AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಬಿಜೆಪಿ ಮುಖಂಡನ ರಾಸಲೀಲೆ ಸದ್ಯದಲ್ಲೇ ಬಿಡುಗಡೆ, ಪೋಸ್ಟ್ ಹಾಕಿದ್ದವರ ವಿರುದ್ಧ ದೂರು ದಾಖಲು

ಬಿಜೆಪಿ ಮುಖಂಡನ ರಾಸಲೀಲೆ ಬಿಡುಗಡೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪೋಸ್ಟ್ ಹಾಕಿದ ವ್ಯಕ್ತಿ ವಿರುದ್ಧ ಕ್ರಮಕೈಗೊಳ್ಳುವಂತೆ ಸಾಗರ ನಗರಸಭೆಯ ಸದಸ್ಯರ, ನಗರ ಬಿಜೆಪಿ ಮಂಡಲ ಅಧ್ಯಕ್ಷ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸದ್ಯದಲ್ಲೇ ಸಾಗರ ಬಿಜೆಪಿ ಮುಖಂಡನ ರಾಸಲೀಲೆ ಬಿಡುಗಡೆಯಾಗಲಿದೆ ಎನ್ನುವ ಬರಹವನ್ನು ನಾಗರಾಜ ಗುಡ್ಡೆಮನೆ ಎನ್ನುವರ ಫೋನ್​ ನಂಬರ್​ನಿಂದ​ ವಾಟ್ಸಪ್​ ಗ್ರೂಪ್​ವೊಂದಕ್ಕೆ ಹಾಕಲಾಗಿದ್ದು, ಇದೀಗ ಇವರ ವಿರುದ್ಧ ಕಾನೂನು ಕ್ರಮಕ್ಕೆ ಗಣೇಶ್ ಪ್ರಸಾದ್ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.

ಶಿವಮೊಗ್ಗ: ಬಿಜೆಪಿ ಮುಖಂಡನ ರಾಸಲೀಲೆ ಸದ್ಯದಲ್ಲೇ ಬಿಡುಗಡೆ, ಪೋಸ್ಟ್ ಹಾಕಿದ್ದವರ ವಿರುದ್ಧ ದೂರು ದಾಖಲು
ಸಾಗರ ಪೊಲೀಸ್ ಠಾಣೆ
Basavaraj Yaraganavi
| Edited By: |

Updated on:Aug 30, 2023 | 10:25 AM

Share

ಶಿವಮೊಗ್ಗ, (ಆಗಸ್ಟ್, 30): ಬಿಜೆಪಿ ಮುಖಂಡನ (Sagara BJP Leader) ರಾಸಲೀಲೆ ಬಿಡುಗಡೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕಿದ್ದವರ ವಿರುದ್ಧ ದೂರು ದಾಖಲಾಗಿದೆ. ಸಾಗರ ಬಿಜೆಪಿ ನಗರ ಮಂಡಲ ಗಣೇಶ್ ಪ್ರಸಾದ್ ಎನ್ನುವರು ದೂರು ನೀಡಿದ್ದಾರೆ. ಬಿಜೆಪಿ ಮುಖಂಡನ ರಾಸಲೀಲೆ ಬಿಡುಗಡೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ(Social Media) ಸುಳ್ಳು ಸುದ್ದಿ (Fake Post) ಹರಡಿದ ನಾಗರಾಜ ಗುಡ್ಡೆಮನೆ ವಿರುದ್ಧ ಕ್ರಮಕೈಗೊಳ್ಳುವಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರಿಗೆ ದೂರು ನೀಡಿದ್ದಾರೆ. ಡಿವೈಎಸ್ಪಿ ಕಚೇರಿಯಿಂದ ಬಂದ ದೂರಿನ ಅರ್ಜಿಯನ್ನು ಪರಿಶೀಲಿಸಿದ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಗಣೇಶ್ ಪ್ರಸಾದ್ ನೀಡಿದ ದೂರಿನಲ್ಲೇನಿದೆ?

ಪ್ರಭಾವಿ ಬಿಜೆಪಿ ಮುಖಂಡನ ರಾಸಲೀಲೆ ಬಿಡುಗಡೆ ಆಗಲಿದೆ ಎಂದು ಸುಳ್ಳು ಸುದ್ದಿಯನ್ನು ಹಾಕಿದ್ದಾರೆ. ಅಲ್ಲದೇ ಸಾಗರ ನಗರ ಮುಖಂಡನ ರಾಸಲೀಲೆ ಸದ್ಯದ್ಲಲೇ ಬಿಡುಗಡೆಯಾಗಲಿದೆ ಎಂದು 25/8/2023ರಂದು ಸಂಜೆ ವಾಟ್ಸಪ್​ ಗ್ರೂಪ್​ನಲ್ಲಿ ಹಾಕಲಾಗಿದೆ. ಇದು ನಾಗರಾಜ ಗುಡ್ಡೆಮನೆಯವರ ವಾಟ್ಸಪ್​ ನಂಬರ್​ನಿಂದ ಗ್ರೂಪಿಗೆ ಹಾಕಲಾಗಿದ್ದು, ಇದರಿಂದ ಸಾಗರದ ಬಿಜೆಪಿ ಮುಖಂಡರು, ಕಾರ್ಯಕರ್ತರ ಪ್ರತಿಷ್ಠೆಗೆ ಮಸಿ ಬಳಿದಂತೆ ಆಗಿದೆ. ಅಲ್ಲದೇ ಪಕ್ಷದ ನಾಯಕರಿಗೆ ಇದು ಮುಜುಗರ ಉಂಟು ಮಾಡಿದ್ದು, ಈ ರೀತಿ ಸುಳ್ಳು ಸುದ್ದಿ ಮತ್ತು ಅವಹೇಳನಕಾರಿ ಪೋಸ್ಟ್ ಹಾಕಿದ ನಾಗರಾಜ ಗುಡ್ಡೆಮನೆ ಹಾಗೂ ಈತನ ದುಷ್ಕೃತ್ಯಕ್ಕೆ ಸಹಕರಿಸಿದ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗಣೇಶ್ ಪ್ರಸಾದ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ಶಿವನೊಗ್ಗ ಜಿಲ್ಲ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:20 am, Wed, 30 August 23

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ