಪೊಲೀಸರು ರೌಡಿಗಳಿಗೆ ರವಾನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು