AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಎಸ್​ಡಿಪಿಐ ವಿರೋಧ

ಅಯೋಧ್ಯೆಯಲ್ಲಿ ಭ್ಯವ ರಾಮಮಂದಿರ ನಿರ್ಮಾಣವಾಗಿದೆ. ಮಂದಿರದಲ್ಲಿ ರಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಒಂದು ದಿನ ಮಾತ್ರ ಬಾಕಿ ಉಳಿದಿದೆ. ನಾಳೆ (ಸೋಮವಾರ ಜ.22) ರಂದು ಪ್ರಾಣ ಪ್ರತಿಷ್ಠೆ ನೆರವೇರುತ್ತದೆ. ಇನ್ನು ಈ ರಾಮಮಂದಿರ ನಿರ್ಮಾಣ ಮಾಡಿರುವುದಕ್ಕೆ ಎಸ್​ಡಿಪಿಐ ವಿರೋಧ ವ್ಯಕ್ತಪಡಿಸಿದೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಎಸ್​ಡಿಪಿಐ ವಿರೋಧ
ಎಸ್​​ಡಿಪಿಐ ಪೋಸ್ಟ್​​
Basavaraj Yaraganavi
| Updated By: ವಿವೇಕ ಬಿರಾದಾರ|

Updated on: Jan 21, 2024 | 2:44 PM

Share

ಶಿವಮೊಗ್ಗ, ಜನವರಿ 21: ಅಯೋಧ್ಯೆಯಲ್ಲಿ (Ayodhya) ಭ್ಯವ ರಾಮಮಂದಿರ ನಿರ್ಮಾಣವಾಗಿದೆ. ಮಂದಿರದಲ್ಲಿ ರಮಲಲ್ಲಾ (ಬಾಲರಾಮ)ನ (Ramlalla) ಪ್ರಾಣ ಪ್ರತಿಷ್ಠೆಗೆ ಒಂದು ದಿನ ಮಾತ್ರ ಬಾಕಿ ಉಳಿದಿದೆ. ನಾಳೆ (ಸೋಮವಾರ ಜ.22) ರಂದು ಪ್ರಾಣ ಪ್ರತಿಷ್ಠೆ ನೆರವೇರುತ್ತದೆ. ಇನ್ನು ಈ ರಾಮಮಂದಿರ (Ram mandir) ನಿರ್ಮಾಣ ಮಾಡಿರುವುದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವಿರೋಧ ವ್ಯಕ್ತಪಡಿಸಿದೆ.

ಹೌದು, “ರಾಮಮಂದಿರವನ್ನು ಬಾಬ್ರಿ ಮಸೀದಿಯ ಜಾಗದಲ್ಲಿ ನಿರ್ಮಿಸಲಾಗಿದೆ. ನಾವು ಯಾರ ವಿರುದ್ಧವೂ ಇಲ್ಲ. ನಾವು ನ್ಯಾಯ ಕೇಳುತ್ತಿದ್ದೇವೆ ಅಷ್ಟೇ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಲಾಗಿದೆ. ಇನ್ನು ಕೆಲವು ಎಸ್​ಡಿಪಿಐ ಮುಖಂಡರು ತಮ್ಮ ಈ ಸಾಲುಗಳನ್ನು ವಾಟ್ಸಪ್​​ ಸ್ಟೇಟಸ್​ ಇಟ್ಟಿದ್ದಾರೆ.

ಇದನ್ನೂ ಓದಿ: Ram Mandir: ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕುರಿತು ಟೀಕಿಸುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ; ಇಲ್ಲಿದೆ ವಿಡಿಯೋ

ರಾಮಮಂದಿರ ಉದ್ಘಾಟನೆ, ಆ ದಿನ ನೆತ್ತರು ಹರಿಯುವುದು ಗ್ಯಾರಂಟಿ

ನೆಲಮಂಗಲದಲ್ಲಿ ಅನ್ಯಕೋಮಿನ ವ್ಯಕ್ತಿಯಿಂದ ವಿವಾದಾತ್ಮಕ ಹೇಳಿಕೆ ನೀಡಲಾಗಿದೆ. ‘ಆ ದಿನ (ಜನವರಿ22 ರಂದು) ನೆತ್ತರು ಹರಿಯುವುದು ಗ್ಯಾರಂಟಿ. ರಾಮಮಂದಿರ ಉರುಳಿಸಿ ಅದೇ ಜಾಗದಲ್ಲಿ ಮಸೀದಿ ನಿರ್ಮಾಣ ಆಗುತ್ತೆ’ ಬೂದಿಹಾಳ್ ಗ್ರಾಮದಲ್ಲಿರುವ ಅಕ್ಕಪಕ್ಕದ ಅಂಗಡಿಯವರು ಗಲಾಟೆ ಮಾಡಿಕೊಂಡಿದ್ದಾರೆ. ಧರ್ಮೇಂದರ ಪಾಂಡೆ ಹಾಗೂ ಹುಸೇನ್ ನಡುವೆ ಮಾತುಕತೆ ಆರೋಪ ಮಾಡಲಾಗಿದ್ದು, ಪ್ರಕರಣ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ NCR ದಾಖಲು ಮಾಡಲಾಗಿದೆ.

ನೆಲಮಂಗಲ ಭಜರಂಗದಳದಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರು ಹಿನ್ನೆಲೆ ಹುಸೇನ್ ಹೇಳಿಕೆಯನ್ನು ಪೊಲೀಸರು ಪಡೆಕೊಂಡಿದ್ದಾರೆ. ಇತ್ತ ಮನೆಗೆ ಬಾರದ ಪತಿಯನ್ನ ನೆನದು ಹುಸೇನ್ ಪತ್ನಿ ಮದೀನಾ ಕಣ್ಣೀರು ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ