AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ: ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

ಅಪ್ರಾಪ್ತ ಬಾಲಕಿಗೆ ಲೈಂಗಿಕ‌ ಕಿರುಕುಳ ನೀಡಿದ್ದ 27 ವರ್ಷದ ಯುವಕನಿಗೆ 20 ವರ್ಷ ಕಠಿಣಶಿಕ್ಷೆ ಹಾಗೂ ₹1.50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ: ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Aug 07, 2023 | 11:54 AM

ಶಿವಮೊಗ್ಗ, ಆ.07: ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ‌ ಕಿರುಕುಳ ನೀಡಿದ್ದ 27 ವರ್ಷದ ಯುವಕನಿಗೆ 20 ವರ್ಷ ಕಠಿಣಶಿಕ್ಷೆ ಹಾಗೂ ₹1.50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ. ಹಾಗೂ ದಂಡದ ಹಣ ಕಟ್ಟಲು ವಿಫಲವಾದರೆ ಹೆಚ್ಚುವರಿ 9 ತಿಂಗಳು ಸಾದಾ ಶಿಕ್ಷೆ ನೀಡಲು ತಿಳಿಸಿದೆ.

2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ‌ ಕಿರುಕುಳ ನೀಡಿದ್ದ ಆರೋಪ ಯುವಕನ ಮೇಲೆ ಕೇಳಿ ಬಂದಿತ್ತು. ಈ ಸಂಬಂಧ ಬಾಲಕಿಯ ತಂದೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 1 ಲಕ್ಷದ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ‌.

ಇದನ್ನೂ ಓದಿ: ಪತ್ನಿಗೆ ಅಧ್ಯಕ್ಷ ಪಟ್ಟ ಕಟ್ಟಲು ಸದಸ್ಯರ ಹೈಜಾಕ್: ಸುತ್ತಾಡಿ ವಾಪಾಸ್ ಬರುವಾಗ ಅಪಘಾತ, ಇಬ್ಬರ ಸಾವು

ದೇವಸ್ಥಾನದಲ್ಲಿ ನಾಗರ ಹಾವು ಪ್ರತ್ಯಕ್ಷ

ಗದಗ ತಾಲೂಕಿನ ಚಿಂಚಲಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿದೆ. ನಾಗರ ಹಾವು ಕಂಡು ಭಕ್ತರು ಭಯ ಭೀತರಾಗಿದ್ದಾರೆ. ಸೋಮವಾರ ಇರುವ ಕಾರಣ ಪೂಜೆ ಸಲ್ಲಿಸಲು ಆಗಮಿಸಿದ ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ. ಬಸವೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದ ನಾಗರ ಹಾವು ರಕ್ಷಣೆ ಮಾಡಲಾಗಿದೆ. ಉರಗ ತಜ್ಞ ಸುರೇಶ್ ಅವರು ನಾಗರ ಹಾವನ್ನು ರಕ್ಷಿಸಿದ್ದಾರೆ. ನಾಗರ ಹಾವು ಹಿಡಿದು ಗುಡ್ಡಗಾಡು ಪ್ರದೇಶಕ್ಕೆ ಬಿಟ್ಟು ಬರಲಾಯಿತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ