AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರ ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ ಆರೋಪಿ ಸಮೀರ್ ಅರೆಸ್ಟ್; ಘಟನೆ ಹಿಂದಿದೆ ತಂಗಿ ವಿಚಾರ

ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ ಆರೋಪಿ ಸಮೀರ್​​ನನ್ನು ಸಾಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಗರ ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ ಆರೋಪಿ ಸಮೀರ್ ಅರೆಸ್ಟ್; ಘಟನೆ ಹಿಂದಿದೆ ತಂಗಿ ವಿಚಾರ
ಹಲ್ಲೆಗೆ ಯತ್ನ ನಡೆದ ಸ್ಥಳ
TV9 Web
| Edited By: |

Updated on:Jan 10, 2023 | 12:03 PM

Share

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ ಆರೋಪಿ ಸಮೀರ್​​ನನ್ನು ಸಾಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಮೀರ್ ಬಂಧನಕ್ಕಾಗಿ 3 ವಿಶೇಷ ಪೊಲೀಸ್​ ತಂಡ ರಚಿಸಿದ್ದ ಎಸ್​​ಪಿ ಕಾರ್ಯಾಚರಣೆ ನಡೆಸಿ ತಡರಾತ್ರಿ ಶಿವಮೊಗ್ಗದಲ್ಲಿ ಸಮೀರ್​​​ನನ್ನು ವಶಕ್ಕೆ ಪಡೆದಿದ್ದಾರೆ. ಈ ಕೇಸ್​ನಲ್ಲಿ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸುನೀಲ್​ ಮೇಲೆ ಮಚ್ಚು ಬೀಸಿದ್ದ A1 ಸಮೀರ್ ಹಾಗೂ ಮತ್ತಿಬ್ಬರು ಆರೋಪಿಗಳಾದ ಮನ್ಸೂರ್ & ಐಮಾನ್ ಬಂಧಿಸಲಾಗಿದೆ. ಪ್ರಕರಣದಲ್ಲಿ ಇಬ್ಬರ ಪಾತ್ರದ ಬಗ್ಗೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.

ಸುನೀಲ್​ ವಿರುದ್ಧ ಸಮೀರ್​ ತಂಗಿಯನ್ನು ಚುಡಾಯಿಸಿದ ಆರೋಪ

ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನ ಪ್ರಕರಣಕ್ಕೆ ವೈಯಕ್ತಿಕ ವಿಚಾರದ ಲಿಂಕ್ ಇದೆ ಎಂದು ಎಸ್​​ಪಿ ಜಿ.ಕೆ.ಮಿಥುನ್​​ ತಿಳಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಸುನಿಲ್, ಸಮೀರ್ ತಂಗಿಯನ್ನು ಚುಡಾಯಿಸಿದ್ದ. ಈ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು. 4-5 ತಿಂಗಳಿಂದ ಸಮೀರ್ ತಂಗಿಯನ್ನ ಸುನೀಲ್ ಚುಡಾಯಿಸಿದ ಆರೋಪ ಕೇಳಿ ಬಂದಿತ್ತು. ಅಲ್ಲದೆ ಸುನೀಲ್​​ ಸಮೀರ್​ ತಂಗಿಯ ಫೋನ್ ನಂಬರ್​ ಕೇಳಿದನಂತೆ. ಈ ಸಂಬಂಧ ಸುನೀಲ್​ಗೆ ಹಲವು ಬಾರಿ ಸಮೀರ್ ಎಚ್ಚರಿಕೆ ನೀಡಿದ್ದನಂತೆ. ಇದೇ ವಿಚಾರಕ್ಕೆ ಸುನೀಲ್,​​ ಸಮೀರ್ ನಡುವೆ ಗಲಾಟೆ ಆಗಿದೆ.

ನಿನ್ನೆ ಮೇಕೆಗಳಿಗೆ ಸಮೀರ್ ಹುಲ್ಲು ತರಲು ಹೋಗಿದ್ದ​​​. ಈ ವೇಳೆ ಸುನೀಲ್ ಹಾಗೂ ಸಮೀರ್ ನಡುವೆ ಗಲಾಟೆ ಆಗಿದೆ. ಹುಲ್ಲು ಕೊಯ್ಯಲು ತಂದಿದ್ದ ಮಚ್ಚನ್ನು ಸುನೀಲ್ ಮೇಲೆ ಬೀಸಿದ್ದಾನೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಶಿವಮೊಗ್ಗದಲ್ಲಿ ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಘಟನೆ ಹಿನ್ನೆಲೆ

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಜ.08ರಂದು ಅದ್ಧೂರಿಯಾಗಿ ಶೌರ್ಯ ಸಂಚಲನ ಯಾತ್ರೆ ನಡೆದಿತ್ತು. ಬಜರಂಗದಳ ಮತ್ತು ವಿಹೆಚ್‌ಪಿ ಸಂಘಟನೆಗಳು ಕಾರ್ಯಕ್ರಮ ಆಯೋಜಿಸಿದ್ವು. ಇದೇ ಪ್ರೋಗ್ರಾಂಗೆ ಸಾಗರ ನಗರದ ಭಜರಂಗದಳ ಸಹ ಸಂಚಾಲಕ ಸುನೀಲ್‌ ಕೂಡಾ ಬಂದಿದ್ದ. ಹೀಗೆ ಯಾತ್ರೆಗೆ ಬರೋವಾಗ್ಲೇ ಸುನೀಲ್‌ ಹಾಗೂ ಸಾಗರದ ಸಮೀರ್‌ ನಡುವೆ ಮಾತಿನ ಚಕಮಕಿ ಆಗಿತ್ತು. ಸುಮೀರ್‌ ಮಾತಿಗೆ ಡೋಂಟ್‌ ಕೇರ್‌ ಎಂದ ಸುನೀಲ್‌ ಶಿವಮೊಗ್ಗಕ್ಕೆ ಬಂದು ಯಾತ್ರೆಯಲ್ಲಿ ಭಾಗಿಯಾಗಿದ್ದ. ರಾತ್ರಿಯೇ ಸಾಗರಕ್ಕೆ ಮರಳಿದ್ದ. ಆದ್ರೆ ಸಮೀರ್​ಗೆ ಸುನೀಲ್‌ ಮೇಲೆ ಕೋಪವಿತ್ತು. ಹೀಗಾಗಿ ಜ.09ರಂದು ಬೆಳಗಾಗ್ತಿದ್ದಂತೆ ಸುನೀಲ್‌ ಬೈಕ್‌ನಲ್ಲಿ ಹೊರಟಿದ್ದ. ಇದನ್ನ ನೋಡಿದ ಸಮೀರ್‌, ತನ್ನ ಬೈಕ್‌ನಲ್ಲಿದ್ದ ಮಚ್ಚು ತೆಗೆದವನೇ ಸುನೀಲ್‌ ಮೇಲೆ ಅಟ್ಯಾಕ್ ಮಾಡಿದ್ದ.

ಇದನ್ನೂ ಓದಿ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ; ಮಂಗಳವಾರ ಅಘೋಷಿತ ಬಂದ್​ಗೆ ಕರೆ

ಸಮೀರ್‌ ಕೈಯಲ್ಲಿ ಮಚ್ಚು ಹಿಡಿದಿರೋದನ್ನ ನೋಡಿದ್ದ ಸುನೀಲ್‌ ಎಚ್ಚೆತ್ತುಕೊಂಡಿದ್ದ. ಬೈಕ್‌ನಿಂದ ಕೆಳಗಿಳಿಯದೇ ವೇಗವಾಗಿ ಹೊರಟಿದ್ದ. ಹೀಗಾಗಿ ಸ್ವಲ್ಪದ್ರಲ್ಲೇ ಸಾವಿನಿಂದ ಪಾರಾಗಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳು ಸಿಟ್ಟಿಗೆದ್ದಿವೆ. ಅದ್ರಲ್ಲೂ ಬಜರಂಗದಳ ಸಂಚಾಲಕನ ಮೇಲೆ ಸಮೀರ್‌ ಮಚ್ಚು ಬೀಸೋ ದೃಶ್ಯ ಮೊಬೈಲ್‌ನಲ್ಲಿ ಹರಿದಾಡ್ತಿದ್ದಂತೆ ಎಲ್ರೂ ಆಕ್ರೋಶಗೊಂಡಿದ್ದಾರೆ. ಸಾಗರ ನಗರ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಮೀರ್‌ ಬಂಧನಕ್ಕೆ ಆಗ್ರಹಿಸಿದ್ದರು. ಹಾಘೂ ಸಾಗರ ಬಂದ್‌ಗೂ ಕರೆ ನೀಡಿದ್ದರು. ಸದ್ಯ ಈಗ ಸಮೀರ್ ಅರೆಸ್ಟ್ ಆಗಿದ್ದಾನೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:47 am, Tue, 10 January 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!