AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಾವತಿ ಹಿನ್ನೀರಿನ ಮಟ್ಟ ಇಳಿಕೆ: ಜೂನ್​ 14ರಿಂದ ಸಿಗಂದೂರು ಲಾಚ್​ನಲ್ಲಿ ವಾಹನಗಳಿಲ್ಲ ಪ್ರವೇಶ

ಶರಾವತಿಯ ಹಿನ್ನೀರಿನ ಮಟ್ಟ ಇಳಿಕೆಯಾಗಿದೆ. ಹಾಗಾಗಿ ಮುಂಜಾಗ್ರತ ಕ್ರಮವಾಗಿ ಜೂನ್​ 14ರಿಂದ ಸಿಗಂದೂರು ಲಾಚ್​ನಲ್ಲಿ ಬಸ್​, ಕಾರು ಸೇರಿದಂತೆ ಇತರೆ ವಾಹನ ಸಾಗಣೆ ನಿಲ್ಲಿಸಲಾಗುತ್ತಿದೆ.

ಶರಾವತಿ ಹಿನ್ನೀರಿನ ಮಟ್ಟ ಇಳಿಕೆ: ಜೂನ್​ 14ರಿಂದ ಸಿಗಂದೂರು ಲಾಚ್​ನಲ್ಲಿ ವಾಹನಗಳಿಲ್ಲ ಪ್ರವೇಶ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 13, 2023 | 8:47 PM

Share

ಶಿವಮೊಗ್ಗ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಾಗರದ ಸಿಗಂದೂರು ಚೌಡೇಶ್ವರಿಗೆ (Sigandur Chowdeshwari) ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಾರೆ. ಆದರೆ ಇನ್ನು ಮುಂದೆ ಭಕ್ತರಿಗೆ ಬರಲು ಕಷ್ಟವಾಗು ಸಾಧ್ಯತೆ ಇದೆ. ಇದಕ್ಕೆ ಕಾರಣ ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಪರಿಣಾಮ ಶರಾವತಿ ಹಿನ್ನೀರಿನ ಮಟ್ಟ ಇಳಿಕೆಯಾಗಿದೆ. ಹಾಗಾಗಿ ಮುಂಜಾಗ್ರತ ಕ್ರಮವಾಗಿ ಜೂನ್​ 14ರಿಂದ ಸಿಗಂದೂರು ಲಾಚ್​ನಲ್ಲಿ ಬಸ್​, ಕಾರು ಸೇರಿದಂತೆ ಇತರೆ ವಾಹನ ಸಾಗಣೆ ನಿಲ್ಲಿಸಲಾಗುತ್ತಿದೆ.

ವಾಹನಗಳನ್ನು ಹತ್ತಿಸಿದರೆ ದಡದ ಕೆಸರಿನಲ್ಲಿ ಲಾಂಚ್​ ಸಿಕ್ಕಿ ಬೀಳ್ಳುವ ಸಾಧ್ಯತೆ ಇದೆ. ಹಾಗಾಗಿ ಜನರನ್ನು ಮಾತ್ರ ಲಾಂಚ್​ಗೆ ಹತ್ತಿಸಲು ನಿರ್ಧರಿಸಲಾಗಿದೆ. ಶರಾವತಿ ಹಿನ್ನೀರಿನಲ್ಲಿ ನೀರು ಕಡಿಮೆ ಆದ ಕಾರಣ ಲಾಂಚ್ ಸಂಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಮುಂಗಾರು ಆರಂಭವಾಗದಿದ್ದರೆ ಲಾಂಚ್​​ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸುವ ಸಾಧ್ಯತೆಗಳು ಇದೆ. ಸ್ಥಳೀಯರ ಸಂಚಾರ ದೃಷ್ಟಿಯಿಂದ ಸಣ್ಣ ಲಾಂಚ್​ ಮತ್ತು ಬೋಟ್​​ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಶರಾವತಿ ಹಿನ್ನೀರಿನಲ್ಲಿ ಸಂಕ್ರಮಣದ ದಿನ ಸಿಗಂದೂರು ಚೌಡೇಶ್ವರಿ ಅದ್ಧೂರಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು, ಚಿತ್ರಗಳಲ್ಲಿ ಕಣ್ತುಂಬಿಕೊಳ್ಳಿ

ಪ್ರವಾಸಿಗರಿಗೆ ತೀವ್ರ ತೊಂದರೆ ಸಾಧ್ಯತೆ

ಈ ಲಾಂಚ್ ಸ್ಥಗಿತಗೊಂಡರೆ ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬರುವ ಪ್ರವಾಸಿಗರಿಗೆ ತೀವ್ರ ತೊಂದರೆ ಆಗಲಿದ್ದು, ಸುತ್ತಿ ಬಳಸಿ, ದೇವಸ್ಥಾನಕ್ಕೆ ಹೋಗಬೇಕಾದ ಅನಿವಾರ್ಯತೆ ಉಂಟಾಗಲಿದೆ. ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು, ತುಮರಿ, ಬ್ಯಾಕೋಡು, ಕಟ್ಟಿನಕಾರು ಭಾಗದ ಜನರಿಗೆ ಈ ಲಾಂಚ್ ಸಂಪರ್ಕ ಕೊಂಡಿಯಾಗಿದೆ.

ಸಂಕ್ರಮಣಕ್ಕೆ ಅದ್ದೂರಿ ಜಾತ್ರೆ

ಪ್ರತಿ ವರ್ಷ ಸಂಕ್ರಮಣ ಮತ್ತು ಅದರ ಮರುದಿನ ಎರಡು ದಿನ ಸಿಗಂದೂರು ದೇವಿಯ ಅದ್ದೂರಿ ಜಾತ್ರೆಯು ನಡೆಯುತ್ತದೆ. ಶರಾವತಿಯ ಹಿನ್ನೀರಿನ ಲಾಂಚ್ ಮೂಲಕ ಸಾವಿರಾರು ಭಕ್ತರು ಬಂದು ದೇವಿಯ ದರ್ಶನ ಪಡೆಯುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್