AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಐಗಿನಬೈಲು ಕ್ರಾಸ್​​​​ ಬಳಿ ಸರಣಿ ಅಪಘಾತ, ಕಾರಿನೊಳಗೆ ದನದ ಮಾಂಸ ಪತ್ತೆ

ಎರಡು ಕಾರುಗಳು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಐಗಿನಬೈಲು ಕ್ರಾಸ್ ಬಳಿ ನಡೆದಿದೆ.

ಶಿವಮೊಗ್ಗ: ಐಗಿನಬೈಲು ಕ್ರಾಸ್​​​​ ಬಳಿ ಸರಣಿ ಅಪಘಾತ, ಕಾರಿನೊಳಗೆ ದನದ ಮಾಂಸ ಪತ್ತೆ
ಸಾಗರ ತಾಲೂಕಿನಲ್ಲಿ ಸರಣಿ ಅಪಘಾತ
Basavaraj Yaraganavi
| Edited By: |

Updated on: Jul 15, 2023 | 11:19 AM

Share

ಶಿವಮೊಗ್ಗ: ಎರಡು ಕಾರುಗಳು ಮತ್ತು ಖಾಸಗಿ ಬಸ್ ನಡುವೆ ಅಪಘಾತ (Accident) ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಐಗಿನಬೈಲು ಕ್ರಾಸ್ ಬಳಿ ನಡೆದಿದೆ. ಅಪಘಾತಕ್ಕೀಡಾದ ಮತ್ತೊಂದು ಕಾರಿನಲ್ಲಿ ದನದ ಮಾಂಸ ಪತ್ತೆಯಾಗಿದ್ದು, ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಹೈಕೋರ್ಟ್ ನ್ಯಾಯಾಧೀಶರು ಹಾಗೂ ಶಿವಮೊಗ್ಗ ನ್ಯಾಯಾಧೀಶರು ಪ್ರತ್ಯೇಕ ಕಾರುಗಳಲ್ಲಿ ಸಿಗಂದೂರು ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದರು. ಹೈಕೋರ್ಟ್ ಜಡ್ಜ್ ಕಾರ್ ಮೊದಲು ಮುಂದೆ ಹೋಗಿದೆ. ಇದರ ಹಿಂದಿನಿಂದ ಹೋಗುತ್ತಿದ್ದ ಶಿವಮೊಗ್ಗ ಕೋರ್ಟ್​​ ನ್ಯಾಯಾಧೀಶರ ಕಾರಿಗೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಭೀಕರ ಸರಣಿ ಅಪಘಾತ; ಓರ್ವ ಮಹಿಳೆ ಸಾವು

ನ್ಯಾಯಾಧೀಶರ ಹಿಂಬದಿಯಿಂದ ಬಂದ ಮತ್ತೊಂದು ಕಾರು ಕೂಡ ಅಪಘಾತಕ್ಕೀಡಾಗಿದೆ. ಆದರೆ ಈ ಕಾರಿನಲ್ಲಿ 50 ಕೆಜಿ ದನದ ಮಾಂಸ ಪತ್ತೆಯಾಗಿದ್ದು, ಶಿವಮೊಗ್ಗದಿಂದ ಸಾಗರಕ್ಕೆ ಇದನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತ ಬಳಿಕ ದನದ ಮಾಂಸ ಇದ್ದ ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಆನಂದಪುರ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?